ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗದ ಸಮಗ್ರ ಕಾಯ್ದೆ ರೂಪಿಸಲು ಜುಲೈ 1ರಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಸತ್ಯಾಗ್ರಹಕ್ಕೆ ಕರೆ ಕೊಟ್ಟಿದ್ದಾರೆ. ಈ ಪ್ರತಿಭಟನೆಗೆ ನಟಿ ಪೂಜಾ ಗಾಂಧಿ ಮತ್ತು ಲವ್ಲಿ ಸ್ಟಾರ್ ಪ್ರೇಮ್ (Lovely Star Prem) ಬೆಂಬಲಿಸಿದ್ದಾರೆ. ಇದನ್ನೂ ಓದಿ:ವಿಶ್ವಕಪ್ ಗೆದ್ದ ಭಾರತ- ಸಂಭ್ರಮಿಸಿದ ಸಿನಿತಾರೆಯರು
View this post on Instagram
ಒಂದು ಭಾಷೆ ಉಳಿಯಬೇಕಾದರೆ ಎರಡು ಕಾರಣ ಇರುತ್ತದೆ. ಒಂದು ಭಾಷೆಯ ಮೇಲೆ ಪ್ರೀತಿ ಇರಬೇಕು. ಆ ಭಾಷೆಯ ಬಗ್ಗೆ ಹೆಮ್ಮೆ ಇರಬೇಕು. 2ನೇ ಕಾರಣ, ಕನ್ನಡ ಅನ್ನದ ಭಾಷೆಯಾಗಿರಬೇಕು ಎಂದು ‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಕೆಲಸದಲ್ಲಿ ಶೇಕಡ 100ರಷ್ಟು ಮೀಸಲಾತಿ ಸಿಗಬೇಕು. ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆಧ್ಯತೆ ಸಿಗಬೇಕು. ಇದು ಕನ್ನಡ ಬೆಳವಣಿಗೆಗೆ ಮುಖ್ಯ ಕಾರಣವಾಗುತ್ತದೆ ಎಂದಿದ್ದಾರೆ.
ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಜುಲೈ 1ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಸಮಾವೇಶ ಆಯೋಜನೆ ಆಗುತ್ತಿದೆ. ಈ ಹೋರಾಟಕ್ಕೆ ನಾನು ಇರುತ್ತೇನೆ. ನೀವು ಬನ್ನಿ ಎಂದು ಪೂಜಾ ಗಾಂಧಿ (Pooja Gandhi) ಬೆಂಬಲ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಕನ್ನಡಿಗರಿಗೆ ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಸಿಗಬೇಕು. ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು ಅಂತ ಬೃಹತ್ ಪ್ರತಿಭಟನೆ ಸತ್ಯಾಗ್ರಹವನ್ನು ಜುಲೈ 1ರಂದು ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದಾರೆ. ಒಬ್ಬ ಕನ್ನಡಿಗನಾಗಿ ಈ ಪ್ರತಿಭಟನೆಗೆ ನನ್ನ ಬೆಂಬಲವು ಇದೆ ಎಂದು ಲವ್ಲಿ ಸ್ಟಾರ್ ಪ್ರೇಮ್ ಕೂಡ ಮಾತನಾಡಿದ್ದಾರೆ.