ರಾಯಚೂರು: ಅನೈತಿಕ ಸಂಬಂಧ ಹೊಂದಿದ್ದರೆನ್ನಲಾದ ಪ್ರೇಮಿಗಳಿಬ್ಬರೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನ ದೇವದುರ್ಗದ ಸಮುದ್ರ ಗ್ರಾಮದಲ್ಲಿ ನಡೆದಿದೆ.
ಗುಂಡಯ್ಯ(22) ಹಾಗೂ ರೇಣುಕಮ್ಮ(28) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರ ಮಧ್ಯೆ ನಾಲ್ಕು ವರ್ಷಗಳಿಂದ ಪ್ರೇಮವಿತ್ತು ಎನ್ನಲಾಗಿದೆ. ಮೂರು ತಿಂಗಳ ಹಿಂದೆ ಗುಂಡಯ್ಯನಿಗೆ ಬೇರೆ ಯುವತಿ ಜೊತೆ ಮದುವೆಯಾಗಿತ್ತು. ಅಲ್ಲದೆ ರೇಣುಕಮ್ಮಳಿಗೆ ಎರಡು ಮಕ್ಕಳಿದ್ದರು. ಈ ಮಧ್ಯೆ ಇವರಿಬ್ಬರು ಸಂಬಂಧ ಹೊಂದಿದ್ದರು ಎನ್ನಲಾಗಿದೆ.
ಇಬ್ಬರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಈ ಘಟನೆ ಹಿನ್ನೆಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.