Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆ ಮಂಟಪದಲ್ಲೇ ಕೈ ಕೊಟ್ಟ ವರ, ಕಾದು ಕಾದು ಸುಸ್ತಾದ ವಧು – ಇದು ಲವ್ ಸೆಕ್ಸ್ ದೋಖಾ ಕಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮದುವೆ ಮಂಟಪದಲ್ಲೇ ಕೈ ಕೊಟ್ಟ ವರ, ಕಾದು ಕಾದು ಸುಸ್ತಾದ ವಧು – ಇದು ಲವ್ ಸೆಕ್ಸ್ ದೋಖಾ ಕಥೆ

Districts

ಮದುವೆ ಮಂಟಪದಲ್ಲೇ ಕೈ ಕೊಟ್ಟ ವರ, ಕಾದು ಕಾದು ಸುಸ್ತಾದ ವಧು – ಇದು ಲವ್ ಸೆಕ್ಸ್ ದೋಖಾ ಕಥೆ

Public TV
Last updated: October 19, 2017 4:49 pm
Public TV
Share
2 Min Read
UDP1
SHARE

ಉಡುಪಿ: ಮದುವೆಯಾಗುವುದಾಗಿ ನಂಬಿಸಿ, ದಿನಾಂಕವನ್ನು ಫಿಕ್ಸ್ ಮಾಡಿ ಎಲ್ಲರೂ ಮಂಟಪಕ್ಕೆ ಬಂದಿದ್ದಾರೆ. ಆದರೆ ಮದುವೆ ಗಂಡೇ ಬರಲಿಲ್ಲ. ಇದರಿಂದ ಮದುವೆ ಮಂಟಪದ ಮುಂದೆ ವಧು ಕಾದು ಕಾದು ಸುಸ್ತಾದ್ರೆ ಅತ್ತ ಕೊನೆಗೂ ವರ ಬರದೆ ಪರಾರಿಯಾಗಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.

ಲಲಿತಾ ಮದುವೆ ಸಭಾಂಗಣ ಮುಂದೆ ಕಾದು ಕಾದು ಸುಸ್ತಾದ ವಧು. ಮಂಜುನಾಥ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿ ಪರಾರಿಯಾದವನು. ಇವರಿಬ್ಬರೂ ಸುಮಾರು ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದರು. ರಿಜಿಸ್ಟರ್ ಮದುವೆ ಕೂಡ ಮಾಡಿಕೊಂಡಿದ್ದು, ಈಗ ಕುಟುಂಬಸ್ಥರು ಸೇರಿ ಸಾಂಪ್ರದಾಯಿಕವಾಗಿ ಮದುವೆ ಮಾಡಲು ಮುಂದಾಗಿದ್ದರು. ಆದರೆ ಈ ಸಂದರ್ಭದಲ್ಲಿ ಮಂಜುನಾಥ ಕೈಕೊಟ್ಟು ಪರಾರಿಯಾಗಿದ್ದಾನೆ.

UDP

ಲಲಿತಾ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಆಯಾ ಕೆಲಸ ಮಾಡಿಕೊಂಡಿದ್ದರು. ಅದೇ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕೆಲಸಕ್ಕೆ ಮಂಜುನಾಥ ಬಂದಿದ್ದ. ಆಗಿನಿಂದಲೇ ಅವರ ಮಧ್ಯ ಪ್ರೀತಿ ಪ್ರಾರಂಭವಾಗಿತ್ತು. ಲಲಿತಾ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮನೆಯಿಂದಲೇ ಊಟವನ್ನೂ ತಂದು ಕೊಡುತ್ತಿದ್ದ. ಇವರಿಬ್ಬರೂ ದೇವಸ್ಥಾನ, ಪಾರ್ಕ್ ಮುಂತಾದ ಕಡೆಗಳಲ್ಲಿ ಸುತ್ತಾಡಿದ್ದರು. ಕೆಲವು ತಿಂಗಳ ಹಿಂದೆ ಇವರಿಬ್ಬರ ನಡುವೆ ದೈಹಿಕ ಸಂಪರ್ಕವು ಕೂಡ ನಡೆದಿತ್ತು.

ಲಲಿತಾ ಹಾಗೂ ಮಂಜುನಾಥ್ ಒಡನಾಟ ಕುಟುಂಸ್ಥರಿಗೆ ಗೊತ್ತಾದ ನಂತರ ಅವರನ್ನು ಠಾಣೆಗೆ ಕರೆಸಿ ಮಾತುಕತೆ ನಡೆಸಿದ್ದು, ಸೆಪ್ಟೆಂಬರ್ 25 ರಂದು ರಿಜಿಸ್ಟರ್ ಮ್ಯಾರೇಜ್ ಮಾಡಿಸಿದ್ದರು. ರಿಜಿಸ್ಟರ್ ಮ್ಯಾರೇಜ್ ಆದ ಎರಡು ದಿನಗಳ ಬಳಿಕ ಮನೆಗೆ ಹೋಗಿ ಮಂಜುನಾಥ ತನ್ನ ಮದುವೆಯಾಗಿರುವ ಬಗ್ಗೆ ಪ್ರಸ್ತಾಪಿಸಿದ್ದ. ಈ ಸಂದರ್ಭದಲ್ಲಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರ ಕುಟುಂಬದವರು ಸೇರಿ ಅಕ್ಟೋಬರ್ 6 ರಂದು ಅಂಪಾರಿನ ಶ್ರೀ ವಾಸುಕಿ ಸುಬ್ರಹ್ಮಣ್ಯ ಮತ್ತು ನಾಗಯಕ್ಷಿ ದೇವಸ್ಥಾನದಲ್ಲಿ ಮದುವೆ ನಿಗದಿಪಡಿಸಿದ್ದರು. ಕುಟುಂಬಸ್ಥರು, ಸ್ನೇಹಿತರು ಹಾಗೂ ಲಲಿತಾ ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ಸಿಬ್ಬಂದಿಗಳೆಲ್ಲರೂ ಮದುವೆ ಸಮಾರಂಭಕ್ಕೆ ಆಗಮಿಸಿದ್ದರು.

1111

ಮದುಮಗನೇ ನಾಪತ್ತೆ: ಮದುವೆಗೆ ಎಲ್ಲಾ ತಯಾರಿಯೂ ಆಗಿತ್ತು. ಆದರೆ ಮದುಮಗ ಮಂಜುನಾಥ್ ಮಾತ್ರ ಮದುವೆ ಮಂಟಪಕ್ಕೆ ಬರಲೇ ಇಲ್ಲ. ಮಂಟಪದ ಮುಂದೆ ಕಾದು ಕಾದು ಸುಸ್ತಾದ ಲಲಿತಾ ನಾನು ಕಾನೂನು ರೀತಿಯಲ್ಲಿ ಮದುವೆಯಾಗಿದ್ದೇನೆ. ನನ್ನ ಗಂಡನನ್ನು ಕರೆಸಿ ಎಂದು ಮಂಜುನಾಥನ ಮನೆ ಮುಂದೆ ಧರಣಿ ಕುಳಿತ್ತಿದ್ದಾರೆ. ನನ್ನ ಕುಟುಂಬದವರಿಗೆ ಅನ್ಯಾಯ ಆಗಿದೆ ಎಂದು ಮದುವೆಗೆಂದು ಪ್ರಿಂಟ್ ಮಾಡಿದ ಬ್ಯಾನರ್ ಮತ್ತು ಆಮಂತ್ರಣ ಪತ್ರಿಕೆ ಹಿಡಿದು ನ್ಯಾಯ ಕೊಡಿಸಿ ಎಂದು ಗಂಡನ ಮನೆಯ ಮುಂದೆ ನಿಂತು ಅಂಗಲಾಚಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಈ ಕುರಿತು ಮಾತುಕತೆ ನಡೆಸೋಣ. ಮನೆಯ ಮುಂದೆ ಗಲಾಟೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಆದರೂ ಲಲಿತಾ ಮತ್ತು ಕುಟುಂಬಸ್ಥರು ಹಠವಿಡಿದು ಅಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಂಜುನಾಥನ ಭಾವ ಚಂದ್ರ ಮತ್ತು ಲಲಿತಾ ಕುಟುಂಬಸ್ಥರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.

22223

ಕುಂದಾಪುರ ಠಾಣೆಯಲ್ಲಿ ಯುವತಿ ತನಗೆ ಮೋಸವಾಗಿದೆ ಎಂದು ದೂರು ನೀಡಿದ್ದಾರೆ. ಅತ್ತ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಮಂಜುನಾಥ ಕಾಣೆಯಾಗಿದ್ದಾನೆ ಎಂಬ ದೂರು ಕೂಡ ದಾಖಲಾಗಿದೆ.

vlcsnap 2017 10 19 16h15m27s71

vlcsnap 2017 10 19 16h15m03s57

vlcsnap 2017 10 19 16h16m55s185

TAGGED:marriagepoliceprotestPublic TVudupiಉಡುಪಿನಾಪತ್ತೆಪಬ್ಲಿಕ್ ಟಿವಿಪೊಲೀಸ್ಪ್ರತಿಭಟನೆಮದುವೆ ಮಂಟಪ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
3 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
7 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
13 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
23 minutes ago
DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
31 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
34 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?