Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾ ಕುಂಭಮೇಳದಿಂದ ದೇಶದ ಸಾಮೂಹಿಕ ಪ್ರಜ್ಞೆ ಬಲಗೊಂಡಿದೆ – ಲೋಕಸಭೆಯಲ್ಲಿ ಮೋದಿ ಶ್ಲಾಘನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮಹಾ ಕುಂಭಮೇಳದಿಂದ ದೇಶದ ಸಾಮೂಹಿಕ ಪ್ರಜ್ಞೆ ಬಲಗೊಂಡಿದೆ – ಲೋಕಸಭೆಯಲ್ಲಿ ಮೋದಿ ಶ್ಲಾಘನೆ

Karnataka

ಮಹಾ ಕುಂಭಮೇಳದಿಂದ ದೇಶದ ಸಾಮೂಹಿಕ ಪ್ರಜ್ಞೆ ಬಲಗೊಂಡಿದೆ – ಲೋಕಸಭೆಯಲ್ಲಿ ಮೋದಿ ಶ್ಲಾಘನೆ

Public TV
Last updated: March 18, 2025 3:34 pm
Public TV
Share
2 Min Read
PM modi 3
SHARE

ನವದೆಹಲಿ: ಇತ್ತೀಚಿಗೆ ನಡೆದ ಮಹಾ ಕುಂಭಮೇಳವು ನಮ್ಮ ಚಿಂತನೆಯನ್ನು ಮತ್ತಷ್ಟು ಬಲಪಡಿಸಿದೆ. ಜೊತೆಗೆ ದೇಶದ ಸಾಮೂಹಿಕ ಪ್ರಜ್ಞೆಯು ನಮ್ಮೆಲ್ಲರ ಶಕ್ತಿಯ ಬಗ್ಗೆ ಹೇಳುತ್ತದೆ. ಕಳೆದ ವರ್ಷ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭವು ಮುಂದಿನ 1000 ವರ್ಷಗಳಿಗೆ ಭಾರತ ಹೇಗೆ ತಯಾರಿ ನಡೆಸುತ್ತದೆ ಎಂಬುದನ್ನು ನಮಗೆಲ್ಲರಿಗೂ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶ್ಲಾಘಿಸಿದರು.

ಲೋಕಸಭೆಯಲ್ಲಿ ಮಹಾ ಕುಂಭಮೇಳದ ಯಶಸ್ಸಿನ ಬಗ್ಗೆ ಮಾತನಾಡಿದ ಅವರು, ಮಹಾ ಕುಂಭಮೇಳದ ಯಶಸ್ಸಿಗೆ ಅನೇಕ ಜನರು ಕೊಡುಗೆ ನೀಡಿದ್ದಾರೆ. ನಾನು ಎಲ್ಲಾ ಕರ್ಮಯೋಗಿಗಳನ್ನು ಅಭಿನಂದಿಸುತ್ತೇನೆ. ದೇಶಾದ್ಯಂತ ಭಕ್ತರಿಗೆ, ಉತ್ತರ ಪ್ರದೇಶದ ಜನರಿಗೆ ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್‌ನ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಜನರು ಅನುಕೂಲತೆ ಹಾಗೂ ಅನಾನುಕೂಲತೆಯ ಬಗ್ಗೆ ಚಿಂತಿಸದೆ ಮಹಾ ಕುಂಭಮೇಳದಲ್ಲಿ ಭಾಗವಹಿಸಿದರು. ಈ ಮೂಲಕ ನಮ್ಮ ಸಂಪ್ರದಾಯಗಳನ್ನು ಪೀಳಿಗೆಯಿಂದ ಪೀಳಿಗೆಗೆ ವರ್ಗಾಯಿಸುವ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದರು.ಇದನ್ನೂ ಓದಿ: ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

ಇಂದು ಭಾರತದ ಯುವಕರು ಅದರ ಸಂಪ್ರದಾಯ, ನಂಬಿಕೆ ಮತ್ತು ಪದ್ಧತಿಗಳನ್ನು ಹೆಮ್ಮೆಯಿಂದ ಅಳವಡಿಸಿಕೊಳ್ಳುತ್ತಿದ್ದಾರೆ. ಒಂದು ದೇಶವಾಗಿ ನಾವು ದೊಡ್ಡ ಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಗಳಿಸಿದ್ದೇವೆ. ತನ್ನ ಪರಂಪರೆಯೊಂದಿಗೆ ಸಂಪರ್ಕ ಸಾಧಿಸುವ ಸಂಪ್ರದಾಯವು ಇಂದಿನ ಭಾರತದ ದೊಡ್ಡ ಆಸ್ತಿಯಾಗಿದೆ. ಯುವ ಪೀಳಿಗೆ ಕೂಡ ಮಹಾ ಕುಂಭಮೇಳದಲ್ಲಿ ಪೂರ್ಣ ಭಾವನೆಯಿಂದ ಭಾಗವಹಿಸಿದೆ. ಮಹಾ ಕುಂಭಮೇಳದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದವರಿಗೆ ಈಗ ಉತ್ತರ ಸಿಕ್ಕಿದೆ. ದೇಶದ ಮೂಲೆ ಮೂಲೆಯಲ್ಲೂ ಆಧ್ಯಾತ್ಮಿಕ ಪ್ರಜ್ಞೆ ಹೊರಹೊಮ್ಮಿದೆ. ಮಹಾ ಕುಂಭಮೇಳವನ್ನು ಭಾರತದ ಇತಿಹಾಸದಲ್ಲಿ ಒಂದು ಮಹತ್ವದ ತಿರುವು. ಜಗತ್ತು ದೇಶದ ಬೃಹತ್ ಸ್ವರೂಪವನ್ನು ಕಂಡಿದೆ. ಎಲ್ಲರ ಪ್ರಯತ್ನದ ಜೀವಂತ ಸಾಕಾರವಾಗಿದೆ ಎಂದು ಹೇಳಿದರು.

