ಕೆಲಸಕ್ಕೆ ಹೊರಟಿದ್ದ ಎಎಸ್‍ಐ ಹೃದಯಾಘಾತದಿಂದ ಸಾವು

Public TV
0 Min Read
mdk asi

ಮಡಿಕೇರಿ: ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದ ಎಎಸ್‍ಐಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಕೊಡಗಿನ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿಯಲ್ಲಿ ಟ್ರಾಫಿಕ್ ವಿಭಾಗದಲ್ಲಿ ಎಎಸ್‍ಐ ಆಗಿದ್ದ ವೆಂಕಟೇಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದ ವೇಳೆ ಹೃದಯಾಘಾತವಾಗಿದ್ದು, ತಕ್ಷಣವೇ ಚಿಕಿತ್ಸೆಗಾಗಿ ಅವರನ್ನು ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

HeartAttack

ಅಶ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಅವರ ಸ್ಥಿತಿ ಗಂಭೀರವಾಗಿದ್ದ ಕಾರಣಕ್ಕೆ ಅವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯವೇ ವೆಂಕಟೇಶ್ ಅವರು ಮೃತಪಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *