Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಓವೈಸಿ ವಿರುದ್ಧ ಅಖಾಡಕ್ಕೆ ಇಳಿದಿರೋ, ಮೋದಿ ಮೆಚ್ಚುಗೆ ಪಡೆದಿರೋ ಮಾಧವಿ ಲತಾ ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಓವೈಸಿ ವಿರುದ್ಧ ಅಖಾಡಕ್ಕೆ ಇಳಿದಿರೋ, ಮೋದಿ ಮೆಚ್ಚುಗೆ ಪಡೆದಿರೋ ಮಾಧವಿ ಲತಾ ಯಾರು?

Election News

ಓವೈಸಿ ವಿರುದ್ಧ ಅಖಾಡಕ್ಕೆ ಇಳಿದಿರೋ, ಮೋದಿ ಮೆಚ್ಚುಗೆ ಪಡೆದಿರೋ ಮಾಧವಿ ಲತಾ ಯಾರು?

Public TV
Last updated: April 17, 2024 7:54 pm
Public TV
Share
4 Min Read
HYDERABAD MADHAVI LATHA FINAL
SHARE

ಲೋಕಸಭಾ ಚುನಾವಣೆಯ (Loksabha Elections 2024) ದಿನ ಸಮೀಪಿಸುತ್ತಿದ್ದಂತೆಯೇ ಅದರ ಕಾವು ರಂಗೇರಿದೆ. ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ನಾಯಕರು ಪಣತೊಟ್ಟರೆ, ಇತ್ತ ಅಭ್ಯರ್ಥಿಗಳು ಕೂಡ ತಮ್ಮದೇ ಶೈಲಿಯಲ್ಲಿ, ವಿಭಿನ್ನ ರೀತಿಯಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಈ ನಡುವೆ ಗಮನಾರ್ಹ ವಿಷಯ ಅಂದರೆ ಮುಸ್ಲಿಂ ಪ್ರಾಬಲ್ಯವಿರುವ ಹೈದರಾಬಾದ್ ಭದ್ರಕೋಟೆ ಬೇಧಿಸಲು ಬಿಜೆಪಿ ಈ ಬಾರಿ ವಿಭಿನ್ನ ಅಸ್ತ್ರವೊಂದನ್ನು ಪ್ರಯೋಗ ಮಾಡಿದೆ.

ಹೌದು. ದೇಶದ ಅತಿಹೆಚ್ಚು ಜನಸಂಖ್ಯೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಕೂಡ ಒಂದಾಗಿದೆ. ಈ ಕ್ಷೇತ್ರದಲ್ಲಿ ಅಸಾದುದ್ದೀನ್‌ ಓವೈಸಿ (Asaduddin Owaisi) ಕುಟುಂಬವು ಕಳೆದ 40 ವರ್ಷಗಳಿಂದ ಸತತ ಗೆಲುವಿನ ಮೂಲಕ ಭದ್ರಕೋಟೆ ನಿರ್ಮಿಸಿದೆ. ಈ ಕ್ಷೇತ್ರದ ಮತದಾರರ ಪೈಕಿ ಶೇ. 70 ರಷ್ಟು ಮುಸ್ಲಿಮರಿದ್ದಾರೆ. ಆದರೂ ಇಲ್ಲಿ ಬಿಜೆಪಿಯು ಮುಸ್ಲಿಮೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಲಕ್ಷಕ್ಕಿಂತಲೂ ಅಧಿಕ ಮತಗಳಿಸುವ ಮೂಲಕ ಪ್ರತಿಬಾರಿ ಅಸಾದುದ್ದೀನ್‌ ಓವೈಸಿ ಗೆಲುವನ್ನು ಕಠಿಣಗೊಳಿಸುತ್ತಾ ಬಂದಿದೆ. ಅಂತೆಯೇ ಈ ಬಾರಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಓವೈಸಿಗೆ ಟಫ್‌ ಫೈಟ್‌ ಕೊಡಲು ಸಜ್ಜಾಗಿದೆ. ಹಾಗಿದ್ರೆ ಈ ಮಾಧವಿ ಲತಾ ಯಾರು?, ಅವರ ಹಿನ್ನೆಲೆ ಏನು..?, ಮಾಧವಿ ಲತಾ ಅವರನ್ನೇ ಬಿಜೆಪಿ ಯಾಕೆ ಅಖಾಡಕ್ಕಿ ಇಳಿಸಿದೆ ಎಂಬುದನ್ನು ನೋಡೋಣ.

