Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಭ್ರಷ್ಟ ಅಧಿಕಾರಿಗಳಿಗೆ `ಲೋಕಾ’ ಶಾಕ್ – ಬೆಂಗಳೂರು ಸೇರಿ ರಾಜ್ಯದ 7 ಕಡೆ ಏಕಕಾಲಕ್ಕೆ ದಾಳಿ

Public TV
Last updated: January 31, 2025 9:41 pm
Public TV
Share
3 Min Read
Lokayukta 3
SHARE

– ನಿದ್ದೆ ಮಂಪರಿನಲ್ಲಿದ್ದ ಅಧಿಕಾರಿಗಳಿಗೆ `ಲೋಕಾ’ ರೇಡ್ ಬಿಸಿ

ಬೆಂಗಳೂರು/ಬೆಳಗಾವಿ/ಚಿತ್ರದುರ್ಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಹಿನ್ನೆಲೆ ಶುಕ್ರವಾರ (ಇಂದು) ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಮನೆ ಬಾಗಿಲು ಬಡಿದಿದ್ದರು. ಇನ್ನೂ ನಿದ್ದೆ ಮಂಪರಿನಲ್ಲಿದ್ದ ಭ್ರಷ್ಟ ಕುಳಗಳಿಗೆ ಶಾಕ್ ಕೊಟ್ಟಿದ್ದರು. ಬೆಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ದಾಳಿ (Lokayukta Raid) ನಡೆಸಲಾಯ್ತು. ಬೆಂಗಳೂರಿನಲ್ಲಿ (Bengaluru) ಎರಡು ಕಡೆ, ಬೆಳಗಾವಿಯಲ್ಲಿ (Belagavi) ಎರಡು ಕಡೆ, ಚಿತ್ರದುರ್ಗ, ರಾಯಚೂರು ಮತ್ತು ಬಾಗಕೋಟೆಯಲ್ಲಿ ತಲಾ ಒಂದು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದೆ. ಒಟ್ಟು 7 ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

Lokayukta

ಎಲ್ಲೆಲ್ಲಿ ದಾಳಿ?
ಮಾಧವರಾವ್, ಬಿಬಿಎಂಪಿ ಎಇಇ
ಸ್ಥಳ – ಬೆಂಗಳೂರು
ಬೆಂಗಳೂರಿನಲ್ಲಿ ಬಿಬಿಎಂಪಿ ಹೆಬ್ಬಾಳ ವ್ಯಾಪ್ತಿಯ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್‌ಗೆ ಲೋಕಾ ಬಿಸಿ ತಟ್ಟಿದೆ. ವಿದ್ಯಾರಣ್ಯಪುರಂನ ಎಂಎಸ್ ಪಾಳ್ಯದಲ್ಲಿರುವ ಮಾಧವ್ ರಾವ್‌ರ ಐಷಾರಾಮಿ ಮನೆ ನಿವಾಸದ ಮೇಲೆ ದಾಳಿ ನಡೆದಿದ್ದು.. ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನು ಮಾಧವ ರಾವ್ ನಿವಾಸದ ಮೇಲಿನ ದಾಳಿ ಬಗ್ಗೆ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಕೆಲವೊಂದು ಮಾಹಿತಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಧವ ರಾವ್ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಇತ್ತು. ಅಲ್ಲದೇ ಬೀದರ್ ವರ್ಕ್ ಆರ್ಡರ್ ಸಂಬಂಧ ಕೆಲವೊಂದು ದಾಖಲೆಗಳು ಸಿಕ್ಕಿವೆ. ಸಂಜೆ ವೇಳೆ ಎಲ್ಲ ದಾಖಲೆಗಳ ಖಚಿತ ಮಾಹಿತಿ ಸಿಗಲಿದೆ ಎಂದ್ರು.

