ಮಂಡ್ಯ: ಒಂದು ಕಡೆ ಮಂಡ್ಯದಲ್ಲಿ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಏರುತ್ತಿದ್ದು, ಮತ್ತೊಂದು ಕಡೆ ಚುನಾವಣೆ ಘೋಷಣೆಗೂ ಮುನ್ನವೇ ರೈತರಿಂದ ಮತದಾನಕ್ಕೆ ಬಹಿಷ್ಕಾರಕ್ಕೆ ನಿರ್ಧರಿಸಲಾಗಿದೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸಾರಿಗೆ ಸಚಿವ ಡಿಸಿ.ತಮ್ಮಣ್ಣ ಮನೆಗೆ ಮುತ್ತಿಗೆ ಹಾಕಿ ಚುನಾವಣೆ ಬಹಿಷ್ಕಾರ ಮಾಡುವ ಎಚ್ಚರಿಕೆಯನ್ನು ರೈತರು ನೀಡಿದ್ದಾರೆ. ಮದ್ದೂರು ತಾಲೂಕಿನ ಕಡೆಯ ಭಾಗಕ್ಕೆ ವ್ಯವಸಾಯಕ್ಕೆ ನೀರು ಬಿಡದ ಹಿನ್ನೆಲೆಯಲ್ಲಿ ಸಚಿವರ ಮನೆಗೆ ರೈತರು ಮುತ್ತಿಗೆ ಹಾಕಿದ್ದಾರೆ.
ಅಜ್ಜಹಳ್ಳಿ, ಮಾರ್ಗೇನಹಳ್ಳಿ, ಉಪ್ಪಾರದೊಡ್ಡಿ ಗ್ರಾಮಸ್ಥರಿಂದ ಸಚಿವರ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಭಾಗದ ಜಮೀನಿಗೆ ವ್ಯವಸಾಯಕ್ಕೆ ನೀರಿಲ್ಲ. ಹೀಗಿರುವಾಗ ನಮಗೆ ಚುನಾವಣೆ ಯಾಕೆ? ಮತಪೆಟ್ಟಿಗೆ ನಮ್ಮ ಊರಿಗೆ ಬರಲು ಬಿಡಲ್ಲ ಎಂದು ಗ್ರಾಮಸ್ಥರು ಸಚಿವರ ಮನೆಗೆ ಮುತ್ತಿಗೆ ಹಾಕಿ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv