ವಿಶಾಖಪಟ್ಟಣಂ: ಪ್ರೀತಿಸಿದ ಹುಡುಗಿ ತನ್ನನ್ನು ಮದುವೆಯಾಗಲು ಒಪ್ಪಲಿಲ್ಲ ಎಂದು ಯುವಕನೊಬ್ಬ ಆಕೆಗೆ ಬೆಂಕಿ ಹಚ್ಚಿ ತಾನೂ ಬೆಂಕಿ ಹಚ್ಚಿಕೊಂಡು ಸಾಯಲು ಪ್ರಯತ್ನಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಭೂಪಾಲಪಲ್ಲೆ ಮೂಲದ ಪಿ. ಹರ್ಷವರ್ಧನ್ ಹಾಗೂ ವಿಶಾಖಪಟ್ಟಣಂ ಮೂಲದ ಯುವತಿ ಇಬ್ಬರೂ ಖಾಸಗಿ ವಿಶ್ವವಿದ್ಯಾಲಯದಲ್ಲಿ ಒಟ್ಟಿಗೆ ಓದುತ್ತಿದ್ದರು. ಕೊರೊನಾ ಸಾಂಕ್ರಾಮಿಕ ರೋಗ ಹೆಚ್ಚಾಗಿದ್ದರಿಂದ ಅವರು ತಮ್ಮ ತಮ್ಮ ಮನೆಗಳಲ್ಲಿಯೇ ವಾಸವಾಗಿದ್ದರು. ಹರ್ಷವರ್ಧನ್ ಆ ಯುವತಿಯನ್ನು ಪ್ರೀತಿ ಮಾಡುತ್ತಿರುವುದಾಗಿ ಪ್ರಪೋಸಲ್ ಮಾಡಿದ ಮೇಲೆ ಆಕೆ ಆತನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಆತ ಕೋಪಗೊಂಡಿದ್ದ. ಇದನ್ನೂ ಓದಿ: ತಮಿಳು ಚಿತ್ರತಂಡದ ನಂತರ ಮತ್ತೆ ಸಕ್ಕರೆ ನಾಡಿನಲ್ಲಿ ತೆಲುಗು ಸಿನಿಮಾದವರಿಂದ ಅವಾಂತರ
ಕೆಲವು ದಿನಗಳ ಹಿಂದೆ ಯುವಕ ಆಕೆಯನ್ನು ವೈಜಾಗ್ನ ಲಾಡ್ಜ್ಗೆ ಕರೆದುಕೊಂಡು ಹೋದ ಆತ ಆಕೆಯ ಮೇಲೆ ಪೆಟ್ರೋಲ್ ಸುರಿದು, ತಾನೂ ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿ ಜೋರಾಗಿ ಹೊತ್ತಿಕೊಂಡ ನಂತರ ಅವರಿಬ್ಬರೂ ಸಹಾಯಕ್ಕಾಗಿ ಹೊರಗೆ ಓಡಿಬಂದಿದ್ದಾರೆ. ಆಗ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ಧಾರೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕಳ್ಳತನ ಮಾಡುವುದಕ್ಕೂ ಮುನ್ನ ದೇವರ ಪಾದ ಮುಟ್ಟಿ ನಮಸ್ಕರಿಸಿದ!- ವೀಡಿಯೋ ವೈರಲ್
ನಾನು ಮದುವೆಯಾಗಲು ಒಪ್ಪದ ಕಾರಣದಿಂದ ನನ್ನನ್ನು ಕೊಲೆ ಮಾಡಲು ಮುಂದಾಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಆದರೆ ಆತ ನಾವಿಬ್ಬರು ಪ್ರೀತಿಸುತ್ತದ್ದೆವೆ, ಹೀಗಾಗಿ ಒಟ್ಟಿಗೆ ಸಾಯಲು ನಿರ್ಧಾರ ಮಾಡಿದ್ದೆವು ಎಂದು ಹೇಳಿದ್ದಾನೆ. ಇಬ್ಬರು ಬೇರೆ ಬೇರೆ ಹೇಳಿಕೆ ನೀಡಿದ್ದಾರೆ ಈ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.