Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ರಿಗೇಡ್ ಸಮೂಹದಿಂದ 1 ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಎಂ.ಬಿ ಪಾಟೀಲ್ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬ್ರಿಗೇಡ್ ಸಮೂಹದಿಂದ 1 ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಎಂ.ಬಿ ಪಾಟೀಲ್ ಚಾಲನೆ

Latest

ಬ್ರಿಗೇಡ್ ಸಮೂಹದಿಂದ 1 ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಎಂ.ಬಿ ಪಾಟೀಲ್ ಚಾಲನೆ

Public TV
Last updated: October 17, 2025 11:00 pm
Public TV
Share
4 Min Read
M.B.Patil Lakh Trees Movement 1
SHARE

– ಬೆಂಗಳೂರು ಸುತ್ತಮುತ್ತ ಅರ್ಬನ್ ಫಾರೆಸ್ಟ್‌ಗೆ ಅವಕಾಶ

ಬೆಂಗಳೂರು: ನಗರೀಕರಣ, ಕೈಗಾರಿಕೀಕರಣಗಳಿಂದಾಗಿ ಬೆಂಗಳೂರಿಗೆ (Bengaluru) ಇದ್ದ ಉದ್ಯಾನ ನಗರಿ ಎಂಬ ಹೆಗ್ಗಳಿಕೆ ಮಸುಕಾಗಿದೆ. ಆದರೆ, ಇಲ್ಲಿ ಮತ್ತು ಸುತ್ತಮುತ್ತಲಿನ ಪಟ್ಟಣಗಳಲ್ಲಿ ನಗರ ಅರಣ್ಯ (ಅರ್ಬನ್‌ ಫಾರೆಸ್ಟ್)‌ ಬೆಳೆಸಲು ಯಥೇಚ್ಛ ಅವಕಾಶಗಳಿವೆ. ಮುಂದಿನ ದಿನಗಳಲ್ಲಿ ʻನಮ್ಮ ಬೆಂಗಳೂರು, ಹಸಿರು ಬೆಂಗಳೂರುʼ ಆಗಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (M.B.Patil) ಆಶಿಸಿದ್ದಾರೆ.

ಬ್ರಿಗೇಡ್‌ ಫೌಂಡೇಷನ್‌ ಶುಕ್ರವಾರ ದೇವನಹಳ್ಳಿ ಸಮೀಪದ ಹರಳೂರಿನಲ್ಲಿ ಇರುವ ಕೆಐಎಡಿಬಿ ಏರೋಸ್ಪೇಸ್‌ ಪಾರ್ಕ್-‌2ರಲ್ಲಿ ಏರ್ಪಡಿಸಿದ್ದ, ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮ (One Lakh Trees Movement) ʻಫ್ರಮ್‌ ಸ್ಯಾಪ್ಲಿಂಗ್ಸ್‌ ಟು ಎ ಸ್ಯಾಂಕ್ಚುರಿʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

M.B.Patil Lakh Trees Movement M.B.Patil Lakh Trees Movement 1 M.B.Patil Lakh Trees Movement 2

ನಾವು ಕೃಷಿ, ಕೈಗಾರಿಕೆ ಮತ್ತು ಆಹಾರ ಈ ಮೂರೂ ವಲಯಗಳ ನಡುವೆ ಸಮತೋಲನ ಸಾಧಿಸಿಕೊಂಡು ಹೋಗಬೇಕಾಗಿದೆ. ಇವು ನಮ್ಮ ಅಸ್ತಿತ್ವ ಮತ್ತು ಅಭಿವೃದ್ಧಿಗೆ ಮೂಲಭೂತ ಅಗತ್ಯಗಳಾಗಿವೆ. ಇವುಗಳಲ್ಲಿ ಯಾವುದನ್ನೂ ನಾವು ನಿಷೇಧಿಸುವುದು ಸಾಧ್ಯವಿಲ್ಲ. ಆದ್ದರಿಂದ ಮಿಯಾವಾಕಿ ಅರಣ್ಯದ ಮಾದರಿಯನ್ನು ನಾವು ಅಳವಡಿಸಿಕೊಂಡು, ಪರಿಸರವನ್ನು ಬೆಳೆಸುವ ಕೆಲಸವನ್ನೂ ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ತವರು ವಿಜಯಪುರ ಜಿಲ್ಲೆ ಹಿಂದೆ ಮರಗಳಿಲ್ಲದೆ ಭಣಗುಡುತ್ತಿತ್ತು. ಹತ್ತು ವರ್ಷಗಳ ಹಿಂದೆ ಅಲ್ಲಿ ಕೇವಲ 0.17% ರಷ್ಟು ಮಾತ್ರ ಅರಣ್ಯವಿತ್ತು. ಈಗ ಅಲ್ಲಿ ಸ್ವಪ್ರಯತ್ನದಿಂದ ಒಂದೂವರೆ ಕೋಟಿ ಗಿಡಗಳನ್ನು ನೆಡಲಾಗಿದೆ. ಅರಣ್ಯ ಪ್ರಮಾಣ ಈಗ 2%ರಷ್ಟಾಗಿದೆ. ವಿಜಯಪುರ ಜಿಲ್ಲಾ ಕೇಂದ್ರಕ್ಕೆ ಸಮೀಪದಲ್ಲಿರುವ ಮಮದಾಪುರದಲ್ಲಿ ಸೌರವಿದ್ಯುತ್‌ ಮತ್ತು ಹನಿ ನೀರಾವರಿ ಮೂಲಕ ಅರಣ್ಯವನ್ನು ಸೃಷ್ಟಿಸಲಾಗಿದೆ. ಇದರಿಂದಾಗಿ ಗಿಡಮರಗಳಿಂದ ತುಂಬಿರುವ ಎರಡು ಗುಡ್ಡಗಳೇ ಅಲ್ಲಿ ನಿರ್ಮಾಣವಾಗಿವೆ. ಈ ಮಾದರಿಯನ್ನು ಸ್ವತಃ ಅರಣ್ಯ ಇಲಾಖೆ ಅಳವಡಿಸಿಕೊಂಡಿದ್ದು, ವರ್ಷಕ್ಕೆ ಐದು ಕೋಟಿ ಗಿಡ ನೆಡುವ ಗುರಿ ಹಾಕಿಕೊಂಡಿದೆ. ಇದನ್ನು ನೋಡಲು ಬೇರೆಬೇರೆ ರಾಜ್ಯಗಳು ಮತ್ತು ವಿದೇಶಗಳಿಂದಲೂ ಆಸಕ್ತರು ಬರುತ್ತಿದ್ದಾರೆ. ನ್ಯೂಯಾರ್ಕ್‌ ಟೈಮ್ಸ್‌ ಪತ್ರಿಕೆ ಕೂಡ ಇದರ ಬಗ್ಗೆ ಸವಿವರವಾಗಿ ವರದಿ ಪ್ರಕಟಿಸಿದೆ ಎಂದು ಅವರು ವಿವರಿಸಿದ್ದಾರೆ.

