Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೋವಾ ಪರವೇ ಕೇಸ್ ಗಟ್ಟಿಯಾಗಿದೆ: ಗೋವಾ ವಕೀಲ ಆತ್ಮಾರಾಮ ನಾಡಕರ್ಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗೋವಾ ಪರವೇ ಕೇಸ್ ಗಟ್ಟಿಯಾಗಿದೆ: ಗೋವಾ ವಕೀಲ ಆತ್ಮಾರಾಮ ನಾಡಕರ್ಣಿ

Latest

ಗೋವಾ ಪರವೇ ಕೇಸ್ ಗಟ್ಟಿಯಾಗಿದೆ: ಗೋವಾ ವಕೀಲ ಆತ್ಮಾರಾಮ ನಾಡಕರ್ಣಿ

Public TV
Last updated: December 27, 2017 3:28 pm
Public TV
Share
3 Min Read
mahadayi nadakarni
SHARE

ಬೆಂಗಳೂರು: ಆಗಸ್ಟ್ ನಲ್ಲಿ ಮಹದಾಯಿ ಕುರಿತಂತೆ ನ್ಯಾಯಮಂಡಳಿ ತೀರ್ಪು ಬರಲಿದೆ. ಮಹದಾಯಿ ವಿಚಾರದಲ್ಲಿ ಗೋವಾ ನ್ಯಾಯಾಧಿಕರಣದ ಮುಂದೆ ದೃಢವಾದ ಸಾಕ್ಷ್ಯಾಧಾರಗಳನ್ನ ಒದಗಿಸಿದೆ ಎಂದು ಗೋವಾ ಪರವಾಗಿ ವಾದ ಮಾಡುತ್ತಿರುವ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆತ್ಮಾರಾಮ ನಾಡಕರ್ಣಿ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ನಾಡಕರ್ಣಿ, ನ್ಯಾಯಾಧಿಕರಣದಲ್ಲಿ ಕೇಸ್ ಗೋವಾ ಪರವೇ ಗಟ್ಟಿ ಇದೆ. ಗೋವಾ ವಕೀಲರ ತಂಡ ರಾಜ್ಯದ ಹಿತಾಸಕ್ತಿಗಾಗಿ ಹೋರಾಟ ಮಾಡ್ತಿದೆ. ಇದರಲ್ಲಿ ಯಾವುದೇ ರಾಜಿ ಇಲ್ಲ. ನಮಗೆ ಮಹದಾಯಿ ನದಿ ಗೋವಾದಲ್ಲಿ ಹರಿಯಬೇಕು ಎಂದು ಹೇಳಿದ್ದಾರೆ.

ಮಹದಾಯಿ ವಿಚಾರಣೆ ಕೊನೆಯ ಹಂತಕ್ಕೆ ಬಂದಿದೆ. ಎಲ್ಲಾ ಸಾಕ್ಷಿ, ಪುರಾವೆಗಳ ಪರಿಶೀಲನೆ ಮುಗಿದಿದೆ. ಒಂದೆರಡು ಸಾಕ್ಷ್ಯಾಧಾರಗಳ ಪರಿಶೀಲನೆಗೆ ಕರ್ನಾಟಕಕ್ಕೆ ಸ್ವಾತಂತ್ರ್ಯ ನೀಡಲಾಗಿದೆ. ಜನವರಿ 15ರೊಳಗೆ ಅವರು ಫೈಲ್ ಮಾಡಬೇಕು. ಇಲ್ಲವಾದಲ್ಲಿ ಫೆಬ್ರವರಿ 6ರಿಂದ ವಾದ ಶುರುವಾಗುತ್ತದೆ. ನಾವು ನಮ್ಮ ಪ್ರತಿವಾದವನ್ನು ಜನವರಿ 15ರೊಳಗೆ ಫೈಲ್ ಮಾಡಬೇಕು. ಫೆಬ್ರವರಿ 6ರಿಂದ ನಾನು ನನ್ನ ವಾದ ಶುರು ಮಾಡುತ್ತೇನೆ. ವಾದ ಪೂರ್ಣಗೊಳಿಸಲು ಕನಿಷ್ಠ ಒಂದು ತಿಂಗಳು ತೆಗೆದುಕೊಳ್ಳುತ್ತೇನೆ. ಫೆಬ್ರವರಿಯಲ್ಲಿ ನಾನು, ಮಾರ್ಚ್‍ನಲ್ಲಿ ಕರ್ನಾಟಕ, ಏಪ್ರಿಲ್‍ನಲ್ಲಿ ಕೆಲವು ದಿನಗಳನ್ನ ಮಹಾರಾಷ್ಟ್ರ ತೆಗೆದುಕೊಳ್ಳುತ್ತದೆ. ಅಗತ್ಯ ಇದ್ದರೆ ಅವರ ವಾದದ ಆಧಾರದ ಮೇಲೆ ನಾನು ಕೆಲವು ದಿನ ಮತ್ತೆ ಸೇರ್ಪಡೆಯಾಗ್ತೀನಿ. ಅಲ್ಲಿಗೆ ಮುಗಿಯುತ್ತದೆ. ಜೂನ್-ಜುಲೈ ವೇಳೆಗೆ ನ್ಯಾಯಾಧಿಕರಣದಿಂದ ತೀರ್ಪು ಬರುತ್ತದೆ. ಆಗಸ್ಟ್ 2018ರ ವೇಳೆಗೆ ನ್ಯಾಯಾಧಿಕರಣದ ಅವಧಿ ಕೂಡ ಮುಕ್ತಾಯವಾಗುತ್ತದೆ. ಅದಕ್ಕೂ ಮುನ್ನ ಅವರು ತೀರ್ಪು ಪ್ರಕಟಿಸಬೇಕು ಎಂದು ನಾಡಕರ್ಣಿ ತಿಳಿಸಿದ್ರು.

