ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿ ಬಾಳೆಹಣ್ಣು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಇಲ್ಲಿನ ರಾಯಲ್ ವೃತ್ತದ ಬಳಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ಪುಲಿವೆಂದುಲದಿಂದ ಹೊಸಪೇಟೆ ಮೂಲಕ ಬಿಜಾಪುರ ಜಿಲ್ಲೆ ಇಂಡಿ ಕಡೆ ಹೊರಟಿದ್ದ ಲಾರಿ, ವೇಗವಾಗಿ ಬಂದು ವೃತ್ತದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ.
- Advertisement 2-
- Advertisement 3-
ಲಾರಿಯಿಂದ ಡೀಸೆಲ್ ಸೋರಿಕೆಯಾಗುತ್ತಿದ್ದರಿಂದ ಕೆಲ ಕಾಲ ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಕ್ರೇನ್ ಮೂಲಕ ಲಾರಿಯನ್ನು ಎತ್ತಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.
- Advertisement 4-
ಘಟನೆ ಬಗ್ಗೆ ಬಳ್ಳಾರಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.