ಮಾಧವಿ ಲತಾ ಯಾರು?: ಆರ್‌ಎಸ್‌ಎಸ್‌ನ ಕಟ್ಟಾ ಕಾರ್ಯಕರ್ತೆ, ಹೋರಾಟಗಾರ್ತಿ, ಭರತನಾಟ್ಯ ಕಲಾವಿದೆ ಮಾಧವಿ ಲತಾ (Madhavi Latha) ಅವರನ್ನು ಭಾರತೀಯ ಜನತಾ ಪಾರ್ಟಿ ಅಖಾಡಕ್ಕೆ ಇಳಿಸಿದೆ. ಈ ಮೂಲಕ ಓವೈಸಿ ವಿರುದ್ಧ ಈ ಬಾರಿ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿಜೆಪಿ ಬಿದ್ದಂತಿದೆ.

ನಿಜಾಮ್ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದಲ್ಲಿ ಪದವಿ ಮತ್ತು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾಧವಿ ಲತಾ ಅವರು ಪಡೆದಿದ್ದಾರೆ. ಇವರ ಮೂವರು ಮಕ್ಕಳಲ್ಲಿ ಇಬ್ಬರು ಐಐಟಿ ಮದ್ರಾಸ್‌ನಲ್ಲಿ ಓದುತ್ತಿದ್ದಾರೆ. ಹೋಮ್‌ ಸ್ಕೂಲಿಂಗ್‌ ನಡೆಸಿಯೇ ಮಕ್ಕಳನ್ನು ಐಐಟಿಗೆ ಕಳುಹಿಸಿರುವುದು ವಿಶೇಷವಾಗಿದೆ.

ವೃತ್ತಿಪರ ಭರತನಾಟ್ಯಂ ಡಾನ್ಸರ್‌ ಆಗಿರುವ 49 ವರ್ಷದ ಮಾಧವಿ ಲತಾ ಅವರು ಹೆಣ್ಣುಮಕ್ಕಳ ಶಿಕ್ಷಣದ ಪ್ರಾಯೋಜಕರಾಗಿದ್ದಾರೆ ಮತ್ತು ಆರೋಗ್ಯ ಶಿಬಿರಗಳನ್ನು ಆಯೋಜಿಸುವಲ್ಲಿ ಮತ್ತು ಪ್ರವಾಹ ನೆರವು ನೀಡುವಲ್ಲಿನ ಪ್ರಯತ್ನಗಳಿಗೆ ಹೆಸರುವಾಸಿಯಾಗಿದ್ದಾರೆ. ಪ್ರಸ್ತುತ ಹೈದರಾಬಾದ್ ಮೂಲದ ಪ್ರಮುಖ ಆರೋಗ್ಯ ಸಂಸ್ಥೆಯಾದ ವಿರಿಂಚಿ ಹಾಸ್ಪಿಟಲ್ಸ್‌ನ ಅಧ್ಯಕ್ಷರಾಗಿದ್ದಾರೆ. ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆರೋಪದ ನಂತರ ಆರೋಗ್ಯ ಅಧಿಕಾರಿಗಳು ಕೋವಿಡ್‌-19 ಚಿಕಿತ್ಸೆಗಾಗಿ ಅದರ ಪರವಾನಗಿಯನ್ನು ರದ್ದುಗೊಳಿಸಿದಾಗ ವಿರಿಂಚಿ ಹಾಸ್ಪಿಟಲ್ಸ್‌ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಮೋದಿ ಮೆಚ್ಚುಗೆ: ಮಾಧವಿ ಲತಾ ಅವರು 2019 ರಲ್ಲಿ ಕಾನೂನುಬಾಹಿರವಾದ ತ್ರಿವಳಿ ತಲಾಖ್ ವಿರುದ್ಧ ಸಕ್ರಿಯವಾಗಿ ಪ್ರಚಾರ ಮಾಡಿದರು. ಅವರು ಹಳೇ ಹೈದರಾಬಾದ್‌ನಲ್ಲಿ ಈ ಸಮಸ್ಯೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಈ ಪದ್ಧತಿಯನ್ನು ರದ್ದುಗೊಳಿಸುವಂತೆ ಮುಸ್ಲಿಂ ಹೆಣ್ಣುಮಕ್ಕಳೊಂದಿಗೆ ಸೇರಿ ಒತ್ತಾಯಿಸಿದ್ದರು. ಮಾಧವಿ ಲತಾ ಅವರ ಈ ನಡೆ ಪ್ರಧಾನಿ ನರೇಂದ್ರ ಮೋದಿಯವರ ಗಮನಸೆಳೆದಿತ್ತು. ಕೆಲ ತಿಂಗಳ ಹಿಂದೆ ಪ್ರಚಾರದ ವೇಳೆ ಬುರ್ಕಾ ಧರಿಸಿದ್ದ ಸಾಕಷ್ಟು ಮುಸ್ಲಿಂ ಹೆಣ್ಣುಮಕ್ಕಳು ಇವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದ ಫೋಟೋ ಕೂಡ ವೈರಲ್‌ ಆಗಿತ್ತು. ಒಟ್ಟಿನಲ್ಲಿ ಪಕ್ಷದ ವಲಯದಲ್ಲಿ ಗುರುತಿಸಿಕೊಳ್ಳದಿದ್ದರೂ ಹೊರಗೆ ತಮ್ಮ ವಾಕ್ಚಾತುರ್ಯದಿಂದ ಭಾರೀ ಪ್ರಸಿದ್ಧಿ ಪಡೆದಿದ್ದಾರೆ. ಈ ಕಾರಣದಿಂದ ಇಂದು ಇವರನ್ನು ಬಿಜೆಪಿ ಚುನಾವಣಾ ಅಖಾಡಕ್ಕೆ ಇಳಿಸಿರುವ ಸಾಧ್ಯತೆಗಳಿವೆ.

