Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್

Bengaluru City

ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್

Public TV
Last updated: September 21, 2025 6:05 pm
Public TV
Share
3 Min Read
madhusudan r naik
SHARE

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ (Backward Classes Commission) ಈಗಾಗಲೇ ಎರಡು ಕೋಟಿ ಮನೆಗಳ ಪಟ್ಟಿ ತಯಾರಿಸುವ, ಜಿಯೋ-ಟ್ಯಾಗಿಂಗ್ ಹಾಗೂ ಗಣತಿ ಬ್ಲಾಕ್‌ನ ನಕ್ಷೆ ಮಾಡುವ ಕಾರ್ಯವನ್ನು ಮಾಡಿ ಮುಗಿಸಿದ್ದೇವೆ. ಬ್ಲಾಕ್ ನಕ್ಷೆಗಳಲ್ಲಿ ಮನೆಗಳನ್ನು ಗುರುತಿಸುವುದಲ್ಲದೇ ರಸ್ತೆಗಳನ್ನೂ ನಮೂದಿಸಿದ್ದು, ಗಣತಿದಾರರು ಸಮೀಕ್ಷೆ ಮಾಡಬೇಕಾದ ಮನೆಯನ್ನು ತಲುಪಲು ಅನುಕೂಲವಾಗುವಂತೆ ಮಾಡಿದ್ದೇವೆ. ಹಾಗಾಗಿ ಸೆಪ್ಟೆಂಬರ್‌ 22ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್. ನಾಯ್ಕ್ (Madhusudan R Naik) ಅವರು ತಿಳಿಸಿದರು.

ವಸಂತನಗರದ ದೇವರಾಜು ಅರಸು ಭವನದಲ್ಲಿಂದು‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಸಮಸ್ತ ನಾಗರಿಕರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆಪ್ಟೆಂಬರ್ 22ರಿಂದ ಪ್ರಾರಂಭಿಸುತ್ತಿದೆ. ಒಬ್ಬ ಸಮೀಕ್ಷಕರಿಗೆ ಸುಮಾರು 140 ರಿಂದ 150 ಮನೆಗಳನ್ನು ಹೊಂದಿರುವ ಬ್ಲಾಕ್‌ಗಳನ್ನ ಹಂಚಿಕೆ ಮಾಡಲಾಗಿದೆ. ಸುಮಾರು 2 ಲಕ್ಷ ಶಿಕ್ಷಕರು ಹಾಗೂ ಇತರ ಸಿಬ್ಬಂದಿ ಸಮೀಕ್ಷೆ ಹಾಗೂ ಸಂಬಂಧಿತ ಕೆಲಸಗಳಲ್ಲಿ ನಿರತರಾಗಲಿದ್ದು, ಇಲಾಖಾ ಅಧಿಕಾರಿಗಳು ಮೇಲುಸ್ತುವಾರಿ ಮಾಡಲಿದ್ದಾರೆ. ಒಬ್ಬ ಸಮೀಕ್ಷಕರು ಒಂದು ದಿನಕ್ಕೆ ಅಂದಾಜು 7 ರಿಂದ 8 ಮನೆಗಳನ್ನು ಸಮೀಕ್ಷೆ ಮಾಡಿದಲ್ಲಿ ರಾಜ್ಯಾದ್ಯಂತ ಇರುವ ಸುಮಾರು 2 ಕೋಟಿ ಕುಟುಂಬಗಳ ಮಾಹಿತಿಯನ್ನು 16 ದಿನಗಳಲ್ಲಿ ಮೊಬೈಲ್ ಆಪ್‌ನಲ್ಲಿ ಸಂಗ್ರಹಿಸಬಹುದಾಗಿದೆ. ಸಮೀಕ್ಷೆಯಲ್ಲಿ ಕುಟುಂಬಗಳ ದತ್ತಾಂಶಗಳನ್ನು ವಿಶೇಷ ತಂತ್ರಾಂಶ ಹೊಂದಿರುವ ಮೊಬೈಲ್‌ ಆ್ಯಪ್ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಕೆಶಿ

ಸಮೀಕ್ಷಾ ಕಾರ್ಯಕ್ಕಾಗಿ ಸಮೀಕ್ಷಾದಾರರಿಗೆ ಮತ್ತು ಮೇಲ್ವಿಚಾರಕರಿಗೆ ಅಗತ್ಯ ಪ್ರಮಾಣದ ತರಬೇತಿ ನೀಡಲಾಗಿದೆ. ಸಮೀಕ್ಷಾ ನಮೂನೆಯಲ್ಲಿ ಒಟ್ಟು 60 ಪ್ರಶ್ನೆಗಳ ಕಾಲಂ ಗಳಿದ್ದು ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ನಾಗರಿಕರು ಒಂದಕ್ಕಿಂತ ಹೆಚ್ಚು ಬಾರಿ ಸಮೀಕ್ಷೆಗೆ ಒಳಪಡುವುದನ್ನು ತಪ್ಪಿಸಲು ಆಧಾರ್ ಸಂಖ್ಯೆ ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆರು ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರೂ ಆಧಾ‌ರ್ ಸಂಖ್ಯೆಯನ್ನು ಸಿದ್ಧವಿಟ್ಟುಕೊಳ್ಳಲು ವಿನಂತಿಸಲಾಗಿದೆ. ಕುಟುಂಬದ ಬಳಿ ರೇಷನ್ ಕಾರ್ಡ್ ಇದ್ದಲ್ಲಿ ಅದರ ಸಂಖ್ಯೆಯನ್ನು ನಮೂದಿಸಿದ್ರೆ ಅದರಲ್ಲಿ ಇರುವ ಮಾಹಿತಿಯು ಸ್ವಯಂಚಾಲಿತವಾಗಿ (Auto Populated) ಪ್ರದರ್ಶಿತವಾಗುತ್ತದೆ. ಇದರಿಂದ ಸಮಯ ಉಳಿತಾಯವಾಗುತ್ತದೆ ಮತ್ತು ಪರಿಶೀಲನೆಯ ನಂತರ ಸಮೀಕ್ಷೆ ಮುಂದುವರಿಯುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

ಕೆಲಸದ ಮೇಲೆ ಹೊರಗೆ ಹೋಗಿರುವವರ ಮಾಹಿತಿಯನ್ನು ಪಡೆಯುವ ದೃಷ್ಠಿಯಿಂದ ಆಧಾರ್ ಪರಿಶೀಲನೆ ಮೂಲಕ ಆನ್‌ಲೈನ್‌ನಲ್ಲಿ ಸಮೀಕ್ಷೆ ನಡೆಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಅದರ ಮಾಹಿತಿಯನ್ನು ವೆಬ್‌ಸೈಟ್ ವಿಳಾಸ https://kscbc.karnataka.gov.in ರಲ್ಲಿ ಪಡೆಯಬಹುದಾಗಿದೆ. ಹಾಗೂ ಏನಾದರೂ ಹೆಚ್ಚಿನ ವಿವರಗಳು ಬೇಕಿದ್ದಲ್ಲಿ ಸಹಾಯವಾಣಿ ಸಂಖ್ಯೆ: 8050770004ಗೆ ಸಂಪರ್ಕಿಸಬಹುದಾಗಿದೆ. ಇದನ್ನೂ ಓದಿ: ಫಾದರ್ ಸಿದ್ದರಾಮಯ್ಯ ಕುಲ ಶಾಸ್ತ್ರೀಯ ಅಧ್ಯಯನ ಮಾಡಬೇಕು: ಸುನಿಲ್ ಕುಮಾರ್ ಟಾಂಗ್

