ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇದೀಗ ಮನುಷ್ಯರ ಮೇಲೆಯೇ ಆನೆಗಳು ದಾಳಿ ಮಾಡುತ್ತಿವೆ.
ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಇಂದು ಕಾಡಾನೆ ದಾಳಿ ಮಾಡಿದೆ. ಪರಿಣಾಮ ಚೆನ್ನಯ್ಯನಕೋಟೆ ನಿವಾಸಿ ಕಾರ್ಮಿಕ ಸುನಿಲ್ ಗಂಭೀರ ಗಾಯಗೊಂಡಿದ್ದಾರೆ.
ಸುನಿಲ್, ಎಂದಿನಂತೆ ಇಂದು ಬೆಳಗ್ಗೆ ತಮ್ಮ ಬೈಕಿನಲ್ಲಿ ತೋಟದ ಕೆಲಸಕ್ಕೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಆನೆ ದಾಳಿ ನಡೆಸಿದೆ. ಪರಿಣಾಮ ಸುನಿಲ್ ಅವರ ಕಾಲು ಮತ್ತು ಬೆನ್ನಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಗಾಯಾಳು ಸುನಿಲ್ ಅವರಿಗೆ ಸಿದ್ದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇತ್ತೀಷೆಗಷ್ಟೇ ಮಾಲ್ದಾರೆ ಅರಣ್ಯ ಪ್ರದೇಶದ ಹಂಚಿತಿಟ್ಟು ಗ್ರಾಮದಲ್ಲಿ ಕಾಡಾನೆ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.