ಭೋಪಾಲ್: ಮಧ್ಯಪ್ರದೇಶದ ವಿಧಾನಸೌದಲ್ಲಿ ಆಡಳಿತಾರೂಢ ಬಿಜೆಪಿ ಶಾಸಕಿಯೊಬ್ಬರು ಕಣ್ಣೀರು ಹಾಕಿದ್ದು, ತಮ್ಮದೇ ಪಕ್ಷದ ಹಿರಿಯ ನಾಯಕರ ವಿರುದ್ಧ ಕಿರುಕುಳದ ಆರೋಪ ಮಾಡಿದ್ದಾರೆ.
ಮಧ್ಯಪ್ರದೇಶ ರೇವಾ ಜಿಲ್ಲೆಯ ಸಿಮರಿಯಾ ಕ್ಷೇತ್ರದ ಬಿಜೆಪಿ ಶಾಸಕಿ ನೀಲಂ ಮಿಶ್ರಾ ವಿಧಾನಸೌದಲ್ಲಿ ಕಣ್ಣೀರು ಹಾಕಿದ್ದು, ಪಕ್ಷದ ಹಿರಿಯ ಮುಖಂಡರೊಬ್ಬರು ತಮಗೇ ಹಾಗೂ ಕುಟುಂಬ ಸದಸ್ಯರಿಗೆ ಕಿರುಕುಳ ನೀಡುತ್ತಿದ್ದಾರೆ. ಸಚಿವರು ನಡೆಸುತ್ತಿದ್ದ ಅಕ್ರಮ ಗಣಿಗಾರಿಕೆಯನ್ನು ಬಯಲಿಗೆ ತಂದಿದ್ದು, ಇದರಿಂದ ದ್ವೇಷಸಾಧಿಸುತ್ತಿದ್ದಾರೆ ಎಂದು ಆರೋಪಿಸಿದ್ದಾಗಿ ಮಾಧ್ಯಮೊಂದು ವರದಿ ಮಾಡಿದೆ.
ಸದನದ ಶೂನ್ಯ ವೇಳೆಯಲ್ಲಿ ಮಾತನಾಡಿ, ತಮಗೂ ಹಾಗೂ ಕುಟುಂಬಕ್ಕೂ ರಕ್ಷಣೆ ನೀಡುವಂತೆ ಮನವಿ ಮಾಡಿದ್ದ, ಮುಂಬರುವ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಹಿರಿಯ ನಾಯಕರ ನಿರ್ದೇಶನದ ಮೇರೆಗೆ ಸ್ಥಳೀಯ ಪೊಲೀಸರು ಸಹ ತಮ್ಮ ಮೇಲೆ ಇಲ್ಲದ ಆರೋಪ ಮಾಡಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸುತ್ತಿದ್ದಾರೆ. ತಮ್ಮ ಕುಟುಂಬ ಸದಸ್ಯರಿಗೂ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ಅದ್ದರಿಂದ ಅನಿವಾರ್ಯವಾಗಿ ಸದನದಲ್ಲಿ ಈ ಕುರಿತು ಪ್ರಸ್ತಾಪ ಮಾಡಲಾಗಿದೆ ಎಂದು ಹೇಳಿದ್ದಾರೆ. ಶಾಸಕಿಯ ಪ್ರಸ್ತಾಪವನ್ನು ಸ್ವೀಕರಿಸಿದ ಸ್ಪೀಕರ್ ಗೃಹ ಸಚಿವರಿಗೆ ಸೂಕ್ತ ರಕ್ಷಣೆ ನೀಡುವುವಂತೆ ಸೂಚನೆ ನೀಡಿದ್ದಾಗಿ ಮಾಧ್ಯಮ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸದ್ಯ ಶಾಸಕಿ ನೀಲಂ ಮಿಶ್ರಾ ಅವರ ಆರೋಪವನ್ನು ಪಕ್ಷದ ಹಿರಿಯ ನಾಯಕ, ಸಚಿವರಾದ ಶುಕ್ಲಾ, ನನ್ನ ಮೇಲಿನ ಆರೋಪದಲ್ಲಿ ಯಾವುದೇ ಆಧಾರವಿಲ್ಲ. ಆದರೆ ಶಾಸಕಿ ತಮ್ಮ ವೈಯಕ್ತಿಕ ಪ್ರಚಾರಕ್ಕಾಗಿ ಈ ರೀತಿ ಮಾಡಿದ್ದಾರೆ ಎಂದು ಸದನ ಬಳಿಕ ಮಾಧ್ಯಮಗಳೊಂದಿಗೆ ಹೇಳಿಕೆ ನೀಡಿದ್ದಾರೆ.
ಶಾಸಕಿಯ ಹೇಳಿಕೆ ಬಳಿಕ ಸದನದಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ.