ಕೋಲ್ಕತ್ತಾ: ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಸ್ಥಿತಿ ಪ್ರಧಾನಿ ನರೇಂದ್ರ ಮೋದಿ ಅವರೂ ಎದುರಿಸಬೇಕಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ (TMC) ಶಾಸಕ ಇದ್ರಿಸ್ ಅಲಿ ಎಚ್ಚರಿಕೆ ನೀಡಿದ್ದಾರೆ.
ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಿದ್ದಾರೆ. ಇಂದು ಸಹ ಪ್ರಧಾನಿ ನಿವಾಸದಲ್ಲಿ ಪ್ರಜೆಗಳದ್ದೇ ದರ್ಬಾರ್ ಮುಂದುವರಿದಿದೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ
ಜುಲೈ 11ರಂದು ನಡೆಯಲಿರುವ ಕೋಲ್ಕತ್ತಾದ ಸೀಲ್ದಾಹ್ ಮೆಟ್ರೋ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಹ್ವಾನಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಇದನ್ನೂ ಓದಿ: ಕೊಲೆ ಯತ್ನ ನಡೆದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹಾಸ್ಯ ನಟ ಬಾಬು ಮೋಹನ್
ಮಮತಾ ಬ್ಯಾನರ್ಜಿ ಅವರು ರೈಲ್ವೆ ಸಚಿವರಾಗಿದ್ದಾಗ ಈ ಯೋಜನೆಯನ್ನು ಪ್ರಾರಂಭಿಸಿದರು. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದು ಅನ್ಯಾಯ. ಈ ಹಿಂದೆಯೂ ಕೇಂದ್ರ ಗೃಹಸಚಿವ ಅಮಿತ್ ಶಾರ ಅಧ್ಯಕ್ಷತೆಯಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಿಂದ ಮಮತಾ ಬ್ಯಾನರ್ಜಿ ಅವರನ್ನು ಹೊರಗಿಡಲಾಗಿತ್ತು. ಇದರಿಂದ ಕೇಂದ್ರ ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಟಿಎಂಸಿ ಆರೋಪಿಸಿತ್ತು.