Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್

Bengaluru City

ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್

Public TV
Last updated: September 21, 2025 6:05 pm
Public TV
Share
3 Min Read
madhusudan r naik
SHARE

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ (Backward Classes Commission) ಈಗಾಗಲೇ ಎರಡು ಕೋಟಿ ಮನೆಗಳ ಪಟ್ಟಿ ತಯಾರಿಸುವ, ಜಿಯೋ-ಟ್ಯಾಗಿಂಗ್ ಹಾಗೂ ಗಣತಿ ಬ್ಲಾಕ್‌ನ ನಕ್ಷೆ ಮಾಡುವ ಕಾರ್ಯವನ್ನು ಮಾಡಿ ಮುಗಿಸಿದ್ದೇವೆ. ಬ್ಲಾಕ್ ನಕ್ಷೆಗಳಲ್ಲಿ ಮನೆಗಳನ್ನು ಗುರುತಿಸುವುದಲ್ಲದೇ ರಸ್ತೆಗಳನ್ನೂ ನಮೂದಿಸಿದ್ದು, ಗಣತಿದಾರರು ಸಮೀಕ್ಷೆ ಮಾಡಬೇಕಾದ ಮನೆಯನ್ನು ತಲುಪಲು ಅನುಕೂಲವಾಗುವಂತೆ ಮಾಡಿದ್ದೇವೆ. ಹಾಗಾಗಿ ಸೆಪ್ಟೆಂಬರ್‌ 22ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ಆಯೋಗದ ಅಧ್ಯಕ್ಷರಾದ ಮಧುಸೂದನ್ ಆರ್. ನಾಯ್ಕ್ (Madhusudan R Naik) ಅವರು ತಿಳಿಸಿದರು.

ವಸಂತನಗರದ ದೇವರಾಜು ಅರಸು ಭವನದಲ್ಲಿಂದು‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಸಮಸ್ತ ನಾಗರಿಕರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸೆಪ್ಟೆಂಬರ್ 22ರಿಂದ ಪ್ರಾರಂಭಿಸುತ್ತಿದೆ. ಒಬ್ಬ ಸಮೀಕ್ಷಕರಿಗೆ ಸುಮಾರು 140 ರಿಂದ 150 ಮನೆಗಳನ್ನು ಹೊಂದಿರುವ ಬ್ಲಾಕ್‌ಗಳನ್ನ ಹಂಚಿಕೆ ಮಾಡಲಾಗಿದೆ. ಸುಮಾರು 2 ಲಕ್ಷ ಶಿಕ್ಷಕರು ಹಾಗೂ ಇತರ ಸಿಬ್ಬಂದಿ ಸಮೀಕ್ಷೆ ಹಾಗೂ ಸಂಬಂಧಿತ ಕೆಲಸಗಳಲ್ಲಿ ನಿರತರಾಗಲಿದ್ದು, ಇಲಾಖಾ ಅಧಿಕಾರಿಗಳು ಮೇಲುಸ್ತುವಾರಿ ಮಾಡಲಿದ್ದಾರೆ. ಒಬ್ಬ ಸಮೀಕ್ಷಕರು ಒಂದು ದಿನಕ್ಕೆ ಅಂದಾಜು 7 ರಿಂದ 8 ಮನೆಗಳನ್ನು ಸಮೀಕ್ಷೆ ಮಾಡಿದಲ್ಲಿ ರಾಜ್ಯಾದ್ಯಂತ ಇರುವ ಸುಮಾರು 2 ಕೋಟಿ ಕುಟುಂಬಗಳ ಮಾಹಿತಿಯನ್ನು 16 ದಿನಗಳಲ್ಲಿ ಮೊಬೈಲ್ ಆಪ್‌ನಲ್ಲಿ ಸಂಗ್ರಹಿಸಬಹುದಾಗಿದೆ. ಸಮೀಕ್ಷೆಯಲ್ಲಿ ಕುಟುಂಬಗಳ ದತ್ತಾಂಶಗಳನ್ನು ವಿಶೇಷ ತಂತ್ರಾಂಶ ಹೊಂದಿರುವ ಮೊಬೈಲ್‌ ಆ್ಯಪ್ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಕೆಶಿ

ಸಮೀಕ್ಷಾ ಕಾರ್ಯಕ್ಕಾಗಿ ಸಮೀಕ್ಷಾದಾರರಿಗೆ ಮತ್ತು ಮೇಲ್ವಿಚಾರಕರಿಗೆ ಅಗತ್ಯ ಪ್ರಮಾಣದ ತರಬೇತಿ ನೀಡಲಾಗಿದೆ. ಸಮೀಕ್ಷಾ ನಮೂನೆಯಲ್ಲಿ ಒಟ್ಟು 60 ಪ್ರಶ್ನೆಗಳ ಕಾಲಂ ಗಳಿದ್ದು ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ನಾಗರಿಕರು ಒಂದಕ್ಕಿಂತ ಹೆಚ್ಚು ಬಾರಿ ಸಮೀಕ್ಷೆಗೆ ಒಳಪಡುವುದನ್ನು ತಪ್ಪಿಸಲು ಆಧಾರ್ ಸಂಖ್ಯೆ ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆರು ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರೂ ಆಧಾ‌ರ್ ಸಂಖ್ಯೆಯನ್ನು ಸಿದ್ಧವಿಟ್ಟುಕೊಳ್ಳಲು ವಿನಂತಿಸಲಾಗಿದೆ. ಕುಟುಂಬದ ಬಳಿ ರೇಷನ್ ಕಾರ್ಡ್ ಇದ್ದಲ್ಲಿ ಅದರ ಸಂಖ್ಯೆಯನ್ನು ನಮೂದಿಸಿದ್ರೆ ಅದರಲ್ಲಿ ಇರುವ ಮಾಹಿತಿಯು ಸ್ವಯಂಚಾಲಿತವಾಗಿ (Auto Populated) ಪ್ರದರ್ಶಿತವಾಗುತ್ತದೆ. ಇದರಿಂದ ಸಮಯ ಉಳಿತಾಯವಾಗುತ್ತದೆ ಮತ್ತು ಪರಿಶೀಲನೆಯ ನಂತರ ಸಮೀಕ್ಷೆ ಮುಂದುವರಿಯುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

ಕೆಲಸದ ಮೇಲೆ ಹೊರಗೆ ಹೋಗಿರುವವರ ಮಾಹಿತಿಯನ್ನು ಪಡೆಯುವ ದೃಷ್ಠಿಯಿಂದ ಆಧಾರ್ ಪರಿಶೀಲನೆ ಮೂಲಕ ಆನ್‌ಲೈನ್‌ನಲ್ಲಿ ಸಮೀಕ್ಷೆ ನಡೆಸುವ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ. ಅದರ ಮಾಹಿತಿಯನ್ನು ವೆಬ್‌ಸೈಟ್ ವಿಳಾಸ https://kscbc.karnataka.gov.in ರಲ್ಲಿ ಪಡೆಯಬಹುದಾಗಿದೆ. ಹಾಗೂ ಏನಾದರೂ ಹೆಚ್ಚಿನ ವಿವರಗಳು ಬೇಕಿದ್ದಲ್ಲಿ ಸಹಾಯವಾಣಿ ಸಂಖ್ಯೆ: 8050770004ಗೆ ಸಂಪರ್ಕಿಸಬಹುದಾಗಿದೆ. ಇದನ್ನೂ ಓದಿ: ಫಾದರ್ ಸಿದ್ದರಾಮಯ್ಯ ಕುಲ ಶಾಸ್ತ್ರೀಯ ಅಧ್ಯಯನ ಮಾಡಬೇಕು: ಸುನಿಲ್ ಕುಮಾರ್ ಟಾಂಗ್