ಇತ್ತೀಚೆಗೆ ಆಪ್‌ ಕೀ ಅದಾಲತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಧವಿ ಲತಾಗೆ ಪ್ರಮುಖ ಪ್ರಶ್ನೆಯೊಂದನ್ನು ಕೇಳಲಾಗಿತ್ತು. ಮುಸ್ಲಿಂ ಸಮುದಾಯದ ಆಂತರಿಕ ವಿಚಾರಗಳಲ್ಲಿ ನೀವು ಮೂಗು ತೂರಿಸೋದ್ಯಾಕೆ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ಕಡ್ಡಿಮುರಿದಂತೆ ಉತ್ತರ ನೀಡಿದ್ದ ಮಾಧವಿ ಲತಾ, ಮುಸ್ಲಿಂ ಹೆಣ್ಣುಮಕ್ಕಳು ಬೇರೆಯವರಲ್ಲ. ಅವರೂ ನಮ್ಮ ಪ್ರಜೆಗಳು. ದೇಶದ ಪ್ರಜೆಯಾಗಿ ನಾನು ಇದರ ಬಗ್ಗೆ ಮಾತನಾಡಬಹುದು ಎಂದಿದ್ದರು.

ಟಿಕೆಟ್‌ ಘೋಷಣೆ ಬಳಿಕ ಲತಾ ಹೇಳಿದ್ದೇನು?: ವಿಶೇಷವೆಂದರೆ, ಮುಂಬರುವ ಲೋಕಸಭಾ ಚುನಾವಣೆ 2024 ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿರುವ ಮಾಧವಿ ಲತಾ ಅವರು ಮಾರ್ಚ್ 2 ರವರೆಗೂ ರಾಜಕೀಯ ವಲಯಗಳಲ್ಲಿ ಹೆಚ್ಚು ಪರಿಚಿತರಾಗಿರಲಿಲ್ಲ. ಅಂದರೆ ಟಿಕೆಟ್‌ ಘೋಷಣೆ ಮಾಡುವ ವೇಳೆ ಮಾಧವಿ ಲತಾ ಬಿಜೆಪಿಯ ಸದಸ್ಯೆ ಕೂಡ ಆಗಿರಲಿಲ್ಲ. ಟಿಕೆಟ್‌ ಘೋಷಣೆ ಬಳಿಕ ಪ್ರತಿಕ್ರಿಯಿಸಿದ್ದ ಮಾಧವಿ, ಕಳೆದ ಒಂದು ವರ್ಷದಿಂದ ಪ್ರತಿದಿನ ಎಲ್ಲಾ ಪ್ರದೇಶಗಳಿಗೆ ಭೇಟಿ ನೀಡಿ 11 ರಿಂದ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಏನೂ ಇಲ್ಲ, ಸ್ವಚ್ಛತೆ ಇಲ್ಲ, ಶಿಕ್ಷಣವಿಲ್ಲ, ಮದರಸಾಗಳಲ್ಲಿ ಮಕ್ಕಳಿಗೆ ಆಹಾರವಿಲ್ಲ. ಮುಸ್ಲಿಂ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಹಿಂದೂ ದೇವಾಲಯಗಳು ಮತ್ತು ಮನೆಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದರು.

