Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 12 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ – ಸಿದ್ಧತೆ ಹೇಗಿದೆ? ವಿಶೇಷತೆಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 12 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ – ಸಿದ್ಧತೆ ಹೇಗಿದೆ? ವಿಶೇಷತೆಗಳೇನು?

Latest

12 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ – ಸಿದ್ಧತೆ ಹೇಗಿದೆ? ವಿಶೇಷತೆಗಳೇನು?

Public TV
Last updated: December 23, 2024 8:30 am
Public TV
Share
4 Min Read
Maha Kumbh Mela
SHARE

12 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಸಲು ಉತ್ತರ ಪ್ರದೇಶ ಸಜ್ಜಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಹಿಂದೂ ಧರ್ಮದ ಅತ್ಯಂತ ಮಹತ್ವದ ಮೇಳ ಇದಾಗಿದ್ದು, ಲಕ್ಷಾಂತರ ಮಂದಿ ಭಕ್ತರು ಇದರಲ್ಲಿ ಭಾಗವಹಿಸಲಿದ್ದಾರೆ. ಅನೇಕ ಮಂದಿ ಭಕ್ತರು ಸೇರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಯೋಗಿ ಸರ್ಕಾರ ಸಕಲ ಸಿದ್ಧತೆಗಳೊಂದಿಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಹಾಗಿದ್ರೆ ಹೇಗೆ ನಡೆಯಲಿದೆ ಮಹಾ ಕುಂಭಮೇಳ? ಸಿದ್ಧತೆ ಹೇಗಿದೆ? ವಿಶೇಷತೆಗಳೇನು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ.

ಮಹಾ ಕುಂಭಮೇಳ ಯಾವಾಗ?
ಮಹಾ ಕುಂಭಮೇಳ 12 ವರ್ಷಗಳಿಗೊಮ್ಮೆ ನಡೆಯುತ್ತದೆ. ಕುಂಭಮೇಳವನ್ನು ಯಶಸ್ವಿಯಾಗಿ ಆಯೋಜಿಸುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರ ನಾಲ್ಕು ತಾಲೂಕುಗಳನ್ನು ಒಳಗೊಂಡ ‘ಮಹಾಕುಂಭ ನಗರವನ್ನು’ ಹೊಸ ಜಿಲ್ಲೆಯಾಗಿ ಘೋಷಿಸಿದೆ. ಈ ಬಾರಿ 2025ರ ಜ.14ರಿಂದ ಫೆ.26ರವರೆಗೆ ಮಹಾ ಕುಂಭಮೇಳ ನಡೆಯಲಿದೆ. ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳು ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ ಮಿಂದೇಳುವ ಮೂಲಕ ತನ್ನ ಪಾಪಗಳಿಂದ ಮುಕ್ತಿ ಪಡೆಯುವ ಅವಕಾಶವನ್ನು ಭಕ್ತರಿಗೆ ನೀಡಲಾಗುತ್ತದೆ. 12 ವರ್ಷಗಳಿಗೊಮ್ಮೆ ಪ್ರಯಾಗ್‌ರಾಜ್, ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ್‌ನಲ್ಲಿ ಮಹಾ ಕುಂಭಮೇಳ ನಡೆಸಲಾಗುತ್ತದೆ. ಈ ಬಾರಿ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯಲಿದೆ. ಈ ಕುಂಭಮೇಳ 30 ರಿಂದ 45 ದಿನಗಳವರೆಗೆ ನಡೆಯುತ್ತದೆ.

Maha Kumbh Mela 2

ಮಹತ್ವ ಏನು?
ಮಹಾ ಕುಂಭಮೇಳಕ್ಕೆ ತನ್ನದೇ ಆದ ಪೌರಾಣಿಕ ಹಿನ್ನೆಲೆ ಇದೆ. ಮಹಾ ಕುಂಭಮೇಳ ಆಚರಣೆಯು ಸಮುದ್ರ ಮಂಥನ ಕಥೆಯಿಂದ ಹುಟ್ಟಿಕೊಂಡಿದೆ ಎಂದು ನಂಬಲಾಗಿದೆ. ಪುರಾಣಗಳ ಪ್ರಕಾರ, ಸಮುದ್ರ ಮಂಥನದ ಸಮಯದಲ್ಲಿ ಅಮೃತ ಮಡಿಕೆ ನಾಲ್ಕು ಕಡೆಗಳಲ್ಲಿ ಬಿತ್ತು. ಆ ನಾಲ್ಕು ಸ್ಥಳಗಳೇ ಪ್ರಯಾಗ್‌ರಾಜ್, ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ್. ಅಂದಿನಿಂದ ಈ ಸ್ಥಳಗಳನ್ನು ಪವಿತ್ರ ಸ್ಥಳಗಳೆಂದು ಪೂಜಿಸಲಾಗುತ್ತಿದೆ. ಮೋಕ್ಷವನ್ನು ಪಡೆಯುವ ಸಲುವಾಗಿ ಈ ಸ್ಥಳಗಳಲ್ಲಿ ಮಹಾ ಕುಂಭಮೇಳ ನಡೆಸಲಾಗುತ್ತದೆ.

ಎಐ ಸಿಸಿಟಿವಿ ಅಳವಡಿಕೆ:
ಮಹಾ ಕುಂಭಮೇಳಕ್ಕೆ ಭೇಟಿ ನೀಡುವ ಯಾತ್ರಿಕರ ನಿಖರ ಸಂಖ್ಯೆಯನ್ನು ತಿಳಿದುಕೊಳ್ಳುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರ ಕೃತಕ ಬುದ್ಧಿಮತ್ತೆ (ಎಐ) ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದೆ. ಬಹುತೇಕ ಯಾತ್ರಿಕರು ಮುಂಜಾನೆ 3ರಿಂದ ಬೆಳಗ್ಗೆ 7ರವರೆಗೆ ತೀರ್ಥಸ್ನಾನಕ್ಕೆ ತೆರಳುತ್ತಾರೆ. ಹೀಗಾಗಿ ಎಐ ಆಧಾರಿತ ಸಿಸಿ ಕ್ಯಾಮೆರಾಗಳು ಇದೇ ಸಮಯದಲ್ಲಿ ಭಕ್ತರ ಲೆಕ್ಕ ಹಾಕಿ ಪ್ರತಿ ನಿಮಿಷಕ್ಕೊಮ್ಮೆ ಪರಿಷ್ಕೃತ ಮಾಹಿತಿಯನ್ನು ಒದಗಿಸಲಿದೆ. 95% ನಿಖರತೆಯನ್ನು ಇದು ಸಾಧಿಸಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯಾಗ್‌ರಾಜ್‌ನ 200 ಸ್ಥಳಗಳಲ್ಲಿ 744 ತಾತ್ಕಾಲಿಕ ಹಾಗೂ 268 ಕಡೆಗಳಲ್ಲಿ 1107 ಶಾಶ್ವತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜೊತೆಗೆ 100ಕ್ಕೂ ಹೆಚ್ಚು ಪಾರ್ಕಿಂಗ್ ಜಾಗಗಳಲ್ಲಿ 720 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಉದ್ದೇಶಿಸಿದ್ದು, ಸುಗಮ ಸಂಚಾರಕ್ಕೆ ಹಾಗೂ ಜನದಟ್ಟಣೆ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಆಯುಕ್ತ ವಿಜಯ್ ವಿಶ್ವಾಸ್ ಪಂತ್ ಮಾಹಿತಿ ನೀಡಿದ್ದಾರೆ.

Maha Kumbh Mela

ಗೂಗಲ್‌ನಿಂದ ‘ನ್ಯಾವಿಗೇಷನ್ ಸಿಸ್ಟಮ್’:
ಮಹಾ ಕುಂಭಮೇಳಕ್ಕಾಗಿ ವಿಶೇಷ ನ್ಯಾವಿಗೇಷನ್ ಸಿಸ್ಟಮ್ ಅನ್ನು ಗೂಗಲ್ ಅಭಿವೃದ್ಧಿಪಡಿಸುತ್ತಿದೆ. ಗೂಗಲ್ ತಾತ್ಕಾಲಿಕ ನಗರಕ್ಕೆ ನ್ಯಾವಿಗೇಷನ್ ಸಿಸ್ಟಮ್ ಅನ್ನು ರಚಿಸುತ್ತಿರುವುದು ಇದೇ ಮೊದಲು. ಇದು ಪ್ರವಾಸಿಗರಿಗೆ ಅಥವಾ ಭಕ್ತರಿಗೆ ಪ್ರಮುಖ ರಸ್ತೆಗಳು, ಧಾರ್ಮಿಕ ಸ್ಥಳಗಳು, ಘಾಟ್‌ಗಳ ಬಗ್ಗೆ ಮಾಹಿತಿಯನ್ನು ನೀಡುತ್ತದೆ.

