Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಭಾರೀ ಚರ್ಚೆಗೆ ಗ್ರಾಸವಾಯ್ತು ಮನೆಯೊಳಗೆ ಪತ್ತೆಯಾದ ನಾಗ ವಿಗ್ರಹ

Public TV
Last updated: November 20, 2018 2:04 pm
Public TV
Share
4 Min Read
udp naga udbava collage 3 copy
SHARE

– ಆಡಿಯೋ ವೈರಲ್

ಉಡುಪಿ: ಜಿಲ್ಲೆಯ ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮದ ಬರ್ಸಬೆಟ್ಟು ಮನೆಯಲ್ಲಿ ನಡೆದ ನಾಗ ಪವಾಡ ಸಾಕಷ್ಟು ಸುದ್ದಿ ಮಾಡಿದ್ದು, ಇದೀಗ ಆ ಘಟನೆ ಭಾರೀ ಚರ್ಚೆಗೀಡಾಗಿದೆ.

ಶಿವಮೊಗ್ಗದ ತೀರ್ಥಹಳ್ಳಿಯ ಅರಗದ ನಾಗಪಾತ್ರಿ ನಾಗರಾಜ್ ಭಟ್ ಬರ್ಸಬೆಟ್ಟು ಮನೆಯ ಹಾಲ್‍ನ ಅಡಿಭಾಗದಲ್ಲಿ ನಾಗನ ಮೂರ್ತಿ ಇದೆ ಎಂದು ಮನೆಯವರಿಗೆ ತಿಳಿಸಿದ್ದರು. ಹಲವು ಜನರ ಸಮ್ಮುಖದಲ್ಲಿ ಅಗೆದಾಗ ಮೂರ್ತಿ ಪತ್ತೆಯಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪರ-ವಿರೋಧ ವಾದಗಳು ಹುಟ್ಟಿಕೊಂಡಿದ್ದು, ಸಂಬಂಧಪಟ್ಟಂತೆ ಆಡಿಯೋ ಕೂಡ ಹರಿದಾಡುತ್ತಿದೆ.

ಪೂನಾದಿಂದ ಕರೆ ಮಾಡಿದ ವ್ಯಕ್ತಿಯೊಬ್ಬ ತಾನು ಮೋಸ ಹೋಗಿದ್ದೇನೆ. ಆ ನಾಗಪಾತ್ರಿ ಇದೇ ರೀತಿ ತುಂಬಾ ಜನಕ್ಕೆ ಮೋಸ ಮಾಡಿದ್ದಾರೆ ಅನ್ನುವ ಒಂದು ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ನಡುವೆ ಆಡಿಯೋದಲ್ಲಿ ನಾಗರಾಜ್ ಭಟ್ ವಿರುದ್ಧ ಮಾತನಾಡಿರುವ ವ್ಯಕ್ತಿಯೇ ಸ್ವತಃ ಅದು ನನ್ನ ಧ್ವನಿಯೇ ಅಲ್ಲ ಎಂದು ಸಂಭಾಷಣೆ ನಡೆಸಿರುವ ಇನ್ನೊಂದು ಆಡಿಯೋ ಕೂಡ ಹರಿದಾಡುತ್ತಿದೆ. ನಾಗಪಾತ್ರಿ ನಾಗರಾಜ್ ಭಟ್ ಪರವಾಗಿ ಕೂಡ ಆಡಿಯೋ ಹರಿದಾಡುತ್ತಿದೆ.

udp naga udbava collage copy

ನಾಗ ಪಾತ್ರಿಯ ವಿರುದ್ಧವಾಗಿ ಹರಿದಾಡುವ ಆಡಿಯೋ:
ಕರೆ ಮಾಡಿದವ: ನೀವು ಒಂದು ವಿಡಿಯೋ ಹಾಕಿದ್ರಿ, ಎಲ್ಲಿ ಇದು? ಎಲ್ಲಿಯಾಗಿದ್ದು, ಇದರ ಬಗ್ಗೆ ಡಿಟೈಲ್ ಸಿಗ್ತದಾ
ಸುದೀಪ್: ನೀವು ಎಲ್ಲಿಂದ ಮಾತಾಡೋದು
ಕರೆ ಮಾಡಿದವ: ನಾನು ಪೂನಾದಿಂದ ಮಾತಾಡೋದು, ಆ ಜನ ಡೊಂಗಿ, ಸುಳ್ಳು
ಸುದೀಪ್: ಪೆರ್ಡೂರಿನಲ್ಲಿ ಕೂಡ ಈ ಹಿಂದೆ ಆಗಿತ್ತು..
ಕರೆ ಮಾಡಿದವ: ನನ್ನ ಮನೆಯಲ್ಲಿಯೇ ಆಗಿದ್ದು, ಇದನ್ನು ನೋಡಿ ಶಾಕ್ ಆಯ್ತು, ಅದೇ ಮೂರ್ತಿ. ಅದೆ ಇದು, ಪೇಪರ್‍ನಲ್ಲಿರುವ ಚಿತ್ರ ಸೇಮ್ ನನ್ನ ಹತ್ತಿರ ಉಂಟು..

ಸುದೀಪ್: ಏನು ಹೇಳ್ತಿದ್ದೀರಿ
ಕರೆ ಮಾಡಿದವ: ನಿಮ್ಮ ಆಣೆ ಹೌದು, ಅವರಿಗೆ ಎರಡು ಹೊಡಿಬೇಕು, ಅವರು ಪೂನಾದ ನನ್ನ ಹೋಟೆಲ್ ಗೆ ಬಂದಿದ್ದರು. ಈ ಘಟನೆ ನನ್ನ ಮನೆಯಲ್ಲಿಯೇ ಆಗಿತ್ತು. ಹಾಗೆ ಮಾಡುವುದು ಸುಮ್ಮನೆ, ಸುಳ್ಳು. ಅವರು ಮೊದಲು ಇಡುವುದು, ನಂತರ ತೆಗೆಯುವುದು
ಸುದೀಪ್: ಏನ್ ಹೇಳ್ತಿದ್ದೀರಾ ಅಂತ ಮರು ಪ್ರಶ್ನೆ ಹಾಕಿದ್ದಾರೆ.

udp naga udbava collage 2 copy

ಕರೆ ಮಾಡಿದವ: ನಿಮ್ಮಾಣೆ ಸತ್ಯ, ಬೇಕಾದರೆ ಗಂಗಾಧರ್ ಮನೆಗೆ ಹೋಗಿ ಕೇಳಿ. ಅಗೆಸಿ ಹೊಂಡ ತೋಡಿಸಿ, ನಂತರ ನೀರು ತರಲು ಕಳುಹಿಸುತ್ತಾರೆ. ಮನೆಯವರ ಹತ್ತಿರ ಒಂದೊಂದೆ ಕೊಡಪಾನ ನೀರು ತರಲು ಕಳುಹಿಸುತ್ತಾರೆ. ಅವರು ಆಚೆ ಈಚೆ ಹೋದಾಗ ಮೂರ್ತಿ ಇಡೋದು, ಭಟ್ರ ಮಗ ನಿಕಿತ್ ಇದನ್ನೆಲ್ಲಾ ಮಾಡೋದು, ಅವನಿಗೂ ಎರಡು ಬಿಡಬೇಕು. ಅವರು ತೀರ್ಥಹಳ್ಳಿಯವರು ಮೊದಲು ನನ್ನ ಮನೆಯಲ್ಲಿ ಮಾಡಿದ್ರು. ಆ ನಂತರ ತುಂಬಾ ಮನೆಯಲ್ಲಿ ಮಾಡಿದ್ರು. ನಂಗೆ ಅದೆಲ್ಲಾ ಸುಳ್ಳು ಅಂತಾ ಗೊತ್ತಾಯ್ತು. ಮನೆಯವರು ನೀರು ಹೋದಾಗ ಕಾರಿನಿಂದ ಮೂರ್ತಿ ತಂದು ಇಡುತ್ತಾರೆ, ಅದು ಅಲ್ಲಿಯೇ ಸಿಕ್ಕಿತ್ತು ಅಂತ ಮೋಸ ಮಾಡೋದು.

ಅವನು ಭಾರಿ ಡೊಂಗಿ. ನನಗೆ ಪರಿಚಯ ಮಾಡಿಕೊಟ್ಟವರಿಗೂ ಅವನ ವಿಚಾರ ತಿಳಿದು ಬೇಸರವಾಯಿತು. ಅವರು ಚಿನ್ನ ಎಲ್ಲಾ ತಗೊಂಡು ಜನಗಳಿಗೆ ಮೋಸ ಮಾಡುತ್ತಿದ್ದಾರೆ. ಆರಂಭದಲ್ಲಿ ನಮ್ಮಲ್ಲಿ ಬರುವಾಗ ಅವರ ಬಳಿ ಏನೂ ಇರಲಿಲ್ಲ. ಈಗ ಎಲ್ಲಾ ಇದೆ. ನಾಗನ ಹೆಸರಿನಲ್ಲಿ ಚಿನ್ನಕ್ಕೆ ಡಿಮಾಂಡ್ ಇಡೋದು. ನನ್ನ ಸಂಬಂಧಿಕರ ಹತ್ತಿರ ಕೂಡ ಉಂಗುರ ತೆಗೆದುಕೊಂಡಿದ್ದಾರೆ. ಜನರ ಹತ್ತಿರ ನಾಗ ದರ್ಶನ ಮಾಡಿ, ನಾಗನನ್ನು ನಂಬಲು ಹೇಳಿ ಕಲೆಕ್ಷನ್ ಮಾಡ್ತಾರೆ. ಇದೆ ರೀತಿ ಮಾಡಿದ್ರೆ ಅವರಿಗೆ ಜನರು ಹೊಡಿತಾರೆ ಅಂತ ಹೇಳಿದ್ದಾರೆ.

udp naga udbava 5

ನಾಗಪಾತ್ರಿ ಪರವಾಗಿ ಹರಿದಾಡುವ ಆಡಿಯೋ ಇಂತಿದೆ;
ಕರೆ ಮಾಡಿದವ: ರಘು ಶೆಟ್ರ ಅಲ್ವಾ
ರಘು ಶೆಟ್ಟಿ: ಹೌದು
ಕರೆ ಮಾಡಿದವ: ನಾನು ಮುದ್ರಾಡಿಯಿಂದ ಮಾತಾಡ್ತಾ ಇದ್ದೇನೆ. ನಿನ್ನೆ ನಾಗನ ಕಲ್ಲು ಸಿಕ್ಕಿದ ವಿಷಯ ಸುಳ್ಳು ಅನ್ನೊ ಆಡಿಯೋ ಹರಿದಾಡ್ತಾ ಇದೆ ಅಂತ ವಿಷಯ ಬಂದಿದೆ
ರಘು ಶೆಟ್ಟಿ: ನನ್ನ ಹೆಸರು ಬಳಸಿದ್ದು ಯಾರು?
ಕರೆ ಮಾಡಿದವ: ಆ ವಿಡಿಯೋ ಬೇಕಾದರೆ ನಾನು ಫಾರ್ವರ್ಡ್ ಮಾಡ್ತಾನೆ
ರಘು ಶೆಟ್ಟಿ: ಅದು ನನಗೆ ಬಂದಿದೆ, ಆ ಸ್ವರ ನನ್ನದಲ್ಲ, ನಾನು ಭಟ್ರ ಹತ್ತಿರ ಅದನ್ನೆ ಹೇಳಿದ್ದೆ, ನನ್ನ ಸ್ವರ ಪರಿಚಯ ಇಲ್ವಾ ಅಂತಾ. ಭಟ್ರು ಕೂಡ ಅದೇ ಹೇಳಿದ್ರು ನಿನ್ನ ಸ್ವರ ಅಲ್ಲಾ ಅಂತಾ. ಭಟ್ರ ಹತ್ತಿರ ಹೇಳಿದ್ದೆ, ನನ್ನ ಸ್ವರ ರೆಕಾರ್ಡ್ ಮಾಡಿ ನೋಡಿ ಆ ಸ್ವರಕ್ಕೆ ಮ್ಯಾಚ್ ಆಗ್ತಾದ ಅಂತ

