Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

Bagalkot

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

Public TV
Last updated: May 31, 2025 10:18 am
Public TV
Share
3 Min Read
Lokayukta Raid 2
SHARE

ಬೆಳಗಾವಿ/ಬಾಗಲಕೋಟೆ/ಬಳ್ಳಾರಿ: ರಾಜ್ಯದ ಏಳು ಜಿಲ್ಲೆಗಳಲ್ಲಿಂದು ಲೋಕಾಯುಕ್ತ ಅಧಿಕಾರಿಗಳ ತಂಡ ಏಕಾಏಕಿ ದಾಳಿ (Lokayukta Raid) ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದೆ.

ಬೆಳಗಾವಿ (Belagavi), ಬಾಗಲಕೋಟೆ, ಬಳ್ಳಾರಿ ದಾವಣಗೆರೆ (Davanagere), ಉಡುಪಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಇದನ್ನೂ ಓದಿ: ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Lokayukta Raid 3

ಬೆಳಗಾವಿ ಸುವರ್ಣ ಸೌಧದ ದೇವರಾಜ್ ಅರಸು ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್‌ಡಿಎ ಶೈಲ ಸುಭಾಷ್ ತತ್ರಾಣಿ, ಬಳ್ಳಾರಿಯ ಕಾರ್ಯಪಾಲಕ ಎಂಜಿನಿಯರ್ ಅಮೀನ್ ಮುಕ್ತಾರ್ ಅಹಮದ್, ದಾವಣಗೆರೆಯ ಶಿಗ್ಗಾಂವಿ ಪಂಚಾಯಿತಿ ಪಿಡಿಓ (PDO) ರಾಮಕೃಷ್ಣ, ಉಡುಪಿ ಜಿಲ್ಲೆ ಕಾರ್ಕಳದ ಮೆಸ್ಕಾಂ ಅಕೌಂಟೆಂಟ್‌ ಗಿರೀಶ್‌ ರಾವ್‌, ಗದಗದ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ, ಧಾರವಾಡದ ಪಿಡಬ್ಲುಡಿ ಮುಖ್ಯ ಇಂಜಿನಿಯರ್ ಹೆಚ್.ಸುರೇಶ್ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಗದಗ:
ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಮನೆ ಗಂಗಾಧರ ಶಿರೋಳ ಅವರ ಮನೆ, ಕಚೇರಿ ಹಾಗೂ ಅಳಿಯ, ಭಾವನ ಮನೆಗಳು ಸೇರಿ 6 ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಗದಗ ನಗರದ ಅಳಿಯ ವಿಜಯ ಯಳಮೇಲಿ, ಭಾವ ನಾಗರಾಜ್ ಅಕ್ಕಿ ಮನೆ, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಂಬಧಿಕರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹಣಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ, ವಾಹನಗಳು, ಆಸ್ತಿಪತ್ರಗಳು ದೊರೆತಿದ್ದು ಶೋಧ ಕಾರ್ಯ ಮುಂದುವರಿದಿದೆ.

Lokayukta Raid

ಕಲಬುರಗಿ:
ಕಲಬುರಗಿ ನಗರದ ಹುಸೇನಿ ಗಾರ್ಡನ್ ಬಡಾವಣೆಯಲ್ಲಿರುವ ಬಳ್ಳಾರಿ ಲೋಕೋಪಯೋಗಿ ಇಲಾಖೆಯ ಸರ್ಕಲ್ ಆಫೀಸ್ ಅಧೀಕ್ಷಕ ಇಂಜಿನಿಯರ್ ಅಮೀನ್‌ ಮುಕ್ತಾರ್ ನಿವಾಸದ ಮೇಲೆ ಇಂದು ನಸುಕಿನಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ಮೂಲದವರೇ ಆಗಿರುವ ಅಮೀನ್ ಮುಕ್ತಾರ್ ಈ ಹಿಂದೆ ಇದೇ ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಸಹ ಸೇವೆ ಸಲ್ಲಿಸಿದ್ದಾರೆ. ಇಂದು ನಸುಕಿನಲ್ಲಿ ಮನೆಯ ಬಾಗಿಲು ತಟ್ಟಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದಯವರೆಸಿದ್ದು, ಅಮೀನ್ ಅವರ ಸಹೋದರ ಡಾ.ಆರೀಫ್ ಅವರಿಗೆ ಸೇರಿದ ಏಷ್ಯನ್ ಲೈಫ್ ಸ್ಟೈಲ್ ಅಪಾರ್ಟ್‌ಮೆಂಟ್ ಮೇಲೆ ಸಹ ದಾಳಿ ನಡೆಸಿದ್ದಾರೆ. ಇದರ ಜೊತೆಗೆ, ಬಳ್ಳಾರಿ ಮತ್ತು ಬಸವಕಲ್ಯಾಣದಲ್ಲೂ ದಾಳಿ ನಡೆದಿದೆ. ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಆರೋಪದ ಅಡಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.  ಇದನ್ನೂ ಓದಿ: ಕೊಡಗು | ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಬಾಗಲಕೋಟೆ:
ಇಲ್ಲಿನ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್‌ಡಿಎ ಶ್ರೀಶೈಲ್ ತತ್ರಾಣಿ ಅವರ ಅಮೀನಗಢ ಪಟ್ಟಣದಲ್ಲಿರುವ ಮನೆ ಹಾಗೂ ಆಭರಣ ಮಳಿಗೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಾಗಲಕೋಟೆ ಲೋಕಾಯುಕ್ತ ಡಿಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

ಹಾವೇರಿ:
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮ ಪಂಚಾಯತಿ ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ. ಗ್ರಾಮ ಪಂಚಾಯತಿ ಪಿಡಿಓ ರಾಮಕೃಷ್ಷಪ್ಪ ಗುಡಗೇರಿ ಎಂಬ ಪಿಡಿಓ ಸಂಬಂಧಿಸಿದ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಧಾರವಾಡದ ಮನೆ ಮತ್ತು ಬಾಡ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಪೊಲೀಸ್ ಸಿಬ್ಬಂದಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

ಇದರೊಂದಿಗೆ ಬಳ್ಳಾರಿ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲೂ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ಅಕ್ರಮ ಆಸ್ತಿ ಹಾಗೂ ಮಹತ್ವದ ದಾಖಲೆಗಳು ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

TAGGED:BallaribelagaviKalaburagilokayuktalokayukta raidಕಲಬುರಗಿಬಳ್ಳಾರಿಬೆಳಗಾವಿಲೋಕಾಯುಕ್ತಲೋಕಾಯುಕ್ತ ದಾಳಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Chikkamagaluru 1
Chikkamagaluru

ಕಾಫಿನಾಡಲ್ಲಿ ಮಿತಿಮೀರಿದ ಹಾವಳಿ – ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

Public TV
By Public TV
15 minutes ago
Mallikarjun Kharge
Bengaluru City

ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ‌ ಪುನಾರಚನೆಗೆ 24‌ ಎಂಎಲ್‌ಸಿಗಳಿಂದ ಪತ್ರ

Public TV
By Public TV
24 minutes ago
Chickpet metro station
Bengaluru City

ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್‌ನಿಂದಾಗಿ 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

Public TV
By Public TV
29 minutes ago
Raichuru Crop Damage
Districts

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

Public TV
By Public TV
1 hour ago
donald trump
Latest

ನಾನು ಇಲ್ಲದೇ ಇದ್ದಿದ್ರೆ ಪಾಕ್‌ ಪ್ರಧಾನಿ ಸಾಯ್ತಿದ್ರು; ಭಾರತ-ಪಾಕ್‌ ನ್ಯೂಕ್ಲಿಯರ್‌ ವಾರ್‌ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್‌

Public TV
By Public TV
2 hours ago
Air Ambulance Crash
Latest

ಜಾರ್ಖಂಡ್‌ನಲ್ಲಿ ಏರ್ ಅಂಬುಲೆನ್ಸ್ ಪತನ – ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ, ಹವಾಮಾನ ರೇಡಾರ್ ಪರಿಶೀಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?