Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

ನಾನು ಹಿಂದೂ ಧರ್ಮದ ʼಶಕ್ತಿʼಯ ಉಪಾಸಕ- ರಾಗಾ ವಿರುದ್ಧ ಮೋದಿ ವಾಗ್ದಾಳಿ

Public TV
Last updated: March 19, 2024 6:34 pm
Public TV
Share
3 Min Read
NARENDRA MODI 4
SHARE

– ಡಿಕೆ ಸುರೇಶ್‌ ವಿರುದ್ಧ ಪ್ರಧಾನಿ ಕಿಡಿ
– ಕರ್ನಾಟಕದಲ್ಲಿ ಮೂವರು ಸಿಎಂಗಳಿದ್ದಾರೆ

ಶಿವಮೊಗ್ಗ: ನಾನು ಹಿಂದೂ ಧರ್ಮದ ಶಕ್ತಿಯ ಉಪಾಸಕ. ಹಿಂದೂ ಶಕ್ತಿ ಮುಗಿಸಲು ಕೆಲವರು ಹುನ್ನಾರ ಮಾಡುತ್ತಿದ್ದಾರೆ. ಕರ್ನಾಟಕ ಅಂದ್ರೆ ಮಂತ್ರ ಕಣಾ, ಶಕ್ತಿ ಕಣಾ, ತಾಯಿ ಕಣಾ, ದೇವಿ ಕಣಾ ಎಂದು ಕುವೆಂಪು ಕಾವ್ಯದ ಸಾಲುಗಳನ್ನು ಉಲ್ಲೇಖಿಸಿ ಕೈ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಪ್ರದಾನಿ ನರೇಂದ್ರ ಮೋದಿ (Narendra Modi)  ವಾಗ್ದಾಳಿ ನಡೆಸಿದರು.

ಶಿವಮೊಗ್ಗ (Modi In Shivamogga) ಸಮಾವೇಶದಲ್ಲಿ ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸುತ್ತಾ ಮಾತು ಆರಂಭಿಸಿದ ಮೋದಿ, ಮೊದಲು ಬಿ.ಎಸ್‌ ಯಡಿಯೂರಪ್ಪ (BS Yediyurappa) ಅವರನ್ನು ಗುಣಗಾನ ಮಾಡಿದರು. ಮತ್ತೆ 400 ಸೀಟು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಜೂನ್‌ 4 ರಂದು ಎನ್‌ಡಿಎ ಒಕ್ಕೂಟ 400ರ ಗಡಿ ದಾಟಲಿದೆ ಎಂದು ಹೇಳಿದರು.

ಅಭಿವೃದ್ಧಿಶೀಲ ಭಾರತಕ್ಕಾಗಿ ನರೇಂದ್ರ ಮೋದಿಗೆ ಮತ ನೀಡಿ. ಭ್ರಷ್ಟಾಚಾರ ನಿರ್ಮೂಲನೆಗಾಗಿ ನಮಗೆ 400 ಸೀಟು ಕೊಡಿ. ನನ್ನ ದೇಹದ ಕಣಕಣವೂ ಜನಸೇವೆಗೆ ಮೀಸಲು. ನಾನು ಹಿಂದೂ ಧರ್ಮದ ಶಕ್ತಿಯ ಉಪಾಸಕ. ಹಿಂದೂ ಶಕ್ತಿ ಮುಗಿಸಲು ಕೆಲವರು ಹುನ್ನಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇವಿಎಂ, ಇಡಿ, ಸಿಬಿಐ, ಐಟಿ ಇಲಾಖೆಯಲ್ಲಿ ರಾಜನ ಆತ್ಮ ನೆಲೆಸಿದೆ- ಮೋದಿ ವಿರುದ್ಧ ರಾಗಾ ವಾಗ್ದಾಳಿ

ದೇಶಕ್ಕೆ ಮಹಿಳೆಯರೇ ಶಕ್ತಿ: ಕೆಲವರು ಹಿಂದೂ ಸಮಾಜದ ವಿರುದ್ಧ ಇದ್ದಾರೆ. ಕರ್ನಾಟಕದಲ್ಲಿ ಬಿಜೆಪಿ-ಎನ್ ಡಿಎ ಬೆಂಬಲಿಸಬೇಕು. ಹಿಂದೂ ಶಕ್ತಿಯನ್ನು ಮುಗಿಸಬೇಕು ಎಂದುಕೊಂಡಿದ್ದಾರೆ. ಹಿಂದೂ ಸಮಾಜದಲ್ಲಿ‌ ಶಕ್ತಿ ಇದೆ ಅದನ್ನು ಮುಗಿಸಲು ಸಾಧ್ಯವಿಲ್ಲ. ಹಿಂದೂ ಸಮಾಜದಲ್ಲಿ ಶಕ್ತಿ ದೇವತೆ ಪೂಜಿಸುತ್ತೇವೆ. ನಾರಿ ಶಕ್ತಿ ಬಹುದೊಡ್ಡ ಶಕ್ತಿಯಾಗಿದೆ. ಅದೇ ನನ್ನ ರಕ್ಷಣೆಯಾಗಿದೆ. ನಮ್ಮ ಸರ್ಕಾರದಲ್ಲಿ ನಾರಿಶಕ್ತಿಗೆ ಹೆಚ್ಚಿನ ಪ್ರಾತಿನಿಧ್ಯ ಇದೆ. ನಮ್ಮ ಆದ್ಯತೆಯ ಫಲವಾಗಿ ಇಂದು ಮಹಿಳೆಯರು ಸ್ವಾವಲಂಬಿಗಳಾಗುತ್ತಿದ್ದಾರೆ. ಬೇರೆ ಯಾವ ಸರ್ಕಾರದಲ್ಲಿಯೂ ಇಷ್ಟೊಂದು ಮಹತ್ವ ಇರಲಿಲ್ಲ. ದೇಶಕ್ಕೆ ಮಹಿಳಯರೇ ಶಕ್ತಿ. ಮಹಿಳೆಯರಿಂದಲೇ ಭಾರತ ವಿಕಸಿತ. ಭಾರತ ಮಾತೆಯ ಶಕ್ತಿ ಕಣ್ಣು ಕುಕ್ಕುತ್ತಿದೆ. ನನಗೆ ನಾರಿ ಶಕ್ತಿ, ಅಮ್ಮನ ಆಶೀರ್ವಾದ ಇದೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ: ಕಾಂಗ್ರೆಸ್‌ (Congress) ಸರ್ಕಾರ ಬರೀ ಸುಳ್ಳು ಹೇಳುವುದರಲ್ಲಿಯೇ ನಿರತವಾಗಿದೆ. ಪ್ರತೀ ಚುನಾವಣೆಯಲ್ಲಿಯೂ ಸುಳ್ಳುಗಳನ್ನು ಹೇಳುವುದೇ ಕಾಂಗ್ರೆಸ್‌ ಕೆಲಸವಾಗಿದೆ. ಮಾತು ಮಾತಿಗೂ ಸುಳ್ಳು ಹೇಳುವುದೇ ಅವರ ಅಜೆಂಡಾ ಆಗಿದೆ. ತನ್ನ ವೈಫಲ್ಯಗಳನ್ನು ಮುಚ್ಚಲು ಕಾಂಗ್ರೆಸ್‌ ಸುಳ್ಳು ಹೇಳುತ್ತಲೇ ಬರುತ್ತಿದೆ. ಅವರಲ್ಲಿ ವಿಕಾಸದ ಅಜೆಂಡಾ ಇಲ್ಲ. ಒಂದು ಸುಳ್ಳು ಮರೆಮಾಚಲು ಮತ್ತೊಂದು ಸುಳ್ಳನ್ನು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ಮೋದಿ ಕಿಡಿಕಾರಿದರು.

ಸಿಎಂ, ಡಿಸಿಎಂ ವಿರುದ್ಧವೂ ಟೀಕೆ: ಕರ್ನಾಟಕದಲ್ಲಿ ಮೂವರು ಸಿಎಂಗಳಿದ್ದಾರೆ. ಅವರಲ್ಲಿ ಒಬ್ಬರು ಫ್ಯೂಚರ್‌ ಸಿಎಂ, ಇನ್ನೊಬ್ಬರು ಶ್ಯಾಡೋ ಸಿಎಂ ಮತ್ತೊಬ್ಬರು ಸೂಪರ್‌ ಸಿಎಂ ಎಂದು ಹೇಳುವ ಮೂಲಕ ಮೋದಿಯವರು ಸಿದ್ದರಾಮಯ್ಯ, ಡಿಕೆಶಿ ಹಾಗೂ ಸುರ್ಜೇವಾಲಾ ವಿರುದ್ಧ ಟೀಕೆ ಮಾಡಿದರು.

ಕರ್ನಾಟಕ ಒಂದು ರೀತಿ ಎಟಿಎಂನಂತೆ ಆಗಿ ಹೋಗಿದೆ. ಕರ್ನಾಟಕವನ್ನೇ ಲೂಟಿ ಹೊಡೆಯುತ್ತಿದ್ದಾರೆ. ದೆಹಲಿಯಲ್ಲಿ ಕಲೆಕ್ಷನ್‌ ಮಿನಿಸ್ಟರ್‌ ಇದ್ದಾರೆ. ಕಾಂಗ್ರೆಸ್‌ ಬಳಿ ಅಭಿವೃದ್ಧಿಗೆ ದುಡ್ಡಿಲ್ಲ. ಕೇಂದ್ರ ಸರ್ಕಾರ ದುಡ್ಡು ಕೊಡುತ್ತಿಲ್ಲ ಎಂದು ದಿಕ್ಕು ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್‌ಗೆ ನನ್ನ ವಿರುದ್ಧ ಆರೋಪಗಳನ್ನು ಮಾಡುವುದೇ ಕಾಯಕವಾಗಿದೆ ಎಂದರು.