ಐಷಾರಾಮಿ ಟೆಂಟ್ ಸಿಟಿ:
ಯಾತ್ರಾರ್ಥಿಗಳ ಸಂಚಾರಕ್ಕೆ ಅನುವಾಗಲು ಹಾಗೂ ಪರಿಸರಸ್ನೇಹಿ ಪ್ರಯಾಣ ಖಚಿತಕ್ಕಾಗಿ ಆ್ಯಪ್ ಆಧಾರಿತ ಇ-ರಿಕ್ಷಾ ಸೇವೆಯನ್ನು ಸರ್ಕಾರ ಒದಗಿಸುತ್ತಿದೆ. ಯಾತ್ರಾರ್ಥಿಗಳಿಗಾಗಿ ಟೆಂಟ್ ಸಿಟಿ ನಿರ್ಮಿಸಲಾಗುತ್ತಿದೆ. ವಿಲ್ಲಾ, ಮಹಾರಾಜ, ಸ್ವಿಜ್ ಕಾಟೇಜ್, ಡಾರ್ಮೆಟ್ರಿ ಎಂಬ 4 ವಿಧಗಳ ಟೆಂಟ್ ಇರಲಿದ್ದು, ಐಷಾರಾಮಿ ಸೇವೆಯ 2000 ಸ್ವಿಜ್ ಕಾಟೇಜ್‌ಗಳನ್ನೂ ನಿರ್ಮಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ಮಾಹಿತಿ ಒದಗಿಸಲು ಚಾಟ್‌ಬಾಟ್:
ಭಾರತ ತಂತ್ರಜ್ಞಾನದಲ್ಲಿ ಸಾಧಿಸುತ್ತಿರುವ ಪ್ರಗತಿಯನ್ನು ಕುಂಭಮೇಳಕ್ಕೂ ವಿಸ್ತರಿಸಿದೆ. ಪ್ರಯಾಣಿಕರಿಗೆ ನೆರವು ನೀಡುವುದಕ್ಕಾಗಿ ಕೃತಕ ಬುದ್ಧಿಮತ್ತೆ ಚಾಟ್‌ಬಾಟನ್ನು ಸ್ಥಾಪನೆ ಮಾಡಿದೆ. ಈ ಚಾಟ್‌ಬಾಟ್ ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಇದೊಂದು ಆ್ಯಪ್ ಆಗಿದ್ದು, ‘ಓಲಾ ಕೃತಿಮ್’ ಇದನ್ನು ತಯಾರು ಮಾಡಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತಮಿಳು, ತೆಲುಗು, ಮರಾಠಿ, ಮಲಯಾಳ, ಉರ್ದು, ಗುಜರಾತಿ, ಪಂಜಾಬಿ ಮತ್ತು ಬೆಂಗಾಲಿಗಳಲ್ಲಿ ಇದು ಮಾಹಿತಿ ಒದಗಿಸಲಿದೆ. ಅಲ್ಲದೇ ಇಡೀ ಕುಂಭಮೇಳದ ಮ್ಯಾಪ್ ಒದಗಿಸಲಿದ್ದು, ಕುಂಭಮೇಳದ ಇತಿಹಾಸ, ಪದ್ಧತಿ ಸೇರಿದಂತೆ ಹಲವು ಮಾಹಿತಿಯನ್ನು ಒದಗಿಸಲಿದೆ.

ಏಕಮಾರ್ಗ:
ಮಹಾ ಕುಂಭದ ಸಮಯದಲ್ಲಿ ಸುಗಮ ಸಂಚಾರಕ್ಕಾಗಿ 7 ಪ್ರಮುಖ ಮಾರ್ಗಗಳಲ್ಲಿ ಏಕಮುಖ ಮಾರ್ಗ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಇದರಲ್ಲಿ ಜಾನ್‌ಪುರ, ವಾರಣಾಸಿ, ಮಿರ್ಜಾಪುರ, ರೇವಾ, ಕಾನ್ಪುರ, ಲಕ್ನೋ ಮತ್ತು ಅಯೋಧ್ಯೆ-ಪ್ರತಾಪಗಢ ಸೇರಿದೆ.

Maha Kumbh Mela 1

ಪಾರ್ಕಿಂಗ್ ಸೌಲಭ್ಯ:
ಒಟ್ಟು 101 ಪಾರ್ಕಿಂಗ್ ಸೈಟ್‌ಗಳನ್ನು ಪ್ರಸ್ತಾಪಿಸಿದ್ದು, ಸುಮಾರು 5 ಲಕ್ಷ ವಾಹನಗಳಿಗೆ ಅವಕಾಶ ಕಲ್ಪಿಸುತ್ತದೆ. ಭಾರೀ ಹಾಗೂ ಲಘು ವಾಹನಗಳಿಗೆ ಪ್ರತ್ಯೆಕ ಪಾರ್ಕಿಂಗ್ ವ್ಯವಸ್ಥೆ ಇರುತ್ತದೆ.

