ಪ್ರೀತಿಗೆ ವಿರೋಧ: ಒಂದೇ ಸೀರೆಯಲ್ಲಿ ನೇಣಿಗೆ ಶರಣಾದ ಅಣ್ಣ-ತಂಗಿ

Public TV
1 Min Read
lover

ಭುನವೇಶ್ವರ: ಒಡಿಶಾದ ನಬರಂಗಪುರ ಜಿಲ್ಲೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹಗಳು ಪತ್ತೆಯಾಗಿವೆ.

ಈ ಘಟನೆ ಡಬುಗಾನ್ ಪಂಚಾಯತ್ ಅಡಿಯಲ್ಲಿ ಬರುವ ಟ್ಯಾಂಗಿನಿ ಗ್ರಾಮದ ಬೆಟ್ಟದ ಮೇಲೆ ನಡೆದಿದೆ. ಸುನಾಧರ್ ಜಾನಿ (18) ಮತ್ತು ಕುಮಾರಿ ಜಾನಿ (19) ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು ಎಂದು ಗುರುತಿಸಲಾಗಿದೆ. ಇವರಿಬ್ಬರು ಭಾನುವಾರ ರಾತ್ರಿ ಮನೆಯವರು ನಿದ್ದೆ ಮಾಡುತ್ತಿದ್ದ ವೇಳೆ ಮನೆ ಬಿಟ್ಟು ಬಂದಿದ್ದಾರೆ. ಬಳಿಕ ಊರಿನ ಹೊರಗೆ ಬೆಟ್ಟದ ಮೇಲೆ ಹೋಗಿ ಒಂದು ಸೀರೆಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

love

ಮುಂಜಾನೆ ಗ್ರಾಮಸ್ಥರು ಬೆಟ್ಟದ ಮೇಲೆ ಹೋದಾಗ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ನಂತರ ತಕ್ಷಣ ಕುಟುಂಬದವರಿಗೆ ಮಾಹಿತಿ ತಿಳಿಸಿದ್ದಾರೆ. ಅವರು ಬಂದು ಇಬ್ಬರನ್ನು ಗುರುತಿಸಿದ್ದಾರೆ. ಇಬ್ಬರು ಕುಟುಂಬದವರು ಡಬುಗಾನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಸುನಾಧರ್ ಮತ್ತು ಕುಮಾರಿ ಇಬ್ಬರು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರು ಸಂಬಂಧದಲ್ಲಿ ಅಣ್ಣ-ತಂಗಿಯಾಗಿದ್ದು, ಇವರ ಪ್ರೀತಿಯ ಬಗ್ಗೆ ಮನೆಯವರಿಗೆ ತಿಳಿದಿದೆ. ಮನೆಯಲ್ಲಿ ಪೋಷಕರು ಇವರ ಮದುವೆಗೆ ನಿರಾಕರಿಸಿದ್ದಾರೆ. ಇದರಿಂದ ಮನನೊಂದ ಇವರಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

love complaint 1

ಸ್ಥಳಕ್ಕೆ ಎಸ್‍ಐ ರಾಂಕನಿಧಿ ಸಾಹು ಮತ್ತು ತಂಡ ಧಾವಿಸಿ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದು, ಬಳಿಕ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *