ಲಾರಿಯನ್ನು ಹಿಂದಿಕ್ಕಲು ಹೋಗಿ ಬಸ್ ಡಿಕ್ಕಿ: ಆಶ್ಚರ್ಯಕರ ರೀತಿಯಲ್ಲಿ ಕಾರಿನಲ್ಲಿದ್ದವರು ಪಾರು

Public TV
1 Min Read
MDK Accident B

ಮಡಿಕೇರಿ: ಲಾರಿಯನ್ನು ಹಿಂದಿಕ್ಕಲು ಹೋಗಿ ಕೆಎಸ್‍ಆರ್ ಟಿಸಿ ಬಸ್ ಚಾಲಕ ಕಾರಿಗೆ ಡಿಕ್ಕಿ ಹೊಡೆದ ಘಟನೆ ಮಡಿಕೇರಿ ಹೊರವಲಯದ ಇಬ್ಬನಿ ರೆಸಾರ್ಟ್ ಬಳಿ ನಡೆದಿದೆ.

ಈ ಘಟನೆಯಲ್ಲಿ ಕಾರಿನಲ್ಲಿದ್ದವರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜು ಗುಜ್ಜಾಗಿದೆ. ಅಷ್ಟೇ ಅಲ್ಲದೆ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

5 ಜನರಿದ್ದ ಸ್ಕಾರ್ಪಿಯೋ ಕಾರು ಮಂಗಳೂರಿನಿಂದ ಕುಶಾಲನಗರಕ್ಕೆ ಹೊರಟಿತ್ತು. ಈ ವೇಳೆ ಕುಶಾಲನಗರದಿಂದ ಬರುತ್ತಿದ್ದ ಲಾರಿಯನ್ನು ಹಿಂದಿಕ್ಕಲು ಹೋಗಿ ಕೆಎಸ್‍ಆರ್ ಟಿಸಿ ಬಸ್ ಚಾಲಕ ಇಬ್ಬನಿ ರೆಸಾರ್ಟ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

MDK Accident A

ಸರಣಿ ಅಪಘಾತದಿಂದಾಗಿ ಮಡಿಕೇರಿ-ಮೈಸೂರು ರಸ್ತೆಯಲ್ಲಿ 15 ನಿಮಿಷಗಳ ಕಾಲ ವಾಹನ ಸಂಚಾರ ಬಂದ್ ಆಗಿತ್ತು. ಘಟನೆಯ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ಗ್ರಾಮಾಂತರ ಪೊಲೀಸರು, ಅಪಘಾತಕ್ಕೆ ಈಡಾಗಿದ್ದ ವಾಹನಗಳನ್ನು ತೆರವುಗೊಳಿಸಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಎಸ್‍ಆರ್ ಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *