ಲಾರಿ ಹರಿದು 40ಕ್ಕೂ ಹೆಚ್ಚು ಕುರಿಗಳ ಮಾರಣಹೋಮ

Public TV
1 Min Read
Accident

ವಿಜಯನಗರ: ಕುರಿ ಮಂದೆಯ ಮೇಲೆ ಲಾರಿ ಹರಿದು 40 ಕ್ಕೂ ಅಧಿಕ ಕುರಿಗಳ ಸಾವಿಗೀಡಾದ ಘಟನೆ ಕೂಡ್ಲಿಗಿಯ (Kudligi) ಶಿವಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಸಾವಿಗೀಡಾದ ಕುರಿಗಳು ಶಿವಪುರದ ಬಾಲಪ್ಪ ಎಂಬ ರೈತನಿಗೆ ಸೇರಿದ್ದಾಗಿವೆ. ಹೊಸಪೇಟೆ (Hosapete) ಕಡೆಯಿಂದ ಬೆಂಗಳೂರು (Bengaluru) ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹರಿದಿದೆ. ಡಿಕ್ಕಿಯಾದ ರಭಸಕ್ಕೆ ರಸ್ತೆಯ ತುಂಬೆಲ್ಲಾ ಕುರಿಗಳು ಛಿದ್ರವಾಗಿ ಬಿದ್ದಿವೆ. ಇದನ್ನೂ ಓದಿ: ಪಿಎಸ್‍ಐ ಹಗರಣ – ಎಡಿಜಿಪಿ ಅಮೃತ್ ಪೌಲ್‌ಗೆ ಮತ್ತೊಂದು ಸಂಕಷ್ಟ

ಅತಿವೇಗವಾದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಲಾರಿ ಚಾಲಕ ಅಪಘಾತ ನಡೆಸಿ, ಅಲ್ಲಿಂದ ಲಾರಿ ನಿಲ್ಲಿಸದೇ ಮುಂದೆ ಸಾಗಿದ್ದಾನೆ. ಗ್ರಾಮಸ್ಥರು ಲಾರಿ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ರಸ್ತೆ ಪಕ್ಕದ ಕಬ್ಬಿಣದ ತಡೆಗೋಡೆಗೆ ಲಾರಿ ಡಿಕ್ಕಿಯಾಗಿದೆ. ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ವಿಪಕ್ಷ ನಾಯಕನಿಲ್ಲದೆ ಕಲಾಪ ನಡೆದಿದ್ದು ದುರ್ದೈವ: ಹೆಚ್.ಕೆ ಪಾಟೀಲ್

Web Stories

Share This Article