Speaking in the Lok Sabha. https://t.co/n2vCSPXRSE

— Narendra Modi (@narendramodi) March 18, 2025

 

ಮಹಾ ಕುಂಭಮೇಳದಲ್ಲಿ ನಾವು ನಮ್ಮ ರಾಷ್ಟ್ರೀಯ ಪ್ರಜ್ಞೆಯ ಮಹಾ ಜಾಗೃತಿಯನ್ನು ಕಂಡಿದ್ದೇವೆ. ಇದು ನಮಗೆ ಹೊಸ ನಿರ್ಣಯಗಳನ್ನು ಸಾಧಿಸಲು ಸ್ಫೂರ್ತಿ ನೀಡುತ್ತದೆ. ನಮ್ಮ ಸಾಮರ್ಥ್ಯಗಳ ಬಗ್ಗೆ ಕೆಲವು ಜನರು ಹೊಂದಿರುವ ಅನುಮಾನ ಹಾಗೂ ಭಯಕ್ಕೆ ಮಹಾಕುಂಭವು ಸೂಕ್ತ ಉತ್ತರವನ್ನು ನೀಡಿದೆ. ಮಹಾಕುಂಭದಿಂದ ಅನೇಕ ಅಮೃತಗಳು ಹೊರಹೊಮ್ಮಿವೆ ಮತ್ತು ಏಕತೆಯ ಅಮೃತವು ಅದರ ಅತ್ಯಂತ ಪವಿತ್ರ ಪ್ರಸಾದವಾಗಿದೆ ಎಂದರು.

ವಿವೇಕಾನಂದರು ಚಿಕಾಗೋ ಧರ್ಮ ಸಂಸತ್ತಿನಲ್ಲಿ ಮಾಡಿದ ಭಾಷಣ, ಗಾಂಧೀಜಿಯವರ `ದಂಡಿ ಮೆರವಣಿಗೆ’ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ `ದೆಹಲಿ ಚಲೋ’ ಘೋಷಣೆಯಂತಹ ಐತಿಹಾಸಿಕ ಸಂದರ್ಭಗಳನ್ನು ಉಲ್ಲೇಖಿಸಿದ ಮೋದಿ, ಪ್ರಯಾಗ್‌ರಾಜ್ ಮಹಾ ಕುಂಭವನ್ನು ಜಾಗೃತಿ ಭಾರತದ ಪ್ರತಿಬಿಂಬವನ್ನು ಕಾಣುವ ಒಂದು ಪ್ರಮುಖ ಮೈಲಿಗಲ್ಲಾಗಿ ನಾನು ನೋಡುತ್ತೇನೆ ಎಂದರು. ಇತ್ತೀಚಿನ ಮಾರಿಷಸ್ ಭೇಟಿಯನ್ನು ಉಲ್ಲೇಖಿಸಿದ ಅವರು, ಕಳೆದ ವಾರ ನಾನು ತ್ರಿವೇಣಿ ಸಂಗಮದ ಪವಿತ್ರ ನೀರನ್ನು ಮಾರಿಷಸ್‌ಗೆ ತೆಗೆದುಕೊಂಡು ಹೋಗಿದ್ದೆ. ಆ ನೀರನ್ನು ಅಲ್ಲಿನ ಗಂಗಾ ಕೊಳದಲ್ಲಿ ಮುಳುಗಿಸಿದಾಗ, ಅಲ್ಲಿ ಅಪಾರ ಉತ್ಸಾಹ ಮತ್ತು ನಂಬಿಕೆಯ ವಾತಾವರಣವಿತ್ತು ಎಂದು ಸಂತಸ ವ್ಯಕ್ತಪಡಿಸಿದರು.ಇದನ್ನೂ ಓದಿ: ನ್ಯಾಯಬೆಲೆ ಅಂಗಡಿಯಲ್ಲಿ ಟೋಕನ್ ಎಸೆದವನ ಮೇಲೆ ಕ್ರಮ: ಮುನಿಯಪ್ಪ

TAGGED:lokasabhaMahakumbhamelapm narendra modiUttara Pradeshಪ್ರಧಾನಿ ನರೇಂದ್ರ ಮೋದಿಮಹಾ ಕುಂಭಮೇಳಲೋಕಸಭೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
4 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
7 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
7 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
20 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
35 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?