ಎಂಬಿಪಿ ದಲಿತರನ್ನ ಮಠಾಧೀಶರನ್ನಾಗಿ ಮಾಡುತ್ತಾರಾ: ಪೇಜಾವರ ಶ್ರೀ ಮರುಪ್ರಶ್ನೆ

Public TV
1 Min Read
M B Patil Pejawara swamiji

– ಮಾಜಿ ಸಚಿವರ ಉದ್ವೇಗ, ಆಕ್ರೋಶ ಸರಿಯಲ್ಲ

ಮೈಸೂರು: ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ ಎಂಬ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆಗೆ ಪೇಜಾವರ ಶ್ರೀಗಳು ಮರು ಪ್ರಶ್ನೆ ಹಾಕಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಅದನ್ನು ಮಾಜಿ ಸಚಿವರು ಮಾಡುತ್ತಾರಾ? ಅವರವರ ಧರ್ಮದ ಬಗ್ಗೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇದೆ. ನೀವು ಹಿಂದೂಗಳು, ನಮ್ಮನ್ನು ಬಿಟ್ಟುಹೋಗಬೇಡಿ ಎಂದು ಸಲಹೆ ನೀಡಿದ್ದೇನೆ ಅಷ್ಟೇ. ಎಂ.ಬಿ.ಪಾಟೀಲ್ ಅವರ ಆರೋಪಕ್ಕೆ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.

Pejawara swamiji

ಎಂ.ಬಿ.ಪಾಟೀಲ್ ಅವರ ಉದ್ವೇಗ, ಆಕ್ರೋಶ ಸರಿಯಲ್ಲ. ನಾನು ಲಿಂಗಾಯತ ಮತವನ್ನು ಸರಿಪಡಿಸಲು ಹೋಗುತ್ತಿಲ್ಲ, ಅವರಲ್ಲಿ ಹುಳುಕು ಹೇಳಿಲ್ಲ, ದೋಷಾರೋಪ ಮಾಡಿಲ್ಲ. ಸ್ನೇಹದಿಂದ ಸಹೋದರತ್ವದಿಂದ ನಮ್ಮಲ್ಲೇ ಇರಿ ಎಂದು ಹೇಳುತ್ತಿದ್ದೇನೆ. ನಾನು ಸೌಜನ್ಯದಿಂದ ಕೇಳಿದರೆ ಅವರು ಅಷ್ಟೊಂದು ಆಕ್ರೋಶ ಬರಿತವಾಗಿ ಹೇಳಲು ಕಾರಣವೇನು ಎಂದು ಪ್ರಶ್ನಿಸಿದರು.

ಬಸವಣ್ಣನವರ ಬಗ್ಗೆ ನನಗೆ ಬಹಳ ಗೌರವವಿದೆ. ಅವರ ಬಗ್ಗೆ ಯಾವುದೇ ಆರೋಪ ಮಾಡಿಲ್ಲ. ಧರ್ಮದ ಕುರಿತಾಗಿಯೂ ಯಾವುದೇ ದೋಷಾರೋಪ ಮಾಡಿಲ್ಲ. ಅವರು ಬಹಿರಂಗ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *