ತುಮಕೂರು: ಆನ್ಲೈನ್ ಗೇಮ್ (Online Game)ಆಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ತುಮಕೂರು (Tumkuru) ನಗರದ ಹೊರಪೇಟೆಯಲ್ಲಿ ನಡೆದಿದೆ.
ನೇಣಿಗೆ ಶರಣಾದ ಯುವಕನನ್ನು ಟಿ.ಎಸ್.ಭರತ್ (24) ಎಂದು ಗುರುತಿಸಲಾಗಿದೆ. ಯುವಕ ಇತ್ತೀಚೆಗೆ ಆನ್ಲೈನ್ ಗೇಮ್ನಲ್ಲಿ 20 ಸಾವಿರ ರೂ. ಹಣ ಕಳೆದುಕೊಂಡಿದ್ದ. ಈ ವಿಚಾರ ಆತನ ತಾಯಿಗೆ ಗೊತ್ತಾಗಿ ಇನ್ನೂ ಆನ್ಲೈನ್ ಗೇಮ್ ಆಡಬೇಡ ಎಂದು ಬುದ್ಧಿ ಹೇಳಿದ್ದರು. ಇದೇ ವಿಚಾರಕ್ಕೆ ಯುವಕ ತನ್ನ ಮನೆ ಬಳಿಯ ಹಳೆ ಹೆಂಚಿನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
- Advertisement
ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.