Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

Latest

ದೇವಸ್ಥಾನದ ಆವರಣದ ಒಳಗಡೆ ಮೊಬೈಲ್‌, ಕ್ಯಾಮೆರಾಕ್ಕೆ ನಿರ್ಬಂಧ ವಿಧಿಸಿ: ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

Public TV
Last updated: December 3, 2022 5:10 pm
Public TV
Share
2 Min Read
madras high court Madurai bench
SHARE

ಚೆನ್ನೈ: ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡಲು ರಾಜ್ಯದ ಎಲ್ಲ ದೇವಸ್ಥಾನದ(Temple) ಆವರಣದ ಒಳಗಡೆ ಮೊಬೈಲ್‌ ಫೋನ್‌(Mobile Phone) ಮತ್ತು ಕ್ಯಾಮೆರಾವನ್ನು(Camera) ನಿಷೇಧಿಸುವಂತೆ ಮದ್ರಾಸ್‌ ಹೈಕೋರ್ಟ್‌(Madras High Court) ತಮಿಳುನಾಡು ಸರ್ಕಾರಕ್ಕೆ(Tamilnadu Government) ನಿರ್ದೇಶನ ನೀಡಿದೆ.

ಮಧುರೈ ಪೀಠದ ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜೆ ಸತ್ಯನಾರಾಯಣ ಅವರಿದ್ದ ದ್ವಿಸದಸ್ಯ ಪೀಠವು ಭಕ್ತರು ಮತ್ತು ದೇವಾಲಯಗಳಿಗೆ ಭೇಟಿ ನೀಡುವವರು ಯೋಗ್ಯವಾದ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಸೂಚಿಸಿ ಎಂದು ರಾಜ್ಯಕ್ಕೆ ನಿರ್ದೇಶನ ನೀಡಿದೆ.

ತೂತುಕುಡಿ ಜಿಲ್ಲೆಯ ಪುರಾತನ ಅರುಲ್ಮಿಗು ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ವೇಳೆ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: HDK ಪ್ರಧಾನಿಯಾದ್ರೆ ಜೆಡಿಎಸ್‍ನಲ್ಲಿ ದಲಿತ, ಮುಸ್ಲಿಂ CM: ಸಿಎಂ ಇಬ್ರಾಹಿಂ

Mobile Ban

ದೇವಾಲಯಗಳ ಒಳಗೆ ಇರುವ ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳು ಭಕ್ತರ ಗಮನವನ್ನು ಬೇರೆಡೆಗೆ ತಿರುಗಿಸುತ್ತವೆ. ಆದ್ದರಿಂದ ದೇವಾಲಯದ ಆವರಣದಲ್ಲಿ ಅವುಗಳ ಬಳಕೆಯನ್ನು ದೇವಾಲಯದ ಅಧಿಕಾರಿಗಳು ನಿಯಂತ್ರಿಸಬೇಕು ಎಂದು ಪೀಠ ಹೇಳಿದೆ.

ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸಲು, ಆಚರಿಸಲು ಮತ್ತು ಪ್ರಚಾರ ಮಾಡಲು ಅರ್ಹರಾಗಿದ್ದಾರೆ ಎಂಬುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ ದೇವಾಲಯದ ಆವರಣದೊಳಗೆ ಕಾರ್ಯನಿರ್ವಹಿಸಲು ಮತ್ತು ಆಚರಣೆಗೆ ಅಂತಹ ಸ್ವಾತಂತ್ರ್ಯವು ನಿಯಮಗಳಿಗೆ ಒಳಪಟ್ಟಿರುತ್ತದೆ. ದೇವಸ್ಥಾನದಲ್ಲಿ ನಡೆಯುವ ಪೂಜಾ ವಿಧಿವಿಧಾನಗಳ ನಿಯಮಾವಳಿಗಳನ್ನು ಸೂಚಿಸಿ  ಅಧಿಕಾರಿಗಳು ದೇವಾಲಯದ ಪಾವಿತ್ರ್ಯತೆ ಕಾಪಾಡುವಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

court order law

ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದ್ದರಿಂದ ದೇವಾಲಯದ ಅಧಿಕಾರಿಗಳು ಸಾಕಷ್ಟು ಸುರಕ್ಷತಾ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಹೆಚ್ಚಿನ ಭಕ್ತರು ದೇವಾಲಯದ ಆವರಣದ ಒಳಗಿನಿಂದ ಚಿತ್ರಗಳನ್ನು ತೆಗೆಯುತ್ತಾರೆ ಮತ್ತು ವೀಡಿಯೊಗಳನ್ನು ಮಾಡುತ್ತಾರೆ. ದೇವಾಲಯದಲ್ಲಿ ಇರಿಸಲಾಗಿರುವ ವಿಗ್ರಹಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಫೋಟೋಗಳನ್ನು ತೆಗೆಯುತ್ತಾರೆ. ಭದ್ರತಾ ದೃಷ್ಟಿಯಿಂದ ಇವುಗಳಿಗೆ ನಿರ್ಬಂಧ ಹೇರಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಮಧುರೈನ ಪ್ರಸಿದ್ಧ ಮೀನಾಕ್ಷಿ ದೇವಸ್ಥಾನ ಸೇರಿದಂತೆ ರಾಜ್ಯದ ಇತರ ಹಲವಾರು ದೇವಾಲಯಗಳ ಒಳಗಡೆ ಭಕ್ತರು ತಮ್ಮ ಫೋನ್ ಅಥವಾ ಕ್ಯಾಮೆರಾಗಳನ್ನು ದೇವಾಲಯದ ಆವರಣದೊಳಗೆ ಕೊಂಡೊಯ್ಯಲು ಅನುಮತಿ ನೀಡುವುದಿಲ್ಲ ಎಂಬ ವಿಚಾರವನ್ನು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

temple dress code

ಮೀನಾಕ್ಷಿ ದೇವಸ್ಥಾನದಲ್ಲಿ ಭಕ್ತರು ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ತಮ್ಮ ಫೋನ್‌ಗಳನ್ನು ಲಾಕರ್‌ನಲ್ಲಿ ಇಡಬೇಕಾಗುತ್ತದೆ. ಭಕ್ತರು ಹೊರಗೆ ಬಂದ ನಂತರ ಫೋನ್‌ಗಳನ್ನು ಹಿಂಪಡೆಯಲು ಅವಕಾಶ ನೀಡಲಾಗುತ್ತದೆ ಎಂದು ಅರ್ಜಿದಾರರು ತಿಳಿಸಿದ್ದರು.

ತೂತುಕುಡಿಯ ದೇವಸ್ಥಾನದ ಒಳಗೆ ಫೋನ್ ಮತ್ತು ಕ್ಯಾಮೆರಾಗಳನ್ನು ಬಳಸುವುದನ್ನು ನಿಷೇಧಿಸುವ ಅಧಿಸೂಚನೆಯನ್ನು ಈಗಾಗಲೇ ಹೊರಡಿಸಲಾಗಿದೆ. ಭಕ್ತರು ಮತ್ತು ದೇವಾಲಯಕ್ಕೆ ಭೇಟಿ ನೀಡುವವರು ಸಭ್ಯ ಡ್ರೆಸ್ ಕೋಡ್ ಅನುಸರಿಸಬೇಕು ಎಂದು ಸೂಚಿಸಲಾಗಿದೆ ಎಂಬುದನ್ನು ತೂತುಕುಡಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೋರ್ಟ್‌ ಗಮನಕ್ಕೆ ತಂದಿದ್ದರು.

Live Tv
[brid partner=56869869 player=32851 video=960834 autoplay=true]

TAGGED:cameramadras high courtmobile phonetamilnaduಕ್ಯಾಮರಾದೇವಸ್ಥಾನಮದ್ರಾಸ್ ಹೈಕೋರ್ಟ್ಮಧುರೈಮೊಬೈಲ್ ಫೋನ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
3 minutes ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
19 minutes ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
34 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
52 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
53 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?