ಡಿಕೆ ಸುರೇಶ್‌ ವಿರುದ್ಧ ವಾಗ್ದಾಳಿ: ಇದೇ ವೇಳೆ ಸಂಸದ ಡಿಕೆ ಸುರೇಶ್‌ (DK Suresh) ವಿರುದ್ಧವೂ ಗರಂ ಆದ ಮೋದಿ, ದೇಶ ವಿಭಜನೆ ಬಗ್ಗೆ ಸಂಸದರೊಬ್ಬರು ಹೇಳಿಕೆ ಕೊಟ್ಟಿದ್ದಾರೆ. ಇಂತಹ ಸಂಸದರನ್ನು ಸೋಲಿಸಿ ನೀವು ಪಾಠ ಕಲಿಸಬೇಕು. ಕಾಂಗ್ರೆಸ್‌ಗೆ ಅವರಿಗೆ ದೇಶ ಪಡೆದು ಗೊತ್ತಿದೆ, ಆದರೆ ದೇಶ ಒಗ್ಗೂಡಿಸಿ ಗೊತ್ತಿಲ್ಲ. ಕಾಂಗ್ರೆಸ್‌ ಒಡೆದಾಳುವ ನೀತಿ ಅನುಸರಿಸುತ್ತಿದೆ. ದೇಶ ವಿಭಜನೆಯ ಬಗ್ಗೆ ಮಾತಾಡುವವರಿಗೆ ನೀವು ಬುದ್ಧಿ ಕಲಿಸಬೇಕು. ಕಾಂಗ್ರೆಸ್‌ ಅನ್ನು ನಿರ್ಮೂಲನೆ ಮಾಡಿ. ಇದಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ಮೋದಿ ಮನವಿ ಮಾಡಿಕೊಂಡರು. ಅಲ್ಲದೇ ನೀವು ಈ ಕೆಲಸ ಮಾಡುತ್ತೀರಿ ಎಂಬ ನಂಬಿಕೆ ನನಗಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದರು.

ಸುಮಾರು 25 ನಿಮಿಷಗಳ ಕಾಲ ಕಾರ್ಯಕರ್ತರ ಉದ್ದೇಶಿಸಿ ಮಾತನಾಡಿದ ಮೋದಿಯವರು ಬಳಿಕ ಶಿವಮೊಗ್ಗದಿಂದ ತಮಿಳುನಾಡಿನತ್ತ ತೆರಳಿದರು.

TAGGED:bjploksabha elections 2025narendra modishivamoggaನರೇಂದ್ರ ಮೋದಿಬಿಜೆಪಿಲೋಕಸಭಾ ಚುನಾವಣೆ 2024ಶಿವಮೊಗ್ಗ
Share This Article
Facebook Whatsapp Whatsapp Telegram

You Might Also Like

Rajnath Singh with China defence Minister
Latest

ಚೀನಾದೊಂದಿಗೆ ರಾಜತಾಂತ್ರಿಕ ಸಂಬಂಧ ಸುಧಾರಿಸಲು 4 ಹಂತದ ಯೋಜನೆ ಪ್ರಸ್ತಾಪಿಸಿದ ರಾಜನಾಥ್ ಸಿಂಗ್

Public TV
By Public TV
14 minutes ago
Sapthami Gowda 02
Bengaluru City

ಮಾದಕ ಲುಕ್‌ನಲ್ಲಿ ಸಪ್ತಮಿ ಶೈನ್‌ – ಅದೆಷ್ಟು ಅಂತ ನಮ್ಮ ಎದೆಗೆ ಕೊಳ್ಳಿ ಇಡ್ತೀರಿ ಅಂದ್ರು ಪಡ್ಡೆ ಹೈಕ್ಳು

Public TV
By Public TV
12 minutes ago
Chikkaballapura 6
Chikkamagaluru

ಪೈಪ್‌ಲೈನ್‌ಗೆ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡ್ತಿದ್ದ ಅಪ್ಪ-ಮಗ ಅಂದರ್

Public TV
By Public TV
34 minutes ago
Fortuner collides with two wheeler Aeronautical engineer nandini dies bagalur kiadb 1
Bengaluru City

ದ್ವಿಚಕ್ರ ವಾಹನಕ್ಕೆ ಫಾರ್ಚುನರ್‌ ಡಿಕ್ಕಿ – ಏರೋನಾಟಿಕಲ್‌ ಎಂಜಿನಿಯರ್‌ ಸಾವು

Public TV
By Public TV
46 minutes ago
bengaluru robbery
Bengaluru City

ಬೆಂಗಳೂರಲ್ಲಿ ಹಾಡಹಗಲೇ ಹಣ ಎಣಿಸುವಾಗ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ರಾಬರಿ

Public TV
By Public TV
1 hour ago
Sree Gokulam Movies to make Tamil production debut with SJ Suryahs Killer 2
Cinema

ಕಿಲ್ಲರ್ ಸಿನಿಮಾ ಘೋಷಿಸಿ, ಗುಡ್ ನ್ಯೂಸ್ ಕೊಟ್ಟ ತಮಿಳಿನ ಡೈರೆಕ್ಟರ್ ಕಂ ಆಕ್ಟರ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?