ಮತ್ತೊಂದೆಡೆ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಸಂಸದರಾಗಿರುವ ಅಸಾದುದ್ದೀನ್‌ ಓವೈಸಿ ಮತ್ತೊಮ್ಮೆ ಕಣಕ್ಕಿಳಿದಿದ್ದು, ಸುಲಭ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಬಿಆರ್‌ಎಸ್‌ನಿಂದಲೂ ಚಂದ್ರಶೇಖರ್‌ ರಾವ್‌ ಹಿಂದಿನಷ್ಟು ಆಕ್ರಮಣಕಾರಿ ಶೈಲಿಯಲ್ಲಿ ಪ್ರಚಾರ ಮಾಡದಿರುವುದು ಈ ಬಾರಿ ಕ್ಷೇತ್ರದಲ್ಲಿ ಇಬ್ಬರ ನಡುವಿನ ನೇರ ಹಣಾಹಣಿಗೆ ವೇದಿಕೆ ಸಿದ್ಧಗೊಳಿಸಬಹುದು. ಒಟ್ಟಿನಲ್ಲಿ ಹೈದರಾಬಾದ್‌ನಲ್ಲಿ ಜನರ ನಿರಂತರ ಸಂಪರ್ಕ ಹೊಂದಿರುವ ಮಾಧವಿ ಲತಾ, ಹಿಂದೂ ಫೈರ್‌ ಬ್ರಾಂಡ್‌ ನಾಯಕಿ ಕೂಡ ಹೌದು. ಓವೈಸಿ ವಿರುದ್ಧ ಸತತ ಹೋರಾಟ ಮಾಡುತ್ತಿರುವ ಅವರು ಈ ಬಾರಿಯ ಚುನಾವಣೆಯಲ್ಲಿ ಕಮಾಲ್‌ ಮಾಡಬಹುದು ಎನ್ನುವ ನಿರೀಕ್ಷೆ ಬಿಜೆಪಿಯದ್ದಾಗಿದೆ. ಮಾಧವಿ ಲತಾ ಮೂಲಕ ಮುಸ್ಲಿಂ ಮಹಿಳೆಯರನ್ನು ಓಲೈಸುವ ಬಿಜೆಪಿಯ ಲೆಕ್ಕಾಚಾರ ಫಲಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.

2019ರ ಫಲಿತಾಂಶ: ಒಟ್ಟು 7 ವಿಧಾನಸಭಾ ಕ್ಷೇತ್ರಗಳಿರುವ ಸ್ಟಾರ್‌ ಕ್ಷೇತ್ರ ಹೈದರಾಬಾದ್‌ ನಲ್ಲಿ ಮೇ 13 ರಿಂದ ಮತದಾನ ನಡೆಯಲಿದೆ. ಅಸಾದದುದ್ದೀನ್‌ ಓವೈಸಿ (ಎಐಎಂಐಎಂ), ಮಾಧವಿ ಲತಾ (ಬಿಜೆಪಿ) ಹಾಗೂ ಗದ್ದಂ ಶ್ರೀನಿವಾಸ್‌ ಯಾದವ್ (ಬಿಆರ್‌ಎಸ್‌) ಚುನಾವಣಾ ಕಣದಲ್ಲಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭಗವಂತ ರಾವ್‌ ವಿರುದ್ಧ ಓವೈಸಿ ಅಭೂತಪೂರ್ವ ಗೆಲುವು ಸಾಧಿಸಿದ್ದರು.

TAGGED:HyderabadLokSabha Elections 2024madhavi latha asaduddin owaisiಅಸಾದುದ್ದೀನ್ ಓವೈಸಿಮಾಧವಿ ಲತಾಲೋಕಸಭಾ ಚುನಾವಣೆ 2024ಹೈದರಾಬಾದ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
2 minutes ago
mahashivratri 2024 Kedige Flower Why Ketaki Flower is Not Offered to Lord Shiva
Districts

ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ?

Public TV
By Public TV
15 minutes ago
COURT
Latest

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Public TV
By Public TV
19 minutes ago
Blessing Muzarabani
Cricket

T20 World Cup | ಆರ್‌ಸಿಬಿ ವೇಗಿಯ ಬೆಂಕಿ ಬೌಲಿಂಗ್‌ ದಾಳಿಗೆ ಆಸ್ಟ್ರೇಲಿಯಾ ಛಿದ್ರ

Public TV
By Public TV
32 minutes ago
Zimbabwe 1
Cricket

19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ – T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ

Public TV
By Public TV
38 minutes ago
Amit shah
Latest

ಫೆ.21ಕ್ಕೆ ಅಸ್ಸಾಂಗೆ ಅಮಿತಾ ಶಾ – ಭಾರತ-ಬಾಂಗ್ಲಾ ಅಂತಾರಾಷ್ಟ್ರೀಯ ಗಡಿಗೆ ಭೇಟಿ

Public TV
By Public TV
40 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?