Mahadayi River 2

ಯಡಿಯೂರಪ್ಪರನ್ನ ನಂಬಬಹುದಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಕರಣದಲ್ಲಿ ನ್ಯಾಯಾಧಿಕರಣದ ಮುಂದೆ ನನಗೆ ಕರ್ನಾಟಕ ವಿರೋಧಿ. ಹೀಗಾಗಿ ಯಾವುದೇ ಕಾರಣಕ್ಕೂ ನಾನು ಕರ್ನಾಟಕ ಹಾಗೂ ಕರ್ನಾಟಕದ ಯಾರನ್ನೂ ನಂಬುವುದಿಲ್ಲ. ಯಾಕಂದ್ರೆ ಟ್ರಿಬ್ಯುನಲ್ ತೀರ್ಪು, ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರವೂ ಕರ್ನಾಟಕ ಸುಗ್ರೀವಾಜ್ಞೆಗಳನ್ನ ತಂದಿರುವ ಇತಿಹಾಸವಿದೆ. ಆದ್ದರಿಂದ ನಾನು ಕರ್ನಾಟಕವನ್ನು ನಂಬಲು ಸಿದ್ಧವಿಲ್ಲ ಎಂದು ಹೇಳಿದ್ರು. ಗೋವಾ ಸಿಎಂ ಮನೋಹರ್ ಪರಿಕ್ಕರ್ ಪತ್ರ ಬರೆದಿದ್ದು ರಾಜಕೀಯ ಪರಿಹಾರಕ್ಕಷ್ಟೇ. ಯಡಿಯೂರಪ್ಪಗೆ ಬರೆದ ಪತ್ರಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಅಂದ್ರು.

