ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ಬೀದರ್, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೀದರ್ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಸುನೀಲ್ ಕುಮಾರ್ ಚಂದ್ರಪ್ರಭಾ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಇವರು ಕಲಬುರ್ಗಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜನಿಯರ್ ವಿಭಾಗದಲ್ಲಿ ಕಾರ್ಯ ನಿರ್ವಾಹಕ ಅಭಿಯಂತರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಕೆಜಿಎಫ್ ಬಾಬುಗೆ ಆರ್ಟಿಓ ಶಾಕ್ – ಬಿಗ್ ಬಿ, ಆಮೀರ್ ಖಾನ್ರಿಂದ ಖರೀದಿಸಿದ್ದ ಐಷಾರಾಮಿ ಕಾರು ಜಪ್ತಿ?
ಬೀದರ್ ನಗರದ ಜೈಲ್ ಕಾಲೋನಿಯ ಎಸ್ಬಿಪಿ ನಗರದ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ತಂಡ ದಾಖಲೆಗಳ ತೀವ್ರ ಪರಿಶೀಲನೆ ಮಾಡುತ್ತಿದೆ. ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ ಬಿ ಗ್ರಾಮದ ನಿವಾಸಿಯಾಗಿದ್ದು, ಸದ್ಯ ಕಲಬುರ್ಗಿಯಲ್ಲಿ ಕರ್ತವ್ಯ ಮಾಡುತ್ತಿದ್ದಾರೆ. ಹೀಗಾಗಿ, ಕಲಬುರ್ಗಿಯ ಆರೋಗ್ಯ ಇಲಾಖೆಯ ಕಚೇರಿ ಹಾಗೂ ನಿವಾಸದ ಮೇಲೂ ದಾಳಿ ಮಾಡಲಾಗಿದೆ.
ತುಮಕೂರಿನಲ್ಲಿ ಕೆಐಡಿಬಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಇಇ ರಾಜೇಶ್ ಕಚೇರಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ತಿಂಗಳ ಹಿಂದಷ್ಟೇ ತುಮಕೂರಿನ ಕೆಐಎಡಿಬಿ ಕಚೇರಿಗೆ ರಾಜೇಶ್ ಬಂದಿದ್ದರು. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಇಂದು ಮತ್ತೆ ವಿಚಾರಣೆ, FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್
ಕೊಪ್ಪಳದಲ್ಲಿ ಎರಡು ಕಡೆ ದಾಳಿ ಲೋಕಾ ಅಧಿಕಾರಿಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಶೇಕು ಚೌಹಾಣ್ಗೆ ಸೇರಿದ ಎರಡು ಮನೆ, ಅಭಿಷೇಕ್ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಮನೆಗಳ ಮೇಲೆ ದಾಳಿ ನಡೆದಿದೆ.
ಬಳ್ಳಾರಿಯ ಸ್ವಗ್ರಾಮ ಕಲ್ಲುಕಂಬದ ಮನೆಯಲ್ಲಿ ಕೆಲ ದಾಖಲೆಗಳ ಪರಿಶೀಲನೆ ನಡೆದಿದೆ. ಬೆಂಗಳೂರು ಟೌನ್ ಆ್ಯಂಡ್ ರೂರಲ್ ಪ್ಲಾಬಿಂಗ್ ಆಫೀಸರ್ ಆಗಿರುವ ಮಾರುತಿ ಬಗಲಿ ಮೂಲತಃ ಬಳ್ಳಾರಿಯ ಕಲ್ಲುಕಂಬ ನಿವಾಸಿ. ಬಳ್ಳಾರಿ ಮಾತ್ರವಲ್ಲದೇ ರಾಜ್ಯದ ವಿವಿಧ ಕಡೆ ಮಾರುತಿ ಬಗಲಿ ಅಕ್ರಮ ಆಸ್ತಿ ಮಾಡಿದ್ದಾರೆಂಬ ಆರೋಪವಿದೆ.
ಕೊಪ್ಪಳದ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಆ್ಯಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಶೆಕು ಚೌಹಾಣ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಆದಾಯ ಮೀರಿ ಆಸ್ತಿ ಮಾಡಿದ್ದ ಆರೋಪ ಇವರ ಮೇಲಿತ್ತು. ಇದನ್ನೂ ಓದಿ: ಮಂಡ್ಯದಲ್ಲಿ ಮೊಟ್ಟೆ ವಿವಾದ – ಮೊಟ್ಟೆ ಕೊಟ್ರೆ ಮಕ್ಕಳನ್ನ ಶಾಲೆಗೆ ಕಳ್ಸಲ್ಲ ಎಂದ ಪೋಷಕರು
ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೂ ಲೋಕಾ ದಾಳಿಯಾಗಿದೆ. ಮೈಸೂರು ಮಹಾನಗರ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್, ಕೌಶಲ್ಯಾಭಿವೃದ್ದಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ನಿವಾಸದಲ್ಲಿ ದಾಖಲೆ ಪರಿಶೀಲಿಸಲಾಗುತ್ತಿದೆ.