ಶಟಲ್ ಸೇವೆ:
ಮಹಾ ಕುಂಭದ ಸಮಯದಲ್ಲಿ 550 ಶಟಲ್ ಬಸ್ಸುಗಳು ಹಾಗೂ 20,000 ಇ ರಿಕ್ಷಾಗಳು ವಿವಿಧ ಪ್ರದೇಶಗಳಲ್ಲಿ ಪ್ರಯಾಣಿಕರಿಗೆ ಸೌಲಭ್ಯ ಒದಗಿಸುತ್ತದೆ. ಕುಂಭ ಮೇಳ ನಡೆಯುವ ಪ್ರದೇಶದಲ್ಲಿ 100 ಡಿಜಿಟಲ್ ಬೋರ್ಡ್ ಹಾಗೂ 80 ವಿಎಂಡಿ ಅಳವಡಿಸಲಾಗುತ್ತದೆ. ಇದರಿಂದ ಯಾತ್ರಾರ್ಥಿಗಳಿಗೆ ಸಂಚಾರ ಮಾರ್ಗ ಮತ್ತು ಪಾರ್ಕಿಂಗ್ ಸ್ಥಿತಿಯಂತಹ ವಿವಿಧ ವಿವರಗಳನ್ನು ಒದಗಿಸುತ್ತದೆ.

ಮಹಾ ಕುಂಭದ ಅವಧಿಯಲ್ಲಿ 18,000 ಆರ್‌ಪಿಎಫ್ ಮತ್ತು ಜಿಆರ್‌ಪಿ ಯೋಧರನ್ನು ನಿಯೋಜಿಸಲಾಗಿದೆ. ಇದರಲ್ಲಿ ಆರ್‌ಪಿಎಫ್ ಯೋಧರ ಸಂಖ್ಯೆ 8,000 ಮತ್ತು ಜಿಆರ್‌ಪಿ ಸೈನಿಕರ ಸಂಖ್ಯೆ 10,000 ಇರಲಿದೆ. ಅಲ್ಲದೇ ದೇಶಾದ್ಯಂತ 13,000 ರೈಲ್ವೆ ಅಧಿಕಾರಿಗಳು ಮತ್ತು ನೌಕರರನ್ನು ಇಲ್ಲಿಗೆ ನಿಯೋಜಿಸಲಾಗುತ್ತಿದೆ. ಹಿಂದಿ ಮತ್ತು ಇಂಗ್ಲಿಷ್ ಜೊತೆ ದಕ್ಷಿಣ ಭಾರತ, ಪಂಜಾಬಿ, ಬೆಂಗಾಲಿ, ಮರಾಠಿ, ಗುಜರಾತಿ ಇತ್ಯಾದಿ ಮಾತನಾಡಬಲ್ಲ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಮಹಾ ಕುಂಭಮೇಳದ ಸಂದರ್ಭದಲ್ಲಿ ಭಕ್ತರಿಗೆ ಸ್ಥಳಾವಾಕಾಶ ಕಲ್ಪಿಸಲು 3,000 ವಿಶೇಷ ರೈಲುಗಳನ್ನು ಒಳಗೊಂಡಮತೆ 45 ದಿನಗಳಲ್ಲಿ ಒಟ್ಟು 13,000 ರೈಲುಗಳು ಕಾರ್ಯ ನಿರ್ವಹಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

TAGGED:Maha Kumbh Mela 2025Prayag Rajuttar pradeshYogi Adityanath
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Villagers protested against illegal stone mining in several places in Anavatti Shivamogga
Districts

ಅಕ್ರಮ ಕಲ್ಲು ಗಣಿಗಾರಿಕೆ ಸ್ಫೋಟಕ್ಕೆ ಗರ್ಭಿಣಿಯರಿಗೆ ರಕ್ತಸ್ರಾವ – ಕ್ರಮಕೈಗೊಳ್ಳದ ಸಚಿವರ ವಿರುದ್ಧ ಆಕ್ರೋಶ

Public TV
By Public TV
2 minutes ago
Vijayalakshmi Darshan
Crime

ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

Public TV
By Public TV
31 minutes ago
Ram Mandir
Latest

Ayodhya | ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

Public TV
By Public TV
37 minutes ago
Nelamangala Wife Suicide copy
Bengaluru City

200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ; ಪತ್ನಿ ಆತ್ಮಹತ್ಯೆ

Public TV
By Public TV
1 hour ago
Iran Protest 2 1
Latest

ಇರಾನ್‌ನಲ್ಲಿ ಭುಗಿಲೆದ್ದ ಹಿಂಸಾಚಾರ – ರಾಜಧಾನಿಯಲ್ಲೇ 217 ಮಂದಿ ಬಲಿ

Public TV
By Public TV
1 hour ago
Khawaja Asif Benjamin Netanyahu
Latest

ಬೆಂಜಮಿನ್ ನೆತನ್ಯಾಹು ಅಪಹರಿಸಿ – ಅಮೆರಿಕ, ಟರ್ಕಿಗೆ ಪಾಕ್ ಒತ್ತಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?