ನಟಿ ಮಹಾಲಕ್ಷ್ಮಿ (Mahalakshmi) ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯ (Marriage) ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಇನ್ಸ್ಟಾ ಮತ್ತು ಫೇಸ್ ಬುಕ್ ಸೇರಿದಂತೆ ಸೋಷಿಯಲ್ ಖಾತೆಗಳಲ್ಲಿ ಅವರು ನಿತ್ಯವೂ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಒಬ್ಬರಿಗೊಬ್ಬರು ಹೊಗಳುವ ಮತ್ತು ಟ್ರಾವೆಲ್ ಮಾಡುತ್ತಿರುವ ಫೋಟೋಗಳನ್ನೂ ಅಪ್ ಲೋಡ್ ಮಾಡುವ ಮೂಲಕ ಅಭಿಮಾನಿಗಳ ಜೊತೆ ಸಂವಾದಿಸುತ್ತಿದ್ದಾರೆ. ಅಲ್ಲದೇ, ತಾವು ಹೊಸ ಬದುಕನ್ನು ಎಂಜಾಯ್ ಮಾಡುತ್ತಿರುವುದಾಗಿಯೂ ತಿಳಿಸಿದ್ದಾರೆ.
ಈ ನಡುವೆ, ನನ್ನ ಪತಿ ದಪ್ಪ ಇದ್ದಾರೆ. ಹಾಗಂತ ಅವರನ್ನು ಅವಮಾನ ಮಾಡಬೇಡಿ ಎಂದು ನಟಿ ಮಹಾಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಗೆ ಬಂದು ಮನವಿ ಮಾಡಿಕೊಂಡಿದ್ದಾರೆ. ದಪ್ಪ ಇದ್ದಾರೆ ಅನ್ನುವ ಕಾರಣಕ್ಕೆ ಟ್ರೋಲ್ ಮಾಡುತ್ತಿದ್ದೀರಿ. ಕೆಟ್ಟದ್ದಾಗಿ ಕಾಮೆಂಟ್ ಮಾಡಲಾಗುತ್ತಿದೆ. ಇದರಿಂದಾಗಿ ಅವರಿಗೆ ನೋವಾಗುತ್ತದೆ. ನಮ್ಮ ಪಾಡಿಗೆ ನಮ್ಮನ್ನು ನೆಮ್ಮದಿಯಾಗಿ ಇರುವುದಕ್ಕೆ ಬಿಡಿ ಎಂದು ಮಹಾಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಪ್ರೀತಿಯಿಂದ ಆಯ್ಕೆ ಮಾಡಿದ ಸೋನು ಮಾತಿನಿಂದ ಜಯಶ್ರೀಗೆ ಬೇಸರ – ಎಲ್ಲರೂ ದಂಗಾಗುವಂತೆ ಕಿರುಚಿದ್ಯಾಕೆ ಜಯಶ್ರೀ
ನಟಿ ಮಹಾಲಕ್ಷ್ಮಿ ಅವರನ್ನು ನಿರ್ಮಾಪಕ ರವೀಂದರ್ ಚಂದ್ರಶೇಖರನ್ (Ravinder Chandrasekhar) ಮದುವೆಯಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಪ್ರತಿಯೊಂದು ಸಂಗತಿಯನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಪ್ರೈವೆಟ್ ಜಟ್ ನಲ್ಲಿ ಹನಿಮೂನಿಗೆ (Honeymoon) ಹೋಗುವ ಮುನ್ನ ಅವರು ಮನೆದೇವರ ಗುಡಿಗೆ ಹೋಗಿ ಆಶೀರ್ವಾದ ಪಡೆದಿದ್ದಾರೆ. ಆ ಫೋಟೋವನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ ಅಚ್ಚರಿ ಮೂಡಿಸಿದ್ದ ಈ ಜೋಡಿ, ಮದುವೆಯಾದ ಮೂರನೇ ದಿನಕ್ಕೆ ಹನಿಮೂನ್ ಟೂರ್ ಮಾಡಿದ್ದಾರೆ. ಹನಿಮೂನ್ ಸ್ಪಾಟ್ ನಿಂದಲೇ ಅವರು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್ ಕೂಡ ಆಗಿವೆ.