ಕೆಲವು ಅನಗತ್ಯ ವಿವಾದಗಳನ್ನು ಪರಿಹರಿಸಲು ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಜಾತಿಗಳನ್ನು ಸೃಷ್ಟಿಸುವ ಕೆಲಸವನ್ನು ಆಯೋಗ ಮಾಡಿರುವುದಿಲ್ಲ. ಹಿಂದಿನ ವರ್ಷಗಳಲ್ಲಿ ಅಸ್ತಿತ್ವದಲ್ಲಿ ಇವೆ ಎಂದು ಹೇಳಲಾದ ಜಾತಿಗಳನ್ನು ಸಮೀಕ್ಷಾದಾರರ ಅನುಕೂಲಕ್ಕಾಗಿ ಮೊಬೈಲ್ ಆ್ಯಪ್‌ನ ಡ್ರಾಪ್ ಡೌನ್‌ನಲ್ಲಿ ಪಟ್ಟಿಮಾಡಿ ಒದಗಿಸಲಾಗಿದೆ. ಇದು ಸಮೀಕ್ಷಾದಾರರ ಆಂತರಿಕ ಬಳಕೆಗೆ ಮಾತ್ರ ಇರುತ್ತದೆ. ಇದು ಸಾರ್ವಜನಿಕ ದಾಖಲೆ ಅಲ್ಲ, ಈ ಪಟ್ಟಿಗೆ ಯಾವುದೇ ಕಾನೂನು ಮಾನ್ಯತೆಯೂ ಇಲ್ಲ. ಜಾತಿಗಳನ್ನು ಸುಲಭವಾಗಿ ಗುರುತಿಸುವ ಉದ್ದೇಶದಿಂದ ಉಪಯೋಗಿಸಲಾಗುತ್ತದೆಯೇ ಹೊರತು ಯಾರೂ ಅದನ್ನು ಬೇರೆ ಉದ್ದೇಶಕ್ಕೆ ಬಳಸಲು ಸಾಧ್ಯವಿರುವುದಿಲ್ಲ. ಸಮೀಕ್ಷೆ ಮುಗಿದ ನಂತರ ಸಂಗ್ರಹಿಸಲಾದ ಮಾಹಿತಿಗಳನ್ನು ಆಯೋಗವು ವಿಶ್ಲೇಷಿಸುತ್ತದೆ. ವೈಜ್ಞಾನಿಕ ವಿಶ್ಲೇಷಣೆಯ ನಂತರ ಮಾತ್ರ ವಿವಿಧ ಜಾತಿ ಜನಾಂಗಗಳಿಗೆ ಒದಗಿಸಬಹುದಾದ ಅನುಕೂಲತೆಗಳ ಬಗ್ಗೆ ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ತಪ್ಪು ಸಂದೇಶ ಹಬ್ಬಿದ ಕಾರಣ ಆಯೋಗವು ಜನರ ಆತಂಕಗಳನ್ನು ಪರಿಗಣಿಸಿ ಈ ಕ್ರಮ ಕೈಗೊಂಡಿರುತ್ತದೆ. ಧರ್ಮ ಹಾಗೂ ಜಾತಿ, ಉಪಜಾತಿ ಆಯ್ಕೆ ಕುಟುಂಬದ ನಿರ್ಧಾರ, ಕುಟುಂಬದ ಸದಸ್ಯರು ಏನು ತಿಳಿಸುತ್ತಾರೋ ಅದನ್ನು ದಾಖಲಿಸಲು ಕಾಲಂ ನೀಡಲಾಗಿದೆ. ಸಮೀಕ್ಷಕರು ಬಳಸುವ ಪ್ರಾಪ್‌ಡೌನ್ ಆಯ್ಕೆ ವ್ಯವಸ್ಥೆಯಲ್ಲಿ ನಾಗರಿಕರಿಗೆ ಗೊಂದಲಕ್ಕೆ ಒಳಗಾಗಿರುವ ಕೆಲವು ಜಾತಿಗಳ ಹೆಸರನ್ನು ಪಟ್ಟಿಯಲ್ಲಿ ನಿಷ್ಕ್ರಿಯಗೊಳಿಸಲಾಗಿದೆ. ಈ ವ್ಯವಸ್ಥೆಯಿಂದ ಯಾವುದೇ ಜಾತಿಯ ಹೆಸರನ್ನು ಸ್ವ -ಇಚ್ಛೆಯಿಂದ ನಮೂದಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬಸಮೀಕ್ಷೆಯ ಸಮಯದಲ್ಲಿ KYC ನಡೆಸುವಲ್ಲಿ ಎದುರಾಗುತ್ತಿದ್ದ ಅಡಚಣೆಗಳನ್ನು ಕೂಡ ಪರಿಹರಿಸಲು ಮುಖ ಚಹರೆ ಗುರುತಿಸುವ (Face recognition) ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರ ಸಂಪೂರ್ಣ ಸಹಕಾರದೊಂದಿಗೆ ನಿಗದಿತ ಅವಧಿಯೊಳಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ಆಯೋಗವು ಹೊಂದಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿಂದುಳಿದ ವರ್ಗದ ಇಲಾಖೆಯ ಆಯುಕ್ತರೂ ಹಾಗೂ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿಗಳಾದ ದಯಾನಂದ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ಆಣೆ ಪ್ರಮಾಣಕ್ಕಾಗಿ ದೇವಾಲಯಕ್ಕೆ ಬಂದ ಹೊನ್ನಾಳಿ ಶಾಸಕ – ಸವಾಲೆಸೆದು ಕೈಕೊಟ್ಟ ರೇಣುಕಾಚಾರ್ಯ ಆಪ್ತ

TAGGED:Caste CensuskarnatakaMadhusudan R Naiksiddaramaiahಜಾತಿ ಜನಗಣತಿಮಧುಸೂದನ್ ನಾಯ್ಕ್ಸಿದ್ದರಾಮಯ್ಯಹಿಂದುಳಿದ ವರ್ಗಗಳ ಆಯೋಗ
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

Stones pelted from mosque during Shivaji Jayanti stones pelted at police Bagalkote
Bagalkot

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

Public TV
By Public TV
4 hours ago
Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
4 hours ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
4 hours ago
dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
5 hours ago
Chikkamagaluru Police
Chikkamagaluru

ಸ್ನೇಹಿತೆ ಜೊತೆಗಿದ್ದ ಅಪ್ರಾಪ್ತನ ಮೇಲೆ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್‌ಗಿರಿ – ನಾಲ್ವರು ಅರೆಸ್ಟ್‌

Public TV
By Public TV
5 hours ago
forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?