ಕೆಲವು ಅನಗತ್ಯ ವಿವಾದಗಳನ್ನು ಪರಿಹರಿಸಲು ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಜಾತಿಗಳನ್ನು ಸೃಷ್ಟಿಸುವ ಕೆಲಸವನ್ನು ಆಯೋಗ ಮಾಡಿರುವುದಿಲ್ಲ. ಹಿಂದಿನ ವರ್ಷಗಳಲ್ಲಿ ಅಸ್ತಿತ್ವದಲ್ಲಿ ಇವೆ ಎಂದು ಹೇಳಲಾದ ಜಾತಿಗಳನ್ನು ಸಮೀಕ್ಷಾದಾರರ ಅನುಕೂಲಕ್ಕಾಗಿ ಮೊಬೈಲ್ ಆ್ಯಪ್‌ನ ಡ್ರಾಪ್ ಡೌನ್‌ನಲ್ಲಿ ಪಟ್ಟಿಮಾಡಿ ಒದಗಿಸಲಾಗಿದೆ. ಇದು ಸಮೀಕ್ಷಾದಾರರ ಆಂತರಿಕ ಬಳಕೆಗೆ ಮಾತ್ರ ಇರುತ್ತದೆ. ಇದು ಸಾರ್ವಜನಿಕ ದಾಖಲೆ ಅಲ್ಲ, ಈ ಪಟ್ಟಿಗೆ ಯಾವುದೇ ಕಾನೂನು ಮಾನ್ಯತೆಯೂ ಇಲ್ಲ. ಜಾತಿಗಳನ್ನು ಸುಲಭವಾಗಿ ಗುರುತಿಸುವ ಉದ್ದೇಶದಿಂದ ಉಪಯೋಗಿಸಲಾಗುತ್ತದೆಯೇ ಹೊರತು ಯಾರೂ ಅದನ್ನು ಬೇರೆ ಉದ್ದೇಶಕ್ಕೆ ಬಳಸಲು ಸಾಧ್ಯವಿರುವುದಿಲ್ಲ. ಸಮೀಕ್ಷೆ ಮುಗಿದ ನಂತರ ಸಂಗ್ರಹಿಸಲಾದ ಮಾಹಿತಿಗಳನ್ನು ಆಯೋಗವು ವಿಶ್ಲೇಷಿಸುತ್ತದೆ. ವೈಜ್ಞಾನಿಕ ವಿಶ್ಲೇಷಣೆಯ ನಂತರ ಮಾತ್ರ ವಿವಿಧ ಜಾತಿ ಜನಾಂಗಗಳಿಗೆ ಒದಗಿಸಬಹುದಾದ ಅನುಕೂಲತೆಗಳ ಬಗ್ಗೆ ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ತಪ್ಪು ಸಂದೇಶ ಹಬ್ಬಿದ ಕಾರಣ ಆಯೋಗವು ಜನರ ಆತಂಕಗಳನ್ನು ಪರಿಗಣಿಸಿ ಈ ಕ್ರಮ ಕೈಗೊಂಡಿರುತ್ತದೆ. ಧರ್ಮ ಹಾಗೂ ಜಾತಿ, ಉಪಜಾತಿ ಆಯ್ಕೆ ಕುಟುಂಬದ ನಿರ್ಧಾರ, ಕುಟುಂಬದ ಸದಸ್ಯರು ಏನು ತಿಳಿಸುತ್ತಾರೋ ಅದನ್ನು ದಾಖಲಿಸಲು ಕಾಲಂ ನೀಡಲಾಗಿದೆ. ಸಮೀಕ್ಷಕರು ಬಳಸುವ ಪ್ರಾಪ್‌ಡೌನ್ ಆಯ್ಕೆ ವ್ಯವಸ್ಥೆಯಲ್ಲಿ ನಾಗರಿಕರಿಗೆ ಗೊಂದಲಕ್ಕೆ ಒಳಗಾಗಿರುವ ಕೆಲವು ಜಾತಿಗಳ ಹೆಸರನ್ನು ಪಟ್ಟಿಯಲ್ಲಿ ನಿಷ್ಕ್ರಿಯಗೊಳಿಸಲಾಗಿದೆ. ಈ ವ್ಯವಸ್ಥೆಯಿಂದ ಯಾವುದೇ ಜಾತಿಯ ಹೆಸರನ್ನು ಸ್ವ -ಇಚ್ಛೆಯಿಂದ ನಮೂದಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬಸಮೀಕ್ಷೆಯ ಸಮಯದಲ್ಲಿ KYC ನಡೆಸುವಲ್ಲಿ ಎದುರಾಗುತ್ತಿದ್ದ ಅಡಚಣೆಗಳನ್ನು ಕೂಡ ಪರಿಹರಿಸಲು ಮುಖ ಚಹರೆ ಗುರುತಿಸುವ (Face recognition) ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರ ಸಂಪೂರ್ಣ ಸಹಕಾರದೊಂದಿಗೆ ನಿಗದಿತ ಅವಧಿಯೊಳಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸುವ ವಿಶ್ವಾಸವನ್ನು ಆಯೋಗವು ಹೊಂದಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿಂದುಳಿದ ವರ್ಗದ ಇಲಾಖೆಯ ಆಯುಕ್ತರೂ ಹಾಗೂ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿಗಳಾದ ದಯಾನಂದ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ಆಣೆ ಪ್ರಮಾಣಕ್ಕಾಗಿ ದೇವಾಲಯಕ್ಕೆ ಬಂದ ಹೊನ್ನಾಳಿ ಶಾಸಕ – ಸವಾಲೆಸೆದು ಕೈಕೊಟ್ಟ ರೇಣುಕಾಚಾರ್ಯ ಆಪ್ತ

TAGGED:Caste CensuskarnatakaMadhusudan R Naiksiddaramaiahಜಾತಿ ಜನಗಣತಿಮಧುಸೂದನ್ ನಾಯ್ಕ್ಸಿದ್ದರಾಮಯ್ಯಹಿಂದುಳಿದ ವರ್ಗಗಳ ಆಯೋಗ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
5 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
6 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
6 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
6 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
8 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?