Lokayukta 2

ರಮೇಶ್, ಜಿ.ಪಂ ಉಪ ಕಾರ್ಯದರ್ಶಿ
ಸ್ಥಳ – ಬೆಂಗಳೂರು
ಇನ್ನೂ ಬೆಂಗಳೂರಿನಲ್ಲಿ ಮತ್ತೊಬ್ಬ ಭ್ರಷ್ಟ ಅಧಿಕಾರಿ ಮೇಲೆ ಲೋಕಾ ದಾಳಿ ನಡೆದಿದೆ. ನಾಗರಬಾವಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಅಧಿಕಾರಿ ರಮೇಶ್ ನಿವಾಸದ ಮೇಲಿನ ದಾಳಿ ಬಗ್ಗೆ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಮಾಹಿತಿ ಪಡೆದುಕೊಂಡ್ರು. ಬಳಿಕ ಪ್ರತಿಕ್ರಿಯಿಸಿದ ಎಸ್‌ಪಿ ವಂಶಿಕೃಷ್ಣ, ಟಿಕೆ ರಮೇಶ್‌ಗೆ ಸಂಬಂಧಿಸಿದ 4 ಕಡೆ ದಾಳಿಯಾಗಿದೆ. ಹುಲಿಯೂರು ದುರ್ಗ ತೋಟದ ಮನೆ, ಕಚೇರಿ, ಮನೆ, ಸ್ಕೂಲ್‌ನಲ್ಲೂ ಪರಿಶೀಲನೆ ಮಾಡಲಾಗ್ತಿದೆ. ಆದಾಯಕ್ಕಿಂತ ಜಾಸ್ತಿ ಹಣ ಸಂಪಾದನೆ ಸಂಬಂಧ ಎಫ್‌ಐಆರ್ ದಾಖಲಿಸಿ ಶೋಧನೆ ಮಾಡಲಾಗುತ್ತಿದೆ. ಪ್ರತಿಯೊಂದು ಜಾಗದಲ್ಲೂ ಒಂದೊಂದು ಟೀಂ ಪರಿಶೀಲನೆ ಮಾಡ್ತಿದ್ದು, ಒಟ್ಟು 9 ತಂಡಗಳು ಬೇರೆ ಬೇರೆ ಸ್ಥಳದಲ್ಲಿ ಶೋಧ ನಡೆಸುತ್ತಿದೆ ಎಂದ್ರು.

ಸಚಿನ್ ಮಂಡೇದ್, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟಾçರ್
ಸ್ಥಳ – ಬೆಳಗಾವಿ
ಇನ್ನೂ ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟ್ರಾರ್‌ ಸಚಿನ್ ಮಂಡೇದ್‌ಗೆ ಸೇರಿದ ಬೆಳಗಾವಿ ನಗರದ ಅನಗೋಳದಲ್ಲಿರುವ ನಿವಾಸ, ಕಚೇರಿ ಸೇರಿ ಒಟ್ಟು ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಸಂಜಯ್, ಹಾರೂಗೇರಿ ಪಶುವೈದ್ಯ
ಸ್ಥಳ – ಬೆಳಗಾವಿ
ಮತ್ತೊಂದ್ಕಡೆ ಹಾರೂಗೇರಿ ಪಶುವೈದ್ಯ ಸಂಜಯ್‌ಗೆ ಸೇರಿದ ಮನೆ ಮೇಲೂ ದಾಳಿ ನಡೆಸಲಾಗಿದೆ. ಅದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು.. ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಶಶಿಧರ್, ಬಿಸಿಎಂ ವಿಸ್ತರಣಾಧಿಕಾರಿ
ಸ್ಥಳ – ಚಿತ್ರದುರ್ಗ
ಇನ್ನು ಚಿತ್ರದುರ್ಗದ ಬಿಸಿಎಂ ಇಲಾಖೆ ವ್ಯವಸ್ಥಾಪಕ ಶಶಿಧರ್ ಮನೆ ಮೇಲೆ ಲೋಕಾಯಕ್ತ ದಿಢೀರ್ ದಾಳಿ ನಡೆಸಿದ್ದಾರೆ. ಅಪಾರ ಆಸ್ತಿ ಗಳಿಕೆ ಮತ್ತು ಲಂಚದ ಆರೋಪ ಕೇಳಿ ಬಂದ ಹಿನ್ನೆಲೆ ಹೊಳಲ್ಕೆರೆ ತಾಲ್ಲೂಕಿನ ಕಡ್ಲೆಪ್ಪನಹಟ್ಟಿ ಗ್ರಾಮದಲ್ಲಿನ ಶಶಿಧರ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಹಾಗು ಡಿವೈಎಸ್‌ಪಿ ಮೃತ್ಯುಂಜಯ ನೇತೃತ್ವದಲ್ಲಿ ಏಕಕಾಲದಲ್ಲಿ ನಾಲ್ಕು ಕಡೆ ರೇಡ್ ಮಾಡಲಾಗಿದೆ. ಈ ವೇಳೆ ಕಡ್ಲೆಪ್ಪನಹಟ್ಟಿ ಗ್ರಾಮದಲ್ಲಿರುವ ತೋಟದ ಮನೆ, ಹೊಸದುರ್ಗ ಪಟ್ಟಣದಲ್ಲಿನ ಸಹೋದರನಿಗೆ ಸೇರಿದ ಎಸ್ ಆರ್ ಎಂಟರ್‌ಪ್ರೈಸಸ್‌ ಮಳಿಗೆ, ಹೊಸದುರ್ಗದ ವಿದ್ಯಾನಗರದಲ್ಲಿರುವ ಬಾಡಿಗೆ ಮನೆ ಹಾಗು ಶಶಿಧರ್ ಕರ್ತವ್ಯ ನಿರ್ವಹಿಸುವ ಬಿಸಿಎಂ ಕಚೇರಿಯ ಕೊಠಡಿ ಮೇಲೂ ಲೋಕಾಯಕ್ತರು ದಾಳಿ ನಡೆಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಹಿರೇಮಠ್, ಹೂಲಗೇರಿ ಗ್ರಾ.ಪಂ ಪಿಡಿಓ
ಸ್ಥಳ – ಬಾಗಲಕೋಟೆ
ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆ ಹೂಲಗೇರಿ ಗ್ರಾಪಂ ಪಿಡಿಓ ಹಿರೇಮಠ್‌ಗೆ ಲೋಕಾ ಬಿಸಿ ಮುಟ್ಟಿಸಿದೆ. ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್‌ನಲ್ಲಿರುವ ಮನೆ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿದ್ದು.. ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.

ನರಸಿಂಗ್‌ರಾವ್ ಗುಜ್ಜರ್, ಜಿ.ಪಂ ಲೆಕ್ಕಪತ್ರ ಸಹಾಯಕ ಅಧಿಕಾರಿ
ಸ್ಥಳ – ರಾಯಚೂರು
ರಾಯಚೂರು ಜಿಲ್ಲಾ ಪಂಚಾಯ್ತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್ ಮನೆ ಹಾಗೂ ಜಿಲ್ಲಾ ಪಂಚಾಯ್ತಿ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ರಾಯಚೂರು ನಗರದ ದೇವರ ಕಾಲೋನಿಯಲ್ಲಿನ ಮನೆ ಮೇಲೆ ರಾಯಚೂರು ಹಾಗೂ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರೇಡ್ ನಡೆದಿದ್ದು.. ದಾಖಲೆಗಳ ಪರಿಶೀಲನೆ ನಡೆದಿದೆ.

TAGGED:bbmpbelagavibengaluruillegal propertylokayuktalokayukta raidಅಕ್ರಮ ಆಸ್ತಿಬಿಬಿಎಂಪಿಬೆಂಗಳೂರುಬೆಳಗಾವಿಲೋಕಾಯುಕ್ತಲೋಕಾಯುಕ್ತ ದಾಳಿ
Share This Article
Facebook Whatsapp Whatsapp Telegram

You Might Also Like

kea
Bengaluru City

ಎಂಬಿಎ, ಎಂಸಿಎ ಪ್ರವೇಶಕ್ಕೆ ಭಾನುವಾರ ಪರೀಕ್ಷೆ- ಸಿದ್ಧತೆ ಪೂರ್ಣ: ಕೆಇಎ

Public TV
By Public TV
16 minutes ago
Kamalanagar PDO bribe
Bidar

ಹಣ ಪಡೆದಿದ್ದು ನಿಜ, ಅದು ಟ್ಯಾಕ್ಸ್, ಅಭಿವೃದ್ಧಿ ಹಣ: ಲಂಚ ಆರೋಪಕ್ಕೆ ಕಮಲನಗರ ಪಿಡಿಓ ಸ್ಪಷ್ಟನೆ

Public TV
By Public TV
39 minutes ago
sandhya pavithra nagaraj
Crime

ಹೆಲ್ಪ್‌ಲೈನ್‌ ಹೆಸರಲ್ಲಿ ವಂಚನೆ ಆರೋಪ – ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ ಎಫ್‌ಐಆರ್

Public TV
By Public TV
1 hour ago
Ayatollah Ali Khameneii
Latest

ಬಂಕರ್‌ನಿಂದಲೇ ಸಂಭಾವ್ಯ ಉತ್ತರಾಧಿಕಾರಿಗಳ ಹೆಸರನ್ನು ಸೂಚಿಸಿದ ಖಮೇನಿ

Public TV
By Public TV
2 hours ago
rishabh pant 1
Cricket

41 ರನ್‌ಗಳಿಗೆ 7 ವಿಕೆಟ್‌ ಪತನ – 500 ರನ್‌ ಗಡಿಯಲ್ಲಿ ಭಾರತಕ್ಕೆ ಬಿಗ್‌ ಶಾಕ್‌!

Public TV
By Public TV
2 hours ago
Hubballi Girl Died
Crime

ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಬಾಲಕಿ ಸಾವು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?