‘ಮಹಾರಾಜರೇ ಸ್ವಾಗತ, ನಿಮ್ಮ ಜೊತೆಗಿದ್ದಾನೆ ಶಿವರಾಜ’

Public TV
1 Min Read
Jyotiraditya Scindia A

– ಸಿಂಧಿಯಾಗೆ ಪಕ್ಕಾ ಆಯ್ತು ರಾಜ್ಯಸಭಾ ಸ್ಥಾನ

ಭೋಪಾಲ್: ಮಹಾರಾಜರೇ ಸ್ವಾಗತ, ನಿಮ್ಮ ಜೊತೆಗಿದ್ದಾನೆ ಶಿವರಾಜ ಎಂದು ಮಧ್ಯಪ್ರದೇಶ ಮಾಜಿ ಸಿಎಂ, ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿ, ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚೌಹಾಣ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ನಂಬಿ ಮತ್ತು ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ನಂಬಿಕೆ, ಮಂತ್ರದ ಮೂಲ ಮಂತ್ರವನ್ನು ಅನುಸರಿಸಿ. ರಾಷ್ಟ್ರ ಮತ್ತು ಸಾರ್ವಜನಿಕರ ಸೇವೆ ಮಾಡಲು ಬಿಜೆಪಿ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ಶಾಸಕರು ನಮ್ಮ ಕುಟುಂಬ ಸೇರಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಜೆಪಿ ನಡ್ಡಾ ಸಮ್ಮುಖದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ

ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ದೂರ ದೃಷ್ಟಿ ಹೊಂದಿದ್ದಾರೆ. ಜನರ ಸೇವೆ ಮಾಡಲು ಅವರು ರಾಜಕೀಯಕ್ಕೆ ಬಂದಿದ್ದಾರೆ. ಅವರು 2018ರಲ್ಲಿ ನಡೆದ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪರ ಉತ್ಸಾಹದಿಂದ ಕೆಲಸ ಮಾಡಿದರು. ಆದರೆ ಕಾಂಗ್ರೆಸ್ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಉಳಿಸಿಕೊಂಡಿಲ್ಲ. ಹೀಗಾಗಿ ಜ್ಯೋತಿರಾದಿತ್ಯ ಅವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರು ಬಿಜೆಪಿ ಸೇರಿದ್ದು ವೈಯಕ್ತಿಕವಾಗಿ ನನಗೆ ಸಂತೋಷದ ದಿನವಾಗಿದೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಬಿಜೆಪಿ ಮತ್ತೆ ಮುಂದಾಗಿದೆ ಎಂದರು. ಇದನ್ನೂ ಓದಿ: ಮಧ್ಯಪ್ರದೇಶದ ವೈರಸ್‍ಗೆ ಮಹಾರಾಷ್ಟ್ರಕ್ಕೆ ಪ್ರವೇಶವಿಲ್ಲ: ಶಿವಸೇನೆ

ರಾಜ್ಯಸಭೆ:
ಮುಂಬರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ಒಟ್ಟು 9 ಅಭ್ಯರ್ಥಿಗಳ ಪಟ್ಟಿಯನ್ನುಬಿಡುಗಡೆ ಮಾಡಿದೆ. ಈ ಪೈಕಿ ಮಧ್ಯಪ್ರದೇಶದಿಂದ ಬಿಜೆಪಿ ಅಭ್ಯರ್ಥಿಯಾಗಿ ಜ್ಯೋತಿರಾದಿತ್ಯ ಸಿಂಧಿಯಾ ಗುರುತಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *