Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀಗಳು ಹಾಕಿಕೊಟ್ಟ ಮಾರ್ಗ ಸೂರ್ಯ, ಚಂದ್ರ ಇರೋವರೆಗೂ ಚಿರಸ್ಥಾಯಿ – ಲಿಂ.ಚನ್ನಬಸವ ಸ್ವಾಮೀಜಿ ಅಂತಿಮ ದರ್ಶನ ಪಡೆದ ಎಂ.ಬಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ರೀಗಳು ಹಾಕಿಕೊಟ್ಟ ಮಾರ್ಗ ಸೂರ್ಯ, ಚಂದ್ರ ಇರೋವರೆಗೂ ಚಿರಸ್ಥಾಯಿ – ಲಿಂ.ಚನ್ನಬಸವ ಸ್ವಾಮೀಜಿ ಅಂತಿಮ ದರ್ಶನ ಪಡೆದ ಎಂ.ಬಿ.ಪಾಟೀಲ್

Districts

ಶ್ರೀಗಳು ಹಾಕಿಕೊಟ್ಟ ಮಾರ್ಗ ಸೂರ್ಯ, ಚಂದ್ರ ಇರೋವರೆಗೂ ಚಿರಸ್ಥಾಯಿ – ಲಿಂ.ಚನ್ನಬಸವ ಸ್ವಾಮೀಜಿ ಅಂತಿಮ ದರ್ಶನ ಪಡೆದ ಎಂ.ಬಿ.ಪಾಟೀಲ್

Public TV
Last updated: December 12, 2025 11:04 pm
Public TV
Share
2 Min Read
MB Patil 1 1
SHARE

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ (Basavana Bagewadi) ತಾಲೂಕಿನ ಇಂಗಳೇಶ್ವರ ವಿರಕ್ತಮಠದ ಪರಮಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಲಿಂಗೈಕ್ಯರಾದರೂ ಅವರು ನಿರ್ಮಿಸಿರುವ ವಚನಶಿಲಾ ಮಂಟಪ ಮತ್ತು ಹಾಕಿಕೊಟ್ಟಿರುವ ಮಾರ್ಗ ಸೂರ್ಯ ಚಂದ್ರ ಇರುವವರೆಗೂ ಚಿರಸ್ಥಾಯಿ ಯಾಗಿರಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ (MB Patil) ತಿಳಿಸಿದರು.

ಇಂಗಳೇಶ್ವರ ಗ್ರಾಮದಲ್ಲಿ ಲಿಂ.ಶ್ರೀ ಚನ್ನಬಸವ ಮಹಾಸ್ವಾಮಿಗಳ ಅಂತಿಮ ದರ್ಶನ ಪಡೆದ ಅವರು ಭಕ್ತಿಪೂರ್ವಕ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ನುಡಿನಮನ ಸಲ್ಲಿಸಿದರು. ಇದನ್ನೂ ಓದಿ: ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ – ಸಿಎಂ ಸೇರಿ ಗಣ್ಯರ ಸಂತಾಪ

ಶ್ರೀಗಳನ್ನು ಕಳೆದುಕೊಂಡು ನಾವು ಬಡವರಾಗಿದ್ದೇವೆ. ಬಸವಣ್ಣನವರ ಜನ್ಮಭೂಮಿಯಲ್ಲಿ ಬಸವಾದಿ ಶರಣರ ಸಾಹಿತ್ಯ, ವಚನಗಳು ಹಾಗೂ ತತ್ವ ಸಿದ್ಧಾಂತಕ್ಕೆ ತಕ್ಕಂತೆ ಶ್ರೀಗಳು ನಡೆದುಕೊಂಡಿದ್ದಾರೆ. ಅಲ್ಲದೇ, ಅವರ ತತ್ವಗಳ ಪ್ರಸಾರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಯಾರ ನೆರವನ್ನೂ ಪಡೆಯದೆ ಕಷ್ಟಪಟ್ಟು, ಶ್ರಮವಹಿಸಿ, ವಚನಶಿಲಾ ಮಂಟಪ ನಿರ್ಮಿಸಿದ್ದಾರೆ. 12ನೇ ಶತಮಾನದಲ್ಲಿ ಅನುಭವ ಮಂಟಪದ ಬಸವಾದಿ ಶರಣರ ವಚನ ಸಾಹಿತ್ಯವನ್ನು ಶಿಲಾ ಮಂಟಪದ ಮೂಲಕ ಮುಂದಿನ ಪೀಳಿಗೆಗೆ ಶಾಶ್ವತವಾಗಿ ಉಳಿಸುವ ಅಮೂಲ್ಯ ಕಾರ್ಯ ಮಾಡಿದ್ದಾರೆ. ಸರಳ ಜೀವಿಯಾಗಿದ್ದ ಅವರು ಮಾತೃಹೃದಯ ಹೊಂದಿದ್ದರು. ಅವರು ಶತಯುಷಿಗಳಾಗಬೇಕು ಎಂಬುದು ಭಕ್ತರ ಆಶಯವಾಗಿತ್ತು ಎಂದು ಹೇಳಿದರು.

ಬಸವಾದಿ ಶರಣರ ಸಾಲಿನಲ್ಲಿ ಶ್ರೀಗಳು ಕೂಡ ಒಬ್ಬರಾಗಿದ್ದಾರೆ. ಈಗಿನ ಕಿರಿಯ ಶ್ರೀಗಳು ಹಿರಿಯ ಶ್ರೀಗಳ ಮಾರ್ಗ ಅನುಸರಿಸಲಿ. ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ ಬಸವ ಸಾಹಿತ್ಯ ಪ್ರಸಾರಕ್ಕೆ ಸಹಕರಿಸಲಿದೆ. ಸಿಎಂ ಕೂಡ ಶ್ರೀಗಳ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಸರ್ಕಾರದ ಪರವಾಗಿ ಶ್ರೀಗಳಿಗೆ ಗೌರವ ನಮನಗಳನ್ನು ಸಲ್ಲಿಸುತ್ತೇನೆ. ಅವರ ಕೊಡುಗೆ ಅಪಾರ. ದೇವರು ಮತ್ತು ಬಸವಾದಿ ಶರಣರು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರು ದೈಹಿಕವಾಗಿ ನಮ್ಮೊಂದಿಗೆ ಇರದಿದ್ದರೂ ಶಿಲಾಮಂಟಪ ರೂಪದಲ್ಲಿ ನೆಲೆಸಿದ್ದಾರೆ. ಭಕ್ತರೆಲ್ಲರೂ ಅವರು ಹಾಕಿಕೊಟ್ಟಿರುವ ಸನ್ಮಾರ್ಗದಲ್ಲಿ ನಡೆಯೋಣ ಎಂದರು.

ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಮಾತನಾಡಿ, ಸಮಾಜಕ್ಕೆ, ಮಠಾಧೀಶರಿಗೆ ಸಾರ್ವಕಾಲಿಕ ಮಾದರಿ ರೀತಿ ಬದುಕಿ ತೋರಿದ ಮಹಾನ್ ಚೇತನವಾಗಿದ್ದ ಚನ್ನಬಸವ ಶ್ರೀಗಳು ಭಕ್ತರ ಪಾಲಿಗೆ ಮಾತೃಹೃದಯದ ಮಮತಾಮಯಿ ಆಗಿದ್ದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ.ಎಸ್.ಡಿ.ಎಲ್. ಅಧ್ಯಕ್ಷರಾದ ಶಾಸಕ ಸಿ.ಎಸ್.ನಾಡಗೌಡ, ಶಾಸಕ ರಾಜುಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಬಸವನ ಬಾಗೇವಾಡಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿ ಹಿರೇಮಠದ ಸಂಗನಬಸವ ಶಿವಾಚಾರ್ಯರು, ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಇಂಗಳೇಶ್ವರ ವಿರಕ್ತಮಠದ ಸಿದ್ಧಲಿಂಗ ಶ್ರೀಗಳು, ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಧಾರವಾಡ ಮುರುಘಾಮಠ ಶ್ರೀಗಳು, ನಿಜಗುಣಾನಂದ ಸ್ವಾಮೀಜಿ, ನಿಡಸೊಸಿ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಶ್ರೀಗಳು, ಯರನಾಳ ಶ್ರೀಗಳು ಸೇರಿದಂತೆ ನಾಡಿನ ನಾನಾ ಭಾಗಗಳಿಂದ ಆಗಮಿಸಿದ್ದ ಅಪಾರ ಭಕ್ತರು ಉಪಸ್ಥಿತರಿದ್ದರು.ಇದನ್ನೂ ಓದಿ: ಕೊಡಗು | ಹೆದ್ದಾರಿಯಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ – ಬೆಚ್ಚಿಬಿದ್ದ ವಾಹನ ಸವಾರರು

TAGGED:Basavana BagewadiChannabasava MahaswamyMB Patilvijayapuraಎಂ.ಬಿ.ಪಾಟೀಲ್ಚನ್ನಬಸವ ಸ್ವಾಮೀಜಿಬಸವನಬಾಗೇವಾಡಿವಿಜಯಪುರ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

mattighatt falls
Districts

ಶಿರಸಿಯ ಮತ್ತಿಘಟ್ಟ ಫಾಲ್ಸ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Public TV
By Public TV
4 hours ago
Hardik Pandya Suryakumar Yadav
Cricket

ʻThis is for Indiaʼ – ಗೆದ್ದ ಬೆನ್ನಲ್ಲೇ ಸೂರ್ಯ ಮೊದಲ ಮಾತು

Public TV
By Public TV
4 hours ago
India Pakistan
Cricket

ಒಂದೇ ದಿನ ಪಾಕ್‌ ವಿರುದ್ಧ ಎರಡು ಪಂದ್ಯ ಗೆದ್ದ ಭಾರತ 

Public TV
By Public TV
4 hours ago
Tilak Varma Suryakumar Yadav
Cricket

ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಭಾರತಕ್ಕೆ 16-1 ಮುನ್ನಡೆ

Public TV
By Public TV
4 hours ago
MB patil
Districts

ಕಲೆ-ಸಂಸ್ಕೃತಿಗೆ ಬಂಜಾರ ಸಮಾಜದ ಕೊಡುಗೆ ಅಪಾರ: ಎಂ.ಬಿ. ಪಾಟೀಲ್

Public TV
By Public TV
5 hours ago
Team India
Cricket

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?