ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿರುವ, ಆಕಾಶ್ ಶ್ರೀವತ್ಸ (Shivaji Surathkal 2) ನಿರ್ದೇಶನದಲ್ಲಿ ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ ‘ಶಿವಾಜಿ ಸುರತ್ಕಲ್ 2’ ಚಿತ್ರವನ್ನು ಇತ್ತೀಚೆಗೆ ಮೈಸೂರು ಮಹಾರಾಜರಾದ ಯದುವೀರ ಒಡೆಯರ್ (Yaduveera Wodeyar) ಅವರು ವೀಕ್ಷೀಸಿದರು. ನಾಯಕ ರಮೇಶ್ ಅರವಿಂದ್ (Ramesh Aravind) ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
‘ನನಗೆ ಪತ್ತೆಧಾರಿ ಸಿನಿಮಾಗಳು ಬಹಳ ಇಷ್ಟ. ಶಿವಾಜಿ ಸುರತ್ಕಲ್ 2 ಚಿತ್ರ ತುಂಬಾ ಚೆನ್ನಾಗಿದೆ. ಈ ಚಿತ್ರದ ಮುಂದುವರಿದ ಭಾಗಗಳು ಇನ್ನು ಹೆಚ್ಚಾಗಿ ಬರಲಿ. ಉತ್ತಮವಾದ ಸಿನಿಮಾವನ್ನು ಚಿತ್ರತಂಡ ನೀಡಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಮಹಾರಾಜರು ಮನತುಂಬಿ ಹಾರೈಸಿದರು. ಇದನ್ನೂ ಓದಿ:‘ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್
ಈಗಾಗಲೇ ಜನಮನಸೂರೆಗೊಂಡಿರುವ ಈಚಿತ್ರ ಚಿತ್ರಮಂದಿರಗಳಲ್ಲಿ ಯಶಸ್ವಿ 41 ದಿನಗಳನ್ನು ಪೂರೈಸಿ, 50ನೇ ದಿನದತ್ತ ಹೆಜ್ಜೆ ಹಾಕುತ್ತಿದೆ. ಬಾಕ್ಸ್ ಆಫೀಸಿನಲ್ಲೂ ಸದ್ದು ಮಾಡಿದೆ. ಆಕಾಶ್ ಆಕಾಶ್ ಶ್ರೀವಾಸ್ತ (Akash Srivastava) ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದರೆ, ಶಿವರಾಜಿ ಸುರತ್ಕಲ್ ಆಗಿ ರಮೇಶ್ ಅರವಿಂದ್ ಕಾಣಿಸಿಕೊಂಡಿದ್ದಾರೆ. ಮೇಘನಾ ಗಾಂವ್ಕರ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.