ಕುಡಿಯುವ ನೀರಿನ ಬೇಡಿಕೆಗೆ ಯಾರಿಂದಲೂ ವಿರೋಧ ವ್ಯಕ್ತಪಡಿಸಲು ಸಾಧ್ಯವೇ ಇಲ್ಲ. ಕರ್ನಾಟಕ 7.5 ಟಿಎಂಸಿ ನೀರು ಕೇಳ್ತಿದೆ. ಆದ್ರೆ ಅವರಿಗೆ ನಿರ್ದಿಷ್ಟವಾಗಿ ಎಷ್ಟು ಪ್ರಮಾಣದ ನೀರು ಅಗತ್ಯವಿದೆ? ಎಂಬ ಪ್ರಶ್ನೆಗೆ ಉತ್ತರಿಸಿ, ಜಲಾನಯನ ಪ್ರದೇಶದ ಬಳಕೆಯನ್ನ ಪರಿಗಣಿಸಿದ್ರೆ(ಹುಬ್ಬಳ್ಳಿ ಧಾರವಾಡ ಅಲ್ಲ) ಬೆಳಗಾವಿ, ಖಾನಪುರ, ಹುಬ್ಬಳಿ ಪ್ರದೇಶಕ್ಕೆ ಎಷ್ಟು ಕುಡಿಯುವ ನೀರು ಬೇಕೋ ಅದನ್ನು ಅವರು ತೆಗೆದುಕೊಳ್ಳಲು ಯಾವುದೇ ವಿರೋಧವಿಲ್ಲ. ಅದನ್ನು ನಾವು ಹೇಳಿದ್ದೇವೆ. ನಾವು ಒಂದು ಹನಿ ನೀರನ್ನೂ ಕೊಡುವುದಿಲ್ಲ ಎಂದು ಹೋರಾಟಗಾರರಂತೆ ಹೇಳಲು ಸಾಧ್ಯವಿಲ್ಲ. ಬೆಳಗಾವಿ ಖಾನಾಪುರ ಜನರಿಗೆ 0.1 ಟಿಎಂಸಿ ನೀರು ಬಿಟ್ಟರೆ ಸಾಕು ಎಂದು ಹೇಳಿದ್ರು.

athmaram nadakarni

ಹೆಚ್ಚುವರಿ ಸಾಲಿಸಿಟರ್ ಜನರಲ್ ಗೋವಾ ಪರ ವಕೀಲಿ ಮಾಡಬಹುದೇ?: ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ಆಯ್ಕೆಯಾಗುವ ವಕೀಲರು ಖಾಸಗಿ ಮೊಕದ್ದಮೆಗಳ ವಕೀಲಿ ಕೈಗೊಳ್ಳು­ವಂತಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಯ ಮೊಕದ್ದಮೆಗಳ ವಿನಃ ರಾಜ್ಯ ಸರ್ಕಾರಗಳು, ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳ ಪರ ವಕಾಲತ್ತು ಮಾಡಲು ಕೇಂದ್ರದ ಅನುಮತಿ ಪಡೆಯಬೇಕು. ಹೀಗಿರುವಾಗ ಎರಡೂ ರಾಜ್ಯಗಳ ನಡುವೆ ತಟಸ್ಥ ಧೋರಣೆ ಅನುಸರಿಸಬೇಕಾದ ಕೇಂದ್ರ ಸರ್ಕಾರ ಆತ್ಮಾರಾಮ ನಾಡಕರ್ಣಿ ಅವರಿಗೆ ಗೋವಾದ ಪರ ವಾದ ಮಾಡಲು ಅನುಮತಿ ನೀಡಿದ್ದು ಸರಿಯೇ ಎನ್ನುವ ಪ್ರಶ್ನೆ ಈ ಹಿಂದೆ ಎದ್ದಿತ್ತು. ಆದರೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ನೇಮಕಗೊಳ್ಳುವ ಮುನ್ನ ನಾಡಕರ್ಣಿ ಗೋವಾದ ಅಡ್ವೊಕೇಟ್ ಜನರಲ್ ಆಗಿದ್ದರು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆಪ್ತರು ಕೂಡ ಆಗಿದ್ದಾರೆ. ಕೇಂದ್ರದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ನಾಡಕರ್ಣಿ ಅವರನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್‍ಗಳಲ್ಲಿ ಒಬ್ಬರನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

Mahadayi River 1

Mahadayi River 4

Mahadayi River 3

Mahadayi River 5

MAHADAYI 4

MAHADAYI 3

MAHADAYI 6

mahadayi protest 6 1

mahadayi protest 6

mahadayi protest 8

mahadayi protest 1

Mahadayi Protest 1 1

Mahadayi Protest 8

Mahadayi protest b

hbl protest 25

hbl protest 29

hbl protest 14

hbl protest 12

hbl protest 3

TAGGED:athmaram nadakarnigoakarnatakamahadayiMahadayi disputePublic TVwaterಆತ್ಮಾರಾಮ ನಾಡಕರ್ಣಿನಾಡಕರ್ಣಿನ್ಯಾಯಾಧಿಕರಣಪಬ್ಲಿಕ್ ಟಿವಿಮಹದಾಯಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
6 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
24 minutes ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
34 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
39 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
1 hour ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?