ಅನ್ಯಕೋಮಿನ ಯುವತಿಯೊಂದಿಗೆ ಯುವಕ ಲವ್ ಮ್ಯಾರೇಜ್ – ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ಘರ್ಷಣೆ!

Public TV
1 Min Read
BGK Love Marriage

– ಹಲವರ ಮೇಲೆ ಪೊಲೀಸರಿಂದ ಲಘು ಲಾಠಿ ಚಾರ್ಜ್
– ಬೂದಿ ಮುಚ್ಚಿದ ಕೆಂಡವಾದ ಬಾಗಲಕೋಟೆ

ಬಾಗಲಕೋಟೆ: ಅನ್ಯಕೋಮಿನ ಯುವಕ-ಯುವತಿ ನಡುವಿನ ಪ್ರೇಮ ವಿವಾಹವೊಂದು ಹಿಂದೂಪರ ಸಂಘಟನೆ ಹಾಗೂ ಪೊಲೀಸರ ನಡುವೆ ಸಂಘರ್ಷಕ್ಕೆ ಕಾರಣವಾದ ಘಟನೆ ಬಾಗಲಕೋಟೆಯ ನವನಗರದ ನಗರಸಭೆ ಎದುರು ನಡೆದಿದೆ.

BGK Love Marriage

ಬಾದಾಮಿ ಮೂಲದ ಯುವಕ ಮತ್ತು ಯುವತಿ ದೇವಸ್ಥಾನದಲ್ಲಿ ಪ್ರೇಮ ವಿವಾಹವಾಗಿದ್ದು, ರಕ್ಷಣೆ ಕೋರಿ ಎಸ್‌ಪಿ ಕಚೇರಿಗೆ ಧಾವಿಸಿದ್ದಾರೆ. ವಿಷಯ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಎಸ್ಪಿ ಕಚೇರಿಗೆ ದೌಡಾಯಿಸಿದ್ದರು. ಇದೇ ವೇಳೆ ಯುವತಿಯ ಮನೆಯವರೂ ಅಲ್ಲಿಗೆ ಬಂದಿದ್ದಾರೆ. ಈವೇಳೆ ಹಿಂದೂ ಕಾರ್ಯಕರ್ತರು-ಯುವತಿ ಮನೆಯವರ ನಡುವೆ ವಾಗ್ವಾದ ಏರ್ಪಟ್ಟಿತ್ತು. ಈ ವೇಳೆ ಮಧ್ಯೆ ಪ್ರವೇಶಿಸಿದ ನವನಗರ ಸಿಪಿಐ ರಾಮಣ್ಣ ಬಿರಾದಾರ್, ಎರಡೂ ಗುಂಪಿನವರನ್ನ ಚದುರಿಸಲು ಪ್ರಯತ್ನಿಸಿದಾಗ, ಹಿಂದೂ ಕಾರ್ಯಕರ್ತ ಕುಮಾರಸ್ವಾಮಿ ಹಾಗೂ ಸಿಪಿಐ ಬಿರಾದಾರ್ ನಡುವೆ ವಾಗ್ವಾದ ಏರ್ಪದೆ. ಅಲ್ಲದೇ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಈ ವೇಳೆ ಪೊಲೀಸರು ಪರಿಸ್ಥತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಆದ್ರೆ ಈ ಮದುವೆಗೆ ಒಪ್ಪದ ಹಿಂದೂ ಕಾರ್ಯಕರ್ತರು ಸಿಪಿಐ ಬಿರಾದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಆಗ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದರಿಂದ ಸ್ಥಳದಲ್ಲಿ ವಾತಾವರಣ ಉದ್ವಿಗ್ನಗೊಂಡಿದೆ. ನಂತರ ಪೊಲೀಸರು ಕೆಲವರನ್ನ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಇದರಿಂದ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಎಸ್‌ಪಿ ಅಮರನಾಥ ರೆಡ್ಡಿ ಹೆಚ್ಚುವರಿ ಪೋಲಿಸ್ ಅಧಿಕಾರಿಗಳನ್ನ ಭದ್ರತೆಗೆ ನಿಯೋಜಿಸಿದ್ದಾರೆ.

Share This Article