ಬೆಂಗಳೂರು: ಎಐಸಿಸಿ (AICC) ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ(Suraj Hegde) ಅವರಿಗೆ ಲೋಕಸಭೆಯ ಪ್ರತಿಪಕ್ಷದ ನಾಯಕ (Rahul Gandhi) ಅಂತಿಮ ನಮನ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ (Bengaluru) ಆಗಮಿಸಿದ ರಾಹುಲ್ ಗಾಂಧಿ ಸೂರಜ್ ಹೆಗ್ಡೆ ಡಾಲರ್ಸ್ ಕಾಲೋನಿ ನಿವಾಸಕ್ಕೆ ಅಗಮಿಸಿ ಅಂತಿಮ ದರ್ಶನ ಪಡೆದರು. ರಾಹುಲ್ ಗಾಂಧಿ ಅವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಸಿದ್ದರಾಮಯ್ಯ ಸಾಥ್ ನೀಡಿದರು.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದ ಸೂರಜ್ ಹೆಗ್ಡೆ ಅವರಿಗೆ ಜೂನ್ 7 ರಂದು ಹೃದಯಾಘಾತ ಸಂಭವಿಸಿತು.ತಕ್ಷಣ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಇದನ್ನೂ ಓದಿ: ಸಿಎಂ ಮಾತಿಗೂ ಇಲ್ಲ ಬೆಲೆ – 10 ಅಲ್ಲ 11 ಗಂಟೆಯಾದರೂ ಕಚೇರಿಗೆ ಬಾರದ ಅಧಿಕಾರಿಗಳು!
