Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಡಿಕೇರಿ ದಸರಾಕ್ಕೆ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಡಿಕೇರಿ ದಸರಾಕ್ಕೆ ಚಾಲನೆ

Districts

ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಡಿಕೇರಿ ದಸರಾಕ್ಕೆ ಚಾಲನೆ

Public TV
Last updated: September 22, 2025 8:52 pm
Public TV
Share
3 Min Read
Madikeri 2 1
SHARE

– ಪ್ರಮುಖ ಬೀದಿಗಳಲ್ಲಿ ಶಕ್ತಿ ದೇವತೆಗಳ ಮೆರವಣಿಗೆ; ಕರಗ ವೈಭವ
– ಸಂಗೀತ ಕಾರ್ಯಕ್ರಮಕ್ಕೆ ರಘು ದೀಕ್ಷಿತ್‌ಗೆ ಆಹ್ವಾನ; ಮಂತರ್ ಗೌಡ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಕ್ಕೆ (Madikeri Dasara) ಇಂದಿನಿಂದ ಚಾಲನೆ ಸಿಕ್ಕಿದೆ. 9 ದಿನಗಳ ದಸರಾ ಉತ್ಸವ ಇಂದು ಕರಗ ಹೊರುವ ಮೂಲಕ ಪ್ರಾರಂಭಗೊಂಡಿದೆ. ನಗರದ ನಾಲ್ಕು ಶಕ್ತಿ ದೇವತೆಗಳಿಗೆ ಪೂಜೆ ನೆರವೇರಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗಿದ್ದು, ಮುಂದಿನ 1 ವಾರ ನಗರದಲ್ಲಿ ವೈವಿದ್ಯಮಯ ಕಾರ್ಯಕ್ರಮಗಳು ಜನರನ್ನು ರಂಜಿಸಲಿವೆ.

Madikeri 1

ಎಲ್ಲೆಡೆ ಈಗ ನಾಡ ಹಬ್ಬ ದಸರಾ ಸಂಭ್ರಮ ಶುರುವಾಗಿದೆ, ಜಗತ್‌ಪ್ರಸಿದ್ಧ ಮೈಸೂರು ದಸರಾ ಜೊತೆಗೆ ಮಡಿಕೇರಿ ದಸರಾಕ್ಕೂ ವಿದ್ಯುಕ್ತ ಚಾಲನೆ ಸಿಕ್ಕಿದೆ. 300 ವರ್ಷಗಳ ಇತಿಹಾಸ ಹೊಂದಿರೋ ಮಂಜಿನ ನಗರಿ ಮಡಿಕೇರಿ ದಸರಾ ಇಂದು ನಗರದ ನಾಲ್ಕು ಶಕ್ತಿದೇವತೆಗಳ ಕರಗಾಕ್ಕೆ ಪೂಜೆ ಸಲ್ಲಿಸೋ ಮೂಲಕ ಚಾಲನೆ ಲಭಿಸಿದೆ. ನಗರದ ಪಂಪಿನ ಕೆರೆಬಳಿಯಲ್ಲಿ ನಾಲ್ಕೂ ಕರಗಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಕೊಡಗು ಉಸ್ತುವಾರಿ ಸಚಿವ ಬೋಸರಾಜು, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಕರಗ ಹೊರೋ ಮೂಲಕ ದಸರಾ ಪ್ರಾರಂಭಗೊಂಡಿದ್ದು ನಾಳೆಯಿಂದ ವೈವಿದ್ಯಮಯ ಕಾರ್ಯಕ್ರಮಗಳು ಕಲಾಸಕ್ತರ ಮನತಣಿಸಲು ರೆಡಿಯಾಗಿವೆ.

Madikeri 3

ಇಂದು ಸಂಜೆ ಕರಗಗಳಿಗೆ ಪೂಜೆಸಲ್ಲಿಸಿದ ದಸರಾ ಸಮಿತಿ ಸದಸ್ಯರು ದಸರಾ ಯಶಸ್ಸಿಗೆ ದೇವರಿಗೆ ಮೊರೆಯಿಟ್ಟಿದ್ದಾರೆ. ನಗರದ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ, ಕಂಚಿ ಕಾಮಾಕ್ಷಿಮ್ಮ ದೇವಾಲಯಗಳ ಕರಗಗಳನ್ನು ಹೊತ್ತ ವೃತದಾರಿಗಳು ನವರಾತ್ರಿಯ ಒಂಬತ್ತು ದಿನಗಳು ನಗರದ ಬೀದಿ ಬೀದಿಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಶತಮಾನಗಳ ಹಿಂದೆ ಬರಗಾಲದಿಂದ ಮಡಿಕೇರಿಯಲ್ಲಿ ಬೀಕರ ಕಾಲರಾ, ಆವರಿಸಿದ್ದ ಸಂದರ್ಭ ನಗರದ ದೇವತೆಗಳನ್ನು ಕರಗದ ಮೂಲಕ ನಗರದ ಪ್ರದಕ್ಷಿಣೆ ಮಾಡಿ ಪೂಜೆಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ವರ್ಷಕ್ಕೆ ಒಂದು ಬಾರಿ ದಸರಾ ಸಂದರ್ಭದಲ್ಲಿ ಕರಗ ಉತ್ಸವ ನಡೆಸಲಾಗುತ್ತೆ. ಮಡಿಕೇರಿಯ ಶಕ್ತಿದೇವತೆಗಳೆಂದು ಕರೆಸಿಕೊಳ್ಳೋ ನಾಲ್ಕೂ ದೇವಿಯರನ್ನು ಆರಾಧಿಸಿ ಜನರು ಪೂಜಿಸುತ್ತಾರೆ. ನಗರದಲ್ಲಿ ಕರಗ ಸಂಚರಿಸೋ ವೇಳೆ ಪ್ರತಿ ಮನೆಮುಂದೆಯೂ ಬಣ್ಣ ಬಣ್ಣದ ಚಿತ್ತಾರದ ರಂಗೋಲಿಬಿಡಿಸಿ ದೇವರನ್ನ ಸ್ವಾಗತಿಸಲಾಗುತ್ತೆ, ನಾಡಿಗೆ ಶುಭವಾಗಲಿ ಎಂದು ಹಾರೈಸಿ ಪೂಜೆ ಸಲ್ಲಿಸಲಾಗುತ್ತೆ.

Madikeri 4

ಸಚಿವ ಭೋಸರಾಜು ಹೇಳಿದ್ದೇನು?
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ, ನಗರದ ಶಕ್ತಿ ದೇವತೆಗಳಿಗೆ ವಿಶೇಷ ಪ್ರಾರ್ಥನೆಯೊಂದಿಗೆ ದಸರಾಕ್ಕೆ ಚಾಲನೆ ನೀಡಲಾಗಿದೆ. ಭಕ್ತಿಭಾವದಿಂದ ಕರಗ ಉತ್ಸವದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ ಎಂದು ಸಚಿವರು ತಿಳಿಸಿದರು.

ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಸರ್ಕಾರ ಮಡಿಕೇರಿ ದಸರಾ ಉತ್ಸವಕ್ಕೆ 1.50 ಕೋಟಿ ರೂ. ಬಿಡುಗಡೆಗೆ ಆದೇಶ ಮಾಡಿದ್ದು, ಈ ಬಾರಿ ಸಂಗೀತ ಕಾರ್ಯಕ್ರಮಕ್ಕೆ ರಘು ದೀಕ್ಷಿತ್ ಅವರನ್ನು ಆಹ್ವಾನಿಸಲಾಗುವುದು ಎಂದರು.

ನಗರಸಭೆ ಅಧ್ಯಕ್ಷ ಪಿ.ಕಲಾವತಿ, ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ಉಪ ವಿಭಾಗೀಯ ಅಧಿಕಾರಿ ನಿತಿನ್ ಚಕ್ಕಿ, ಡಿವೈಎಸ್ಪಿ ಸೂರಜ್, ಪೌರಾಯುಕ್ತರಾದ ಎಚ್.ಆರ್ ರಮೇಶ್, ತಹಶೀಲ್ದಾ‌ರ್‌ ಶ್ರೀಧರ, ನಗರ ದಸರಾ ಸಮಿತಿ ಅಧ್ಯಕ್ಷ ಬಿ.ಕೆ ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ವಿವಿಧ ಉಪ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಭಕ್ತರ ಜಯಘೋಷದೊಂದಿಗೆ ಶಕ್ತಿದೇವತೆಗಳ ಮೆರವಣಿಗೆ
ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದಂತೆ ಶಕ್ತಿ ದೇವತೆಗಳಾದ ಶ್ರೀ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ, ಶ್ರೀ ದಂಡಿನ ಮರಿಯಮ್ಮ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವಾಲಯಗಳ ಕರಗಗಳಿಗೆ ಪುಷ್ಪಾಲಂಕೃತವಾಗಿ ಭಕ್ತರ ಜಯಘೋಷದೊಂದಿಗೆ ಮರೆವಣಿಗೆ ಆರಂಭಿಸಿದವು. ಪೂಜೆ ಸಲ್ಲಿಕೆ ಬಳಿಕ ನಾಲ್ಕು ಶಕ್ತಿ ದೇವತೆಗಳ ಕರಗಗಳು ಮೆರವಣಿಗೆ ಹೊರಟವು. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುತ್ತಿದ್ದಂತೆ ಜನರು ಪೂಜೆ ಸಲ್ಲಿಸಿ ಭಕ್ತಿಭಾವ ಮೆರೆದರು.

TAGGED:madikeriMadikeri DasaraMantargowdaNS Boserajuಭೋಸರಾಜುಮಡಿಕೇರಿಮಡಿಕೇರಿ ದಸರಾಮಂತರ್‌ ಗೌಡ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
3 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
3 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
4 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
6 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
6 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?