ಕಾಫಿನಾಡಲ್ಲಿ ಲವರ್ಸ್‌ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ – ಪ್ರೇಮಿಗಳ ಸಾವಿಗೆ ಮೂರನೇಯವಳು ಕಾರಣ?

Public TV
2 Min Read
chikkamagaluru lovers suicide

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಸಮೀಪದ ಗುಲ್ಲನ್‍ಪೇಟ್-ಸತ್ತಿಹಳ್ಳಿಯ ಕಾಡಿನಲ್ಲಿ ಒಂದೇ ನೇಣಿನ ಕುಣಿಕೆಗೆ ಕೊರಳೊಡ್ಡಿ ಪ್ರೇಮಿಗಳ (Lovers) ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರೇಮಿಗಳ ಸಾವಿಗೆ ಮೂರನೇಯವಳು ಕಾರಣ ಅಂಶ ಬಯಲಾಗಿದೆ.

ಚಿಕ್ಕಮಗಳೂರು (Chikkamagaluru) ತಾಲೂಕಿನ ಮಲ್ಲಂದೂರು ಸಮೀಪದ ಕಲ್ಲುಗುಡ್ಡೆ ಗ್ರಾಮದ ದರ್ಶನ್ ಹಾಗೂ ಹಾಸನ (Hassan) ಜಿಲ್ಲೆ ಸಕಲೇಶಪುರ ತಾಲೂಕಿನ ಹಾನ್‍ಬಾಳು ಗ್ರಾಮದ ಪೂರ್ವಿಕಾ ಆಲ್ದೂರು ಸಮೀಪದ ಗುಲ್ಲನ್‍ಪೇಟೆಯ ಸತ್ತಿಹಳ್ಳಿಯ ನಿರ್ಜನ ಪ್ರದೇಶದಲ್ಲಿ ನೇಣಿಗೆ ಕೊರಳೊಡ್ಡಿದ್ದರು. ಈ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ದರ್ಶನ್ ಹಾಗೂ ಪೂರ್ವಿಕಾ ಮದುವೆಗೆ ಮನೆಯವರು ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಆದರೆ ಆ ಸಂದರ್ಭದಲ್ಲಿ ದರ್ಶನ್ ಊರಿನದ್ದೇ ಹುಡುಗಿಯೊಬ್ಬಳು, ದರ್ಶನ್‍ನಿಂದ ನನಗೆ ಅನ್ಯಾಯವಾಗಿದೆ ಎಂದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಈ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಸಂಬಂಧಿಗಳು ಆರೋಪಿಸಿದ್ದಾರೆ.

police jeep 1

ಮಂಗಳೂರಿಗೆ (Mangaluru) ಹೋಗಿ ಬರುತ್ತಿದ್ದ ದರ್ಶನ್‍ಗೆ ಮಂಗಳೂರಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪೂರ್ವಿಕಾ ನಡುವೆ ಸ್ನೇಹವಾಗಿತ್ತು. ಸ್ನೇಹ ಪ್ರೀತಿಗೆ ತಿರುಗಿತ್ತು. ವಿಷಯ ಮನೆಯವರಿಗೆ ತಿಳಿದು 5 ವರ್ಷದ ಬಳಿಕ ಮದುವೆ ಮಾಡುತ್ತೇವೆ ಎಂದಿದ್ದರು. ಆದರೆ, ಒಂದು ತಿಂಗಳ ಹಿಂದೆ ದರ್ಶನ್ ವಿರುದ್ಧ ತಾಲೂಕಿನ ಮಲ್ಲಂದೂರು ಠಾಣೆಯಲ್ಲಿ ಹುಡುಗಿಯೊಬ್ಬಳು ನನಗೆ ದರ್ಶನ್‍ನಿಂದ ಅನ್ಯಾಯವಾಗಿದೆ. ನಾನು ಗರ್ಭಿಣಿ ಇದ್ದೇನೆ. ಈಗ ಮದುವೆ ಆಗೋಕೆ ಒಪ್ಪುತ್ತಿಲ್ಲ. ನನಗೆ ನ್ಯಾಯ ಕೊಡಿಸಿ ಎಂದು ದೂರು ನೀಡಿದ್ದಳು. ಈ ಕೇಸ್ ಪ್ರೇಮಿಗಳ ಮಧ್ಯೆ ಬಿರುಕು ಮೂಡಿಸಿತ್ತು. ಅಷ್ಟೇ ಅಲ್ಲದೇ 6 ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗಿ ಪೂರ್ವಿಕಾಳನ್ನೇ ಮದುವೆ ಆಗೋದಾಗಿ ಹೇಳಿದ್ದ ದರ್ಶನ್ ದೂರುಕೊಟ್ಟ ಹುಡುಗಿಯನ್ನೇ ಮದುವೆಯಾಗೋ ಸಂದರ್ಭವೂ ಎದುರಾಗಿತ್ತು.

ಈ ವಿಚಾರ ಗೊತ್ತಾಗುತ್ತಿದ್ದಂತೆ ಪೂರ್ವಿಕ ಸಿಟ್ಟಾಗಿದ್ದಳು. ದರ್ಶನ್ ಎಲ್ಲಾ ರೀತಿಯಲ್ಲೂ ಪೂರ್ವಿಕಾಳ ಮನವೊಲಿಸುವ ಪ್ರಯತ್ನ ಮಾಡಿದ್ದಳು. ಡಿ.ಎನ್.ಎ. ಟೆಸ್ಟ್ ಬೇಕಾದರೂ ಮಾಡಿಸು ಎಂದು ಬೇಡಿಕೊಂಡಿದ್ದ. ಆದರೆ, 3 ದಿನದ ಹಿಂದೆ ಮಂಗಳೂರಿನಿಂದ ಬಂದ ಪೂರ್ವಿಕಾ, ದರ್ಶನ್‍ನನ್ನು ಭೇಟಿಯಾಗಿ ಮಾತನಾಡಿದ್ದಾಳೆ. ಆ ವೇಳೆ ಇಬ್ಬರ ನಡುವೆ ಏನಾಯ್ತೋ ಗೊತಿಲ್ಲ. ಏನು ಮಾತನಾಡಿಕೊಂಡರೋ ಅದೂ ಗೊತ್ತಿಲ್ಲ. ಆದರೆ, ಅಪ್ಪ-ಅಮ್ಮನಿಗೆ ಕ್ಷಮಿಸಿ, ಅವನನ್ನ ಬಿಟ್ಟು ಇರೋಕೆ ಆಗುತ್ತಿಲ್ಲ ಎಂದು ವಾಯ್ಸ್ ಮೆಸೇಜ್ ಕಳಿಸಿ ಪೂರ್ವಿಕಾ ತನ್ನ ಪ್ರೇಮಿ ಜೊತೆ ನೇಣಿಗೆ ಕೊರಳೊಡ್ಡಿದ್ದಾಳೆ. ಇದನ್ನೂ ಓದಿ: ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

Lovers 2

ಬದುಕಿದ್ದರೆ ದೂರುಕೊಟ್ಟ ಹುಡುಗಿಯನ್ನೇ ಮದುವೆ ಆಗಬೇಕು ಎಂಬ ಭಯವೋ ಅಥವಾ 6 ವರ್ಷದ ಪ್ರೀತಿಗೆ ಮೋಸ ಮಾಡುವ ಅಳುಕೋ ಗೊತ್ತಿಲ್ಲ. ಇಬ್ಬರು ಒಂದೇ ಮರಕ್ಕೆ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಿಕಿತ್ಸೆಗೆಂದು ಬಂದಿದ್ದ ತಾಯಿ, ಮಗಳು – ಆಸ್ಪತ್ರೆಯ ಕಬೋರ್ಡ್‍ನಲ್ಲಿ, ಹಾಸಿಗೆಯ ಕೆಳಗೆ ಶವವಾಗಿ ಪತ್ತೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *