ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ (Love Failure) ಅಪ್ರಾಪ್ತ ಬಾಲಕಿ ಕಳೆನಾಶಕ ಸೇವೆಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಳಸ ತಾಲೂಕಿನ ಜೋಗಿಕುಂಬ್ರಿ ಗ್ರಾಮದಲ್ಲಿ ನಡೆದಿದೆ.
ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ (PUC Student) ದೀಪ್ತಿ (17) ಮೃತ ಬಾಲಕಿ. ಈಕೆ ಎಸ್.ಕೆ ಮೇಗಲ್ ಗ್ರಾಮದ ನಿತೇಶ್ ಎಂಬವನನ್ನ ಪ್ರೀತಿಸುತ್ತಿದ್ದಳು. ಆತ ವಂಚಿಸಿದ್ದಾನೆ ಎಂದು ಗೊತ್ತಾಗುತ್ತಿದ್ದಂತೆ, ಜನವರಿ 10ರಂದು ಕಾಲೇಜಿನಿಂದ ಮನೆಗೆ ಬಂದ ದೀಪ್ತಿ ಕಳೆನಾಶಕ ಸೇವಿಸಿದ್ದಾಳೆ. ಬಳಿಕ ಮನೆಯಲ್ಲಿದ್ದ ಅಪ್ಪ-ಅಮ್ಮನಿಗೆ ವಿಷಯ ತಿಳಿಸಿದ್ದಾಳೆ. ಇದನ್ನೂ ಓದಿ: ಮಂಗಳೂರು ಬೆಡಗಿಗೆ ಒಲಿಯುತ್ತಾ ಭುವನ ಸುಂದರಿ ಕಿರೀಟ?
ಪೋಷಕರು ಕೂಡಲೇ ಕಳಸ ತಾಲೂಕು ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಾಲ್ಕು ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿದ ದೀಪ್ತಿ ಶನಿವಾರ ಸಂಜೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ವಿಮಾನದಲ್ಲಿ ವೃದ್ಧನಿಗೆ ರಕ್ತಸ್ರಾವ ಬೆನ್ನಲೇ ತುರ್ತು ಭೂಸ್ಪರ್ಶ – ಚಿಕಿತ್ಸೆ ಫಲಿಸದೇ ಸಾವು
ಸಾಯುವ ಮುನ್ನ ಆಕೆ “ನಾನು ನಿತೇಶ್ನನ್ನ ಪ್ರೀತಿಸುತ್ತಿದ್ದೆ. ನಮ್ಮಿಬ್ಬರ ಮಧ್ಯೆ ಜಗಳದಿಂದಾಗಿ ನಾನು ಈ ತೀರ್ಮಾನಕ್ಕೆ ಬಂದಿದ್ದೇನೆ” ಎಂದು ಡೆತ್ನೋಟ್ ಬರೆದಿದ್ದಾಳೆ. ಆರಂಭದಲ್ಲಿ ಕುದುರೆಮುಖ ಪೊಲೀಸರು ದೂರು ಪಡೆಯಲು ನಿರಾಕರಿದ್ದಾರೆ. ಚಿಕ್ಕಮಗಳೂರು ಎಸ್ಪಿ ತರಾಟೆಗೆ ತೆಗೆದುಕೊಂಡ ನಂತರ ಕುದುರೆಮುಖ ಪೊಲೀಸರು ದೂರು ಸ್ವೀಕರಿಸಿದ್ದಾರೆ. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಿತೇಶ್ನನ್ನ ಬಂಧಿಸಿಲ್ಲ ಎಂದು ಬಾಲಕಿಯ ಪೋಷಕರು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ನಿತೇಶ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k