udp naga udbava 2

ಕರೆ ಮಾಡಿದವ: ನಿನ್ನೆ ಅಷ್ಟು ಖರ್ಚು ಮಾಡಿ ನಾಗಕಲ್ಲು ತೆಗ್ದಿದ್ದಾರೆ, ನಿಮ್ಮ ಹೆಸರನ್ನು ಸೇರಿಸಿ ಆಡಿಯೋ ಬಿಟ್ಟಿದ್ದಾರೆ
ರಘು ಶೆಟ್ಟಿ: ನನ್ನನ್ನು ಕರೆಯಿರಿ, ಅದು ನಾನಲ್ಲ ನಾನು ಬೇಕಾದರೆ ಕರೆದಲ್ಲಿ ಬರುತ್ತೇನೆ. ಭಟ್ರು ಮತ್ತು ನನಗೆ ಒಳ್ಳೆ ಸಂಬಂಧವಿದೆ. ನಾನು ಆ ವಿಚಾರ ಯಾರ ಬಳಿ ಮಾತಾಡಿಲ್ಲಾ. ಆಡಿಯೋದಲ್ಲಿ ಇರುವ ಸ್ವರ ಯಾರದ್ದು ಅಂತ ಗೊತ್ತಾದರೆ ಭಟ್ರ ಮಗನ ಹತ್ತಿರ ನನಗೆ ತಿಳಿಸಿ ಎಂದಿದ್ದೇನೆ.

ಕರೆ ಮಾಡಿದವ: ನಿಮ್ಮ ಜೊತೆ ನಡೆಸಿದ ಮಾತುಕತೆಯನ್ನು ವಾಟ್ಸ್ಯಾಪ್ ಮಾಡಬಹುದಾ?
ರಘು ಶೆಟ್ಟಿ: ತೊಂದರೆ ಇಲ್ಲ ಹಾಕಿ ಅದರಿಂದ ನನಗೆ ತೊಂದರೆ ಇಲ್ಲಾ. ಈ ಹಿಂದೆ ಆಡಿಯೋದಲ್ಲಿ ನನ್ನ ಹೆಸರು ಉಲ್ಲೇಖ ಇಲ್ಲ. ನಾವು ದೇವರ ಮೇಲೆ ನಂಬಿಕೆ ಇರಿಸಿಕೊಂಡಿರುವವರು ನಾವು ಹಾಗೆಲ್ಲಾ ಮಾಡೋಲ್ಲ.

ಒಟ್ಟಿನಲ್ಲಿ ನಾಗೋದ್ಭವ ವಿಚಾರ ಈಗ ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆಸ್ತಿಕರು ಪವಾಡ ಅಂತ ವಾದಿಸಿದರೆ, ನಾಸ್ತಿಕರು ಪ್ರಗತಿಪರರು ಇದನ್ನು ಗಿಮಿಕ್ ಅಂತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

TAGGED:audioIdolPublic TVSnakeidoludupiಆಡಿಯೋಉಡುಪಿನಾಗವಿಗ್ರಹಪಬ್ಲಿಕ್ ಟಿವಿವಿಗ್ರಹ
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
10 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
7 hours ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
12 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
13 hours ago

You Might Also Like

RCB 1
Cricket

9 ವರ್ಷಗಳ ಬಳಿಕ ಕ್ವಾಲಿಫೈಯರ್‌ 1ಗೆ ಲಗ್ಗೆಯಿಟ್ಟ ಆರ್‌ಸಿಬಿ

Public TV
By Public TV
6 hours ago
Jitesh Sharma 2
Cricket

IPL 2025 | ಪಂದ್ಯ ಸೋತು ಹೃದಯ ಗೆದ್ದ ಪಂತ್‌

Public TV
By Public TV
6 hours ago
big bulletin 28 may 2025 part 1
Big Bulletin

ಬಿಗ್‌ ಬುಲೆಟಿನ್‌ 28 May 2025 ಭಾಗ-1

Public TV
By Public TV
6 hours ago
padma awards
Latest

ಪದ್ಮ ಪ್ರಶಸ್ತಿ; ಕನ್ನಡದ ಹಿರಿಯ ನಟ ಅನಂತ್‌ ನಾಗ್‌, ರಿಕಿ ಕೇಜ್‌ ಸೇರಿ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ

Public TV
By Public TV
6 hours ago
big bulletin 28 may 2025 part 2
Big Bulletin

ಬಿಗ್‌ ಬುಲೆಟಿನ್‌ 28 May 2025 ಭಾಗ-2

Public TV
By Public TV
6 hours ago
big bulletin 28 may 2025 part 3
Big Bulletin

ಬಿಗ್‌ ಬುಲೆಟಿನ್‌ 28 May 2025 ಭಾಗ-3

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?