Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಂದಾನಗರಿಯಲ್ಲಿ ಮಹದಾಯಿ ಕಿಚ್ಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕುಂದಾನಗರಿಯಲ್ಲಿ ಮಹದಾಯಿ ಕಿಚ್ಚು

Belgaum

ಕುಂದಾನಗರಿಯಲ್ಲಿ ಮಹದಾಯಿ ಕಿಚ್ಚು

Public TV
Last updated: January 1, 2020 5:14 pm
Public TV
Share
2 Min Read
Mahadayi BLG
SHARE

ಬೆಳಗಾವಿ: ಮಹದಾಯಿ ನ್ಯಾಯಾಧೀಕರಣದ ತೀರ್ಪಿನಂತೆ ಕೂಡಲೇ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬುಧವಾರ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸಿದರು. ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ ಮಹದಾಯಿ ನ್ಯಾಯಾಧೀಕರಣಕ್ಕೆ ಸಂಬಂಧಿಸಿದಂತೆ ಐತೀರ್ಪು ಹೊರಬಿದ್ದಿದ್ದು, ಇದಕ್ಕೆ ಕೇಂದ್ರ ಸರಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಜನವರಿ ಎರಡರಂದು ಪ್ರಧಾನಿ ಮೋದಿ ತುಮಕೂರಿನಲ್ಲಿ ನಡೆಯುವ ರೈತ ಸಮಾವೇಶಕ್ಕೆ ಆಗಮಿಸುತ್ತಿದ್ದು, ಈ ಸಮಾವೇಶದಲ್ಲಿ ಮಹದಾಯಿ ಹೋರಾಟದ ಬಗ್ಗೆ ಮಾತನಾಡುತ್ತಾರೆಂಬ ಆಶಾಕಿರಣ ಇಟ್ಟುಕೊಂಡಿದ್ದೇವೆ. ಹೊಸ ವರ್ಷಕ್ಕೆ ಮೋದಿ ಹೊಸ ಸುದ್ದಿ ಕೊಡಬೇಕು. ಇನ್ನೂ ನ್ಯಾಯಾಧೀಕರಣ ತೀರ್ಪಿನಲ್ಲಿ ಕರ್ನಾಟಕಕ್ಕೆ ಕೇವಲ 13.5 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದ್ದು ಅನ್ಯಾಯ. ಅದ್ದರಿಂದ ಕೇಂದ್ರ ಸರ್ಕಾರವು ಸಂವಿಧಾನಿಕ ಹಕ್ಕಿನ ಮೂಲಕ ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

BLG Mahadayi

ಈ ವೇಳೆ ಜೆಡಿಎಸ್ ಮಾಜಿ ಶಾಸಕ ಎನ್.ಎಚ್ ಕೋನರಡ್ಡಿ ಮಾತನಾಡಿ, ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆಗಾಗಿ ನಿರಂತರ ಹೋರಾಟ ನಡೆಯುತ್ತಲೇ ಇದ್ದು ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ತೀರ್ಪು ನೀಡಿ ಒಂದು ವರ್ಷ ಕಳೆದರೂ ಕೇಂದ್ರ ಸರ್ಕಾರ ಅದಿಸೂಚನೆ ಹೊರಡಿಸುತ್ತಿಲ್ಲ. ಕೂಡಲೇ ಅಧಿಸೂಚನೆ ಹೊರಡಿಸಬೇಕು ಮತ್ತು ಹೋರಾಟದಲ್ಲಿ ರೈತರ ಮೇಲಾದ ಕೇಸುಗಳನ್ನು ಹಿಂತೆಗೆದುಕೊಳ್ಳಬೇಕೆಂದರು. ಜನೆವರಿ ಐದರಂದು ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಮಹದಾಯಿ ನದಿ ವ್ಯಾಪ್ತಿಗೆ ಬರುವ ಶಾಸಕರ ಮತ್ತು ಸಂಸದರು ಹಾಗೂ ಸಚಿವರುಗಳು ಸೇರಿ ಸಭೆ ಕರೆಯಲಾಗಿದ್ದು ಸಮಸ್ಯೆ ಕುರಿತು ಚರ್ಚಿಸಲಿದ್ದೇವೆ ಎಂದರು.