Green Environment, Pure Air — A New ‘Lung’ Taking Shape in Bengaluru!
Launch of the ‘One Lakh Trees Movement’ near KIADB Aerospace Park

Along with my cabinet colleague Shri K. H. Muniyappa, I had the pleasure of launching the “One Lakh Trees Movement” organized by the Brigade… pic.twitter.com/6hmX9kCozu

— M B Patil (@MBPatil) October 17, 2025

ನಮಗೆ ಕೃಷಿಯೂ ಬೇಕು, ಕೈಗಾರಿಕೆಯೂ ಬೇಕು. ಇತ್ತೀಚೆಗೆ ಲಂಡನ್‌ನಲ್ಲಿ ಕ್ಯೂ ಗಾರ್ಡನ್‌ಗೆ ಭೇಟಿ ಕೊಟ್ಟಿದ್ದಾಗ ಅಲ್ಲಿಯ ಮಾದರಿಗಳನ್ನು ವೀಕ್ಷಿಸಿದೆ. ಅದು ನಮ್ಮ ಲಾಲ್‌ಬಾಗ್‌ನಷ್ಟೇ ಇದ್ದರೂ, ಅತ್ಯುತ್ತಮ ವಿಧಾನಗಳು ಅಲ್ಲಿವೆ. ಇದನ್ನೆಲ್ಲ ನಾನು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ವಿವರಿಸಿದ್ದೇನೆ. ಕ್ಯೂ ಗಾರ್ಡನ್‌ನಲ್ಲಿರುವ ಮಾದರಿಗಳನ್ನು ನಮ್ಮಲ್ಲೂ ಅಳವಡಿಸಿಕೊಳ್ಳಬಹುದು. ಬೇರೆ ಯಾರೋ ಬಂದು ನಮ್ಮ ಪರಿಸರವನ್ನು ಸಂರಕ್ಷಿಸುತ್ತಾರೆ ಎಂದುಕೊಳ್ಳುವುದೇ ನಿಜವಾದ ಸಮಸ್ಯೆ ಎಂಬ ಪರಿಸರ ಚಿಂತ ರಾಬರ್ಟ್‌ ಸ್ವಾನ್‌ನ ಮಾತು ನಮಗೆ ಎಚ್ಚರಿಕೆಯ ಗಂಟೆಯಾಗಬೇಕು ಎಂದು ಅವರು ನುಡಿದಿದ್ದಾರೆ.

