ಚಾಮರಾಜನಗರ: ಪ್ರೀತ್ಸೆ ಪ್ರೀತ್ಸೆ ಎಂದು ವಿದ್ಯಾರ್ಥಿನಿಯ ಹಿಂದೆ ಬಿದ್ದು, ಕೊಲೆ ಬೆದರಿಕೆ ಹಾಕಿದ್ದ ಪಾಗಲ್ ಪ್ರೇಮಿಯನ್ನು ಗುಂಡ್ಲುಪೇಟೆ ಪೊಲೀಸರು (Gundlupete Police) ಬಂಧಿಸಿದ್ದಾರೆ.
ಆಯೂಬ್ ಖಾನ್ ಬಂಧಿತ ಆರೋಪಿ. ಗುಂಡ್ಲುಪೇಟೆಯಿಂದ ಮೈಸೂರು (Mysuru) ಖಾಸಗಿ ಕಾಲೇಜಿಗೆ ಸೇರಿದ್ದ ವಿದ್ಯಾರ್ಥಿನಿಯ ಬಳಿ ಆರೋಪಿ, ನಿನ್ನ ಸ್ನೇಹಿತೆಯ ಸಹೋದರನೆಂದು ಸುಳ್ಳು ಹೇಳಿ ಆಕೆಗೆ ಗಾಳ ಹಾಕಿದ್ದ. ನೀನು ಕೂಡ ನನ್ನ ಮುದ್ದು ತಂಗಿ ಎಂದು ಆಯೂಬ್ ಪರಿಚಯ ಮಾಡಿಕೊಂಡಿದ್ದ. ಆತನ ಮೊದಲು ಹಿಂದು ಧರ್ಮದವನೆಂದು ವಿದ್ಯಾರ್ಥಿನಿ ಬಳಿ ಸುಳ್ಳು ಹೇಳಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹೇಮಾವತಿ ನದಿಗೆ ಬಿದ್ದ ಕಾರು – ಇಬ್ಬರ ಶವ ಪತ್ತೆ, ಮತ್ತಿಬ್ಬರು ಕೊಚ್ಚಿ ಹೋಗಿರೋ ಶಂಕೆ
ಆಯೂಬ್ ಖಾನ್ ಹಿಂದೂ ಎಂದು ಹೇಳಿರುವುದು ಸುಳ್ಳೆಂದು ತಿಳಿದ ವಿದ್ಯಾರ್ಥಿನಿ ಆತನಿಂದ ದೂರವಾಗಿದ್ದಳು. ಆದರೆ ಆಯೂಬ್ ಮಾತ್ರ ನೀನಂದ್ರೆ ನಂಗೆ ಇಷ್ಟ. ನನ್ನನ್ನ ಮಾತನಾಡಿಸು ಎಂದು ಆಕೆಯನ್ನು ಪೀಡಿಸುತ್ತಿದ್ದ. ಅಲ್ಲದೇ ಅವಾಚ್ಯ ಶಬ್ಧಗಳಿಂದ ಆಕೆಯನ್ನು ನಿಂದಿಸಿ, ಕೊಲೆ ಮಾಡುವ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ಮಗಳ ಅಶ್ಲೀಲ ವೀಡಿಯೋ ಹೊರಬಿಡುವ ಬೆದರಿಕೆ; 20 ಲಕ್ಷಕ್ಕೆ ಬೇಡಿಕೆಯಿಟ್ಟ ಮೂವರು ಯುವಕರ ಬಂಧನ
ಆತನ ಬೆದರಿಕೆಗೆ ಹೆದರಿದ ವಿದ್ಯಾರ್ಥಿನಿ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ವಿದ್ಯಾರ್ಥಿನಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು, ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