Konareddy

ಗಡಿ ವಿಷಯಕ್ಕೆ ಸಂಬಂದಿಸಿದಂತೆ ಪ್ರತಿಕ್ರಿಯಿಸಿ ಸ್ಥಳೀಯ ಚುನಾವಣೆಗಳ ಲಾಭಕ್ಕಾಗಿ ಗಡಿಯ ವಿವಾದಕ್ಕೆ ಪ್ರಚೋದನೆ ಮಾಡಲಾಗುತ್ತಿದೆ. ಮಹಾರಾಷ್ಟ್ರವು ಬೆಳಗಾವಿ ಸುದ್ದಿಗೆ ಬಂದರೆ ಸೊಲ್ಲಾಪೂರ ಮತ್ತು ಕೊಲ್ಲಾಪೂರ ನಮ್ಮ ರಾಜ್ಯಕ್ಕೆ ಸೇರಿಸಿಕೊಳ್ಳುತ್ತೇವೆ ಎಂದರು. ಉತ್ತರ ಕರ್ನಾಟಕ ಪ್ರತ್ಯೇಕತೆ ವಿಚಾರಕ್ಕೆ ಸರ್ಕಾರವೇ ಕಾರಣವಾಗಿದೆ. ಇಲ್ಲಿ 9 ಕಚೇರಿಗಳನ್ನು ಪ್ರಾರಂಭಿಸಬೇಕಿತ್ತು ಮತ್ತು ಚಳಿಗಾಲ ಅಧಿವೇಶನ ನಡೆಸಬೇಕಿತ್ತು. ಅದನ್ನು ಸರ್ಕಾರ ಮಾಡದೇ ಇರುವುದು ಪ್ರತ್ಯೇಕತೆಯ ಕಾವಿಗೆ ಕಾರಣವಾಗಿದೆ. ಆದರೆ ಕರ್ನಾಟಕ ಯಾವಾಗಲೂ ಒಗ್ಗಟ್ಟಾಗಿಯೇ ಇರುತ್ತದೆ ಎಂದರು.

ರೈತ ಮುಖಂಡೆ ಜಯಶ್ರೀ ಗುರನ್ನವರ ಮಾತನಾಡಿ ರಾಜ್ಯದಲ್ಲಿ ಬಿಜೆಪಿ 25 ಜನ ಸಂಸದರಿದ್ದರೂ ಪ್ರಯೋಜನೆ ಇಲ್ಲದಂತಾಗಿದೆ. ಕೇವಲ ಮತಕ್ಕಾಗಿ ಬರುವ ಇವರಿಗೆ ರೈತರ ಸಮಸ್ಯೆ ಮತ್ತು ನೀರಿನ ಸಮಸ್ಯೆಯ ಬಗ್ಗೆ ಅರಿವಿಲ್ಲದಂತಾಗಿದೆ ಮಹದಾಯಿ ಹೋರಾಟಕ್ಕೆ ವರ್ಷಗಳೆ ಕಳೆದಿವೆ ಸಂಸದರು ಇನ್ನಾದರೂ ಪ್ರಧಾನಿ ಗಮನಕ್ಕೆ ತರಲಿ ಎಂದು ವಾಗ್ದಾಳಿ ನಡೆಸಿದರು.

mahadayi

ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ರೈತ ಮುಖಂಡ ಚೂನಪ್ಪಾ ಪೂಜಾರಿ, ಪ್ರಕಾಶ ನಾಯಕ್, ಸೋಮು ರೈನಾಪೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

TAGGED:belagaviCentral GovernmentmahadayiprotestPublic TVಕೇಂದ್ರ ಸರ್ಕಾರಪಬ್ಲಿಕ್ ಟಿವಿಪ್ರತಿಭಟನೆಬೆಳಗಾವಿಮಹದಾಯಿ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Mysuru Fire Accident Nursing College
Districts

ಮೈಸೂರು | ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ – ಧಗಧಗ ಹೊತ್ತಿ ಉರಿದ ಕಟ್ಟಡ

Public TV
By Public TV
14 minutes ago
pratap simha siddaramaiah
Districts

ಸಿದ್ದರಾಮಯ್ಯಗೆ ತಾಖತ್ ಇದ್ರೆ ಮೈಸೂರು ಸಿಟಿಯಲ್ಲಿ ಸ್ಪರ್ಧೆ ಮಾಡೋಕೆ ಹೇಳಿ ನೋಡೋಣ: ಯತೀಂದ್ರಗೆ ಪ್ರತಾಪ್ ಸಿಂಹ ಸವಾಲ್‌

Public TV
By Public TV
20 minutes ago
Bengaluru Mahadevapura Child Death Protest
Bengaluru City

ರಸ್ತೆ ಗುಂಡಿಗೆ ಮಗು ಬಲಿ – ರಸ್ತೆ ಸರಿಯಿಲ್ಲ ಅಂತ ಪ್ರತಿಭಟಿಸಿದವರ ವಿರುದ್ಧ FIR

Public TV
By Public TV
28 minutes ago
Accident
Crime

ವ್ಯಾನ್‌ಗೆ ಬಸ್ ಡಿಕ್ಕಿ – ಐವರು ಸಾವು, 6 ಮಂದಿಗೆ ಗಾಯ

Public TV
By Public TV
48 minutes ago
Chikkaballapura 3
Chikkaballapur

ಮಗಳನ್ನ ಪ್ರೀತಿಸಿದ್ದ ಯುವಕನ ಮೇಲೆ ಕೇಸ್ ಕೊಟ್ಟ ತಾಯಿ – ಜೈಲಿಂದ ಹೊರಬಂದಿದ್ದ ಯುವಕನಿಂದ ಕೊಲೆ

Public TV
By Public TV
53 minutes ago
Kashmir IED
Crime

ಪಂಜಾಬ್ & ಕಾಶ್ಮೀರದಲ್ಲಿ 2 IED ಪತ್ತೆ – ಭದ್ರತಾ ಪಡೆಗಳಿಂದ ನಿಷ್ಕ್ರಿಯ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?