ಬ್ರಿಗೇಡ್‌ ಸಮೂಹದವರು ವೈಟ್‌ಫೀಲ್ಡ್‌ನಲ್ಲಿ ಮಿಯಾವಾಕಿ ಅರಣ್ಯವನ್ನು ಅಭಿವೃದ್ಧಿ ಪಡಿಸಿರುವುದು ಶ್ಲಾಘನೀಯ ಸಂಗತಿಯಾಗಿದೆ. ನಾನು ಒಂದು ದಿನ ಪರಿಸರಾಸಕ್ತನಾಗಿ ಭೇಟಿ ಕೊಡಲಿದ್ದೇನೆ. ಪರಿಸರ ಸಂರಕ್ಷಣೆಯ ವಿಚಾರದಲ್ಲಿ ನಾನು ಕೈಗಾರಿಕಾ ಸಚಿವನಾಗಿ ಯೋಚಿಸುವುದಿಲ್ಲ. ವಿಜಯಪುರ ಜಿಲ್ಲೆಯೊಂದರಲ್ಲೇ ಒಂದೂವರೆ ಕೋಟಿ ಗಿಡಗಳನ್ನು ನೆಟ್ಟಿರುವಾಗ ರಾಜ್ಯದಲ್ಲಿ ಎಷ್ಟು ಕೋಟಿ ಗಿಡಗಳನ್ನು ನೆಡಬಹುದು ಎನ್ನುವುದು ತಿಳಿಯುತ್ತದೆ. ನಮ್ಮ ಜಿಲ್ಲೆಯಲ್ಲಿ ರೈತರಿಗೆ ಅವರು ಬಯಸುವಂತಹ ಗಿಡಗಳನ್ನೇ ಕೊಡಲಾಗುತ್ತಿದೆ. ಇದರ ಅಂಗವಾಗಿ ಪ್ರತೀವರ್ಷವೂ ವೃಕ್ಷಥಾನ್‌ ನಡೆಸುತ್ತಿದ್ದು, ಅದರಲ್ಲಿ ಹದಿನೈದು ಸಾವಿರ ಮಂದಿ ಉತ್ಸಾಹದಿಂದ ಭಾಗವಹಿಸುತ್ತಾರೆ ಎಂದು ತಮ್ಮ ಅನುಭವ ಹಂಚಿಕೊಂಡರು.

ಪಾಟೀಲ್‌ ಬಗ್ಗೆ ಮುನಿಯಪ್ಪ ಮೆಚ್ಚುಗೆ
ಸಚಿವ ಕೆ ಎಚ್‌ ಮುನಿಯಪ್ಪ ಮಾತನಾಡಿ, ʻಮನಸ್ಸು ಮಾಡಿದರೆ ಎಂತಹ ಅದ್ಭುತವನ್ನು ಸಾಧಿಸಬಹುದು ಎನ್ನುವುದನ್ನು ಸಚಿವ ಎಂ.ಬಿ ಪಾಟೀಲ್‌ರು ವಿಜಯಪುರದಲ್ಲಿ ಮಾಡಿ ತೋರಿಸುತ್ತಿದ್ದಾರೆ. ಇವರಿಂದಾಗಿ, ವಿಜಯಪುರ ಈಗ ಹಸಿರೀಕರಣ ಮತ್ತು ಜಲ ಸಂರಕ್ಷಣೆಯ ನಾಡಾಗಿದೆ. ಈ ಮೂಲಕ ಅವರು ತಮ್ಮನ್ನು ಚುನಾಯಿಸಿದ ಕ್ಷೇತ್ರದ ಋಣವನ್ನು ಶಾಶ್ವತವಾಗಿ ತೀರಿಸಿದ್ದಾರೆ. ಈಗ ಕೂಡ ಪಾಟೀಲರು ಕೈಗಾರಿಕಾ ಸಚಿವರಾಗಿ ದೂರದೃಷ್ಟಿಯಿಂದ ಕೆಲಸ ಮಾಡುತ್ತಿದ್ದು, ಕೆಲದಿನಗಳ ಹಿಂದಷ್ಟೇ ಮೂರು ಲಕ್ಷ ಕೋಟಿ ರೂ. ಬಂಡವಾಳ ತಂದಿದ್ದಾರೆ. ಇಂತಹ ಕೆಲಸ ಇಡೀ ಭಾರತದಲ್ಲೇ ಎಲ್ಲೂ ಆಗುತ್ತಿಲ್ಲ. ಅವರಿಗೆ ನಿಜಕ್ಕೂ ಉಜ್ವಲ ಭವಿಷ್ಯವಿದೆ. ಪರಿಸರ ಸಂರಕ್ಷಣೆಯ ಬಗ್ಗೆಯೂ ಅವರಿಗೆ ಸ್ಪಷ್ಟವಾದ ಚಿಂತನೆ ಇದೆʼ ಎಂದು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಬ್ರಿಗೇಡ್‌ ಸಮೂಹದ ಟ್ರಸ್ಟಿ ಎಂ ಆರ್‌ ಜಯಶಂಕರ್‌, ಬ್ರಿಗೇಡ್‌ ಫೌಂಡೇಷನ್‌ ಸಿಇಒ ಶಿವಯೋಗಿ ಕಳಸದ, ವಿಮಾನ ನಿಲ್ದಾಣ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್‌, ನಿವೃತ್ತ ಪೊಲೀಸ್‌ ಅಧಿಕಾರಿ ಮೇಘರಿಕ್‌, ಹರಳೂರು ಗ್ರಾಪಂ ಅಧ್ಯಕ್ಷ ದೇವರಾಜು ಮುಂತಾದವರು ಉಪಸ್ಥಿತರಿದ್ದರು.

TAGGED:bengaluruM.B PatilOne Lakh Trees Movement
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
25 minutes ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
54 minutes ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
2 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
2 hours ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
2 hours ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?