ಮುಂಬೈ: ತಲೆಗೆ ಗುಂಡು ಹಾರಿಸಿಕೊಂಡು ಮಹಾರಾಷ್ಟ್ರದ (Maharashtra) ಬಿಜೆಪಿ ಮುಖಂಡ ಭಗೀರಥ ಬಿಯಾನಿ(50) (Bhagirath Biyani) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭಗೀರಥ ಬಿಯಾನಿ ಅವರು ಬಿಜೆಪಿಯ ಬೀಡ್ ಜಿಲ್ಲಾ ಘಟಕದ (BJP’s Beed district unit) ಮುಖ್ಯಸ್ಥರಾಗಿದ್ದರು. ಆದರೆ ಇಂದು ಮಧ್ಯಾಹ್ನ ಮೀರಾ ನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಪರವಾನಗಿ ಪಡೆದ ರಿವಾಲ್ವರ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಂಡಿನ ಶಬ್ಧ ಕೇಳಿಸಿಕೊಂಡ ಕುಟುಂಬಸ್ಥರು ಭಗೀರಥ ಬಿಯಾನಿ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟೋತ್ತಿಗಾಗಲೇ ಬಿಜೆಪಿ ಮುಖಂಡ ಮೃತಪಟ್ಟಿದ್ದರು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ನಿಮ್ಮನ್ನು ಎಲ್ಲಿ ನಿಲ್ಲಿಸಬೇಕೋ ಅಲ್ಲೇ ನಿಲ್ಲಿಸುತ್ತೇವೆ- ಸಿದ್ದರಾಮಯ್ಯಗೆ ಬಿಎಸ್ವೈ ಎಚ್ಚರಿಕೆ
ಭಗೀರಥ ಬಿಯಾನಿ ಅವರು ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗುತ್ತಿದ್ದು, ಇದೀಗ ಈ ಸಂಬಂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಒಂದೇ ಬಾತ್ರೂಂನಲ್ಲಿ ಎರಡು ಕಮೋಡ್ – ಸ್ಟಾಲಿನ್ ಉದ್ಘಾಟಿಸಿದ ಕಟ್ಟಡ ಟ್ರೋಲ್