Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

Bagalkot

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

Public TV
Last updated: May 31, 2025 10:18 am
Public TV
Share
3 Min Read
Lokayukta Raid 2
SHARE

ಬೆಳಗಾವಿ/ಬಾಗಲಕೋಟೆ/ಬಳ್ಳಾರಿ: ರಾಜ್ಯದ ಏಳು ಜಿಲ್ಲೆಗಳಲ್ಲಿಂದು ಲೋಕಾಯುಕ್ತ ಅಧಿಕಾರಿಗಳ ತಂಡ ಏಕಾಏಕಿ ದಾಳಿ (Lokayukta Raid) ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬಿಸಿಮುಟ್ಟಿಸಿದೆ.

ಬೆಳಗಾವಿ (Belagavi), ಬಾಗಲಕೋಟೆ, ಬಳ್ಳಾರಿ ದಾವಣಗೆರೆ (Davanagere), ಉಡುಪಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಇದನ್ನೂ ಓದಿ: ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Lokayukta Raid 3

ಬೆಳಗಾವಿ ಸುವರ್ಣ ಸೌಧದ ದೇವರಾಜ್ ಅರಸು ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್‌ಡಿಎ ಶೈಲ ಸುಭಾಷ್ ತತ್ರಾಣಿ, ಬಳ್ಳಾರಿಯ ಕಾರ್ಯಪಾಲಕ ಎಂಜಿನಿಯರ್ ಅಮೀನ್ ಮುಕ್ತಾರ್ ಅಹಮದ್, ದಾವಣಗೆರೆಯ ಶಿಗ್ಗಾಂವಿ ಪಂಚಾಯಿತಿ ಪಿಡಿಓ (PDO) ರಾಮಕೃಷ್ಣ, ಉಡುಪಿ ಜಿಲ್ಲೆ ಕಾರ್ಕಳದ ಮೆಸ್ಕಾಂ ಅಕೌಂಟೆಂಟ್‌ ಗಿರೀಶ್‌ ರಾವ್‌, ಗದಗದ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ, ಧಾರವಾಡದ ಪಿಡಬ್ಲುಡಿ ಮುಖ್ಯ ಇಂಜಿನಿಯರ್ ಹೆಚ್.ಸುರೇಶ್ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಗದಗ:
ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಮನೆ ಗಂಗಾಧರ ಶಿರೋಳ ಅವರ ಮನೆ, ಕಚೇರಿ ಹಾಗೂ ಅಳಿಯ, ಭಾವನ ಮನೆಗಳು ಸೇರಿ 6 ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಗದಗ ನಗರದ ಅಳಿಯ ವಿಜಯ ಯಳಮೇಲಿ, ಭಾವ ನಾಗರಾಜ್ ಅಕ್ಕಿ ಮನೆ, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ಸಂಬಧಿಕರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹಣಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ, ವಾಹನಗಳು, ಆಸ್ತಿಪತ್ರಗಳು ದೊರೆತಿದ್ದು ಶೋಧ ಕಾರ್ಯ ಮುಂದುವರಿದಿದೆ.

Lokayukta Raid

ಕಲಬುರಗಿ:
ಕಲಬುರಗಿ ನಗರದ ಹುಸೇನಿ ಗಾರ್ಡನ್ ಬಡಾವಣೆಯಲ್ಲಿರುವ ಬಳ್ಳಾರಿ ಲೋಕೋಪಯೋಗಿ ಇಲಾಖೆಯ ಸರ್ಕಲ್ ಆಫೀಸ್ ಅಧೀಕ್ಷಕ ಇಂಜಿನಿಯರ್ ಅಮೀನ್‌ ಮುಕ್ತಾರ್ ನಿವಾಸದ ಮೇಲೆ ಇಂದು ನಸುಕಿನಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ಮೂಲದವರೇ ಆಗಿರುವ ಅಮೀನ್ ಮುಕ್ತಾರ್ ಈ ಹಿಂದೆ ಇದೇ ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಸಹ ಸೇವೆ ಸಲ್ಲಿಸಿದ್ದಾರೆ. ಇಂದು ನಸುಕಿನಲ್ಲಿ ಮನೆಯ ಬಾಗಿಲು ತಟ್ಟಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದಯವರೆಸಿದ್ದು, ಅಮೀನ್ ಅವರ ಸಹೋದರ ಡಾ.ಆರೀಫ್ ಅವರಿಗೆ ಸೇರಿದ ಏಷ್ಯನ್ ಲೈಫ್ ಸ್ಟೈಲ್ ಅಪಾರ್ಟ್‌ಮೆಂಟ್ ಮೇಲೆ ಸಹ ದಾಳಿ ನಡೆಸಿದ್ದಾರೆ. ಇದರ ಜೊತೆಗೆ, ಬಳ್ಳಾರಿ ಮತ್ತು ಬಸವಕಲ್ಯಾಣದಲ್ಲೂ ದಾಳಿ ನಡೆದಿದೆ. ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಆರೋಪದ ಅಡಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.  ಇದನ್ನೂ ಓದಿ: ಕೊಡಗು | ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಬಾಗಲಕೋಟೆ:
ಇಲ್ಲಿನ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್‌ಡಿಎ ಶ್ರೀಶೈಲ್ ತತ್ರಾಣಿ ಅವರ ಅಮೀನಗಢ ಪಟ್ಟಣದಲ್ಲಿರುವ ಮನೆ ಹಾಗೂ ಆಭರಣ ಮಳಿಗೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬಾಗಲಕೋಟೆ ಲೋಕಾಯುಕ್ತ ಡಿಎಸ್‌ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

ಹಾವೇರಿ:
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮ ಪಂಚಾಯತಿ ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ. ಗ್ರಾಮ ಪಂಚಾಯತಿ ಪಿಡಿಓ ರಾಮಕೃಷ್ಷಪ್ಪ ಗುಡಗೇರಿ ಎಂಬ ಪಿಡಿಓ ಸಂಬಂಧಿಸಿದ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಧಾರವಾಡದ ಮನೆ ಮತ್ತು ಬಾಡ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಪೊಲೀಸ್ ಸಿಬ್ಬಂದಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

ಇದರೊಂದಿಗೆ ಬಳ್ಳಾರಿ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲೂ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ಅಕ್ರಮ ಆಸ್ತಿ ಹಾಗೂ ಮಹತ್ವದ ದಾಖಲೆಗಳು ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

TAGGED:BallaribelagaviKalaburagilokayuktalokayukta raidಕಲಬುರಗಿಬಳ್ಳಾರಿಬೆಳಗಾವಿಲೋಕಾಯುಕ್ತಲೋಕಾಯುಕ್ತ ದಾಳಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
3 minutes ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
20 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
38 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
1 hour ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?