ಚಿಕ್ಕಮಗಳೂರು: ಪ್ರೀತಿಸಿದ ಹುಡುಗಿ ಮದುವೆಯಾಗಲು ನಿರಾಕರಿಸಿದಳೆಂದು ಮನನೊಂದು ಪ್ರಿಯಕರ ಆತ್ಮಹತ್ಯೆಯ ದಾರಿ ಹಿಡಿದ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚೇತನ್(31) ಆತ್ಮಹತ್ಯೆಗೆ ಶರಣಾದ ಯುವಕ. ಎನ್.ಆರ್. ಪುರ ತಾಲೂಕಿನ ಮುತ್ತಿನಕೊಪ್ಪ ಬಳಿಯ ಶಂಕರಪುರದಲ್ಲಿ ಈ ಘಟನೆ ನಡೆದಿದೆ. ನನಗೆ ಶ್ವೇತಾ(ಹೆಸರು ಬದಲಾಯಿಸಲಾಗಿದೆ) ಮೋಸ ಮಾಡಿದಳು ಎಂದು ವಾಯ್ಸ್ ಮೆಸೇಜ್ ಕಳುಹಿಸಿ ಚೇತನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ; ಈಜಲು ಹೋದ ಇಬ್ಬರು ಬಾಲಕಿಯರು ನೀರುಪಾಲು
ನಾನು ಶ್ವೇತಾ ಕಳೆದ 9 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ನನ್ನಿಂದ ಆಕೆ 4 ಲಕ್ಷ ರೂ. ಹಣವನ್ನು ಕಿತ್ತುಕೊಂಡಿದ್ದಾಳೆ ಎಂದು ವಾಯ್ಸ್ ಮೆಸೇಜ್ ನಲ್ಲಿ ಚೇತನ್ ಗಂಭೀರ ಆರೋಪ ಮಾಡಿದ್ದಾನೆ. ಅಲ್ಲದೆ ನನ್ನ ಸಾವಿಗೆ ನ್ಯಾಯ ಸಿಗಬೇಕೆಂದರೆ ಆಕೆಗೆ ಶಿಕ್ಷೆಯಾಗಬೇಕು. ನನ್ನ ಚಿತೆಗೆ ಆಕೆಯೇ ಬೆಂಕಿ ಇಡಬೇಕು, ಆಕೆ ಬರುವತನಕ ಹೆಣವನ್ನು ಕೆಳಗಿಳಿಸಬೇಡಿ. ನನಗೆ ಮಾನಸಿಕ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ವಾಯ್ಸ್ ಮೆಸೇಜ್ ಹಾಗೂ ಡೆತ್ ನೋಟ್ ಮೂಲಕ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾನೆ.
ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.