ಬಾಗಲಕೋಟೆ: ಮದುವೆಯಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ (Sub-Registrar Office) ಆಗಮಿಸಿದ್ದ ಪ್ರೇಮಿಗಳ ಮೇಲೆ ಯುವತಿ ಕಡೆಯುವರು ದಾಳಿ ನಡೆಸಿ ಯುವತಿಯನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಶುಕ್ರವಾರ ಜಿಲ್ಲೆಯ ಜಮಖಂಡಿ (Jamkhandi ) ನಗರದಲ್ಲಿ ನಡೆದಿದೆ.
ನಗರದ ಉಳ್ಳಾಗಡ್ಡಿ ಏರಿಯಾದ ಪ್ರೇಮಿಗಳಾದ ಗಾಣಿಗ ಸಮುದಾಯದ ಲಕ್ಷ್ಮೀ, ಮರಾಠಾ ಸಮುದಾಯದ ಅಪ್ಪಾಜಿ ಅಂತರ್ಜಾತಿ ವಿವಾಹಕ್ಕೆ ಬೆಳಿಗ್ಗೆ ರಿಜಿಸ್ಟರ್ ಮದುವೆ ಮಾಡಿಕೊಳ್ಳಲು ಜಮಖಂಡಿಯ ಸಬ್ ರಿಜಿಸ್ಟ್ರಾರ್ ಕಚೇರಿಗೆ ಆಗಮಿಸಿದ್ದರು. ಇದನ್ನೂ ಓದಿ: ಪ್ರಮೋದಾದೇವಿ ಒಡೆಯರ್ಗೆ ನಮ್ಮ ಗ್ರಾಮ ರಿಜಿಸ್ಟರ್ ಮಾಡಿಕೊಡಬೇಡಿ: ಡಿಸಿಗೆ ಗ್ರಾಮಸ್ಥರ ಮನವಿ
ವಿಷಯ ತಿಳಿದು ಕಚೇರಿಗೆ ಧಾವಿಸಿದ ಯುವತಿಯ ಮನೆಕಡೆಯ ಪೋಷಕರು ಯುವತಿಗೆ ರಕ್ತ ಬರುವ ಹಾಗೆ ಹಲ್ಲೆ ಮಾಡಿದ್ದಾರೆ. ಮೂರ್ಛೆ ಹೋಗಿ ಬಿದ್ದರೂ ಬಿಡದ ಹುಡುಗಿಯ ಮನೆಯವರು ಯುವತಿಗೆ ನೀರು ಕುಡಿಸಿ, ಮನೆಗೆ ಎಳೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಹೆಂಡತಿಯನ್ನು ಮನೆಗೆ ಕರೆದಿದ್ದಕ್ಕೆ ಚಾಕು ಇರಿದ ಬಾಮೈದ – ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಪತಿ!
ಈ ನಡುವೆ ರಿಕ್ಷಾದಲ್ಲಿದ್ದ ಯುವತಿ ಬಾಯಿಯಿಂದ ರಕ್ತ ಸುರಿಯುತ್ತಿದ್ದರೂ ಪ್ರಿಯಕರನತ್ತ ಕೈ ಸನ್ನೆ ಮಾಡುತ್ತಿದ್ದಳು. ಹಲ್ಲೆಗೆ ಒಳಗಾಗಿರುವ ಯುವತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜಮಖಂಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಿಯಕರ ಸ್ಥಳೀಯ ಜಮಖಂಡಿ ಪೊಲೀಸ್ ಠಾಣೆಯಲ್ಲಿ ತಂಗಿದ್ದಾನೆ.