– ಸಾಕಷ್ಟು ಹೂವಿನ ಮಾಲೆ, ಸೇರಿದಂತೆ ಎಲ್ಲ ರೀತಿಯ ಸಿದ್ಧತೆ
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸದಲ್ಲಿರುವುದರಿಂದ ಬುಧವಾರವೇ ಅಲ್ಲಿನ ರಾಜ್ಯ ಬಿಜೆಪಿ ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ 5 ಸಾವಿರಕ್ಕೂ ಅಧಿಕ ಲಡ್ಡುಗಳು ಹಾಗೂ ಅನೇಕ ಹೂವಿನ ಮಾಲೆಗಳಿಗೆ ಆರ್ಡರ್ ನೀಡಿದೆ.
ಅಲ್ಲದೆ ಚುನಾವಣಾ ಫಲಿತಾಂಶ ವೀಕ್ಷಣೆಗೆ ಮುಂಬೈನಲ್ಲಿರುವ ರಾಜ್ಯ ಬಿಜೆಪಿಯ ಕೇಂದ್ರ ಕಚೇರಿ ಬಳಿ ದೊಡ್ಡ ಸ್ಕ್ರೀನ್ ಅಳವಡಿಸಲಾಗಿದ್ದು, ಕಾರ್ಯಕರ್ತರು ಹಾಗೂ ಮುಖಂಡರು ಫಲಿತಾಂಶ ವೀಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.
Mumbai: Counting of votes for #MaharashtraAssemblyElections starts soon, ladoos ready at BJP state office pic.twitter.com/3GF6ss9SSU
— ANI (@ANI) October 24, 2019
ಮತ ಎಣಿಕೆ ಒಂದು ಹಂತ ತಲುಪುವ ಹೊತ್ತಿಗೆ ಅಂದರೆ ಬೆಳಗ್ಗೆ 10 ಗಂಟೆಯ ನಂತರ ದಕ್ಷಿಣ ಮುಂಬೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಮತ ಎಣಿಕೆಯ ಫಲಿತಾಂಶಕ್ಕನುಗುಣವಾಗಿ ಮಧ್ಯಾಹ್ನದ ಹೊತ್ತಿಗೆ ಸಂಭ್ರಮಾಚರಣೆ ಆಚರಿಸಲು ನಿರ್ಧರಿಸಲಾಗಿದೆ. ನಾವು ಅಧಿಕಾರಕ್ಕೇರುತ್ತೇವೆ ಎಂಬುದು ನಮಗೆ ತಿಳಿದಿದೆ. ಆದರೆ ಸಂಖ್ಯೆಗಳ ಬಗ್ಗೆ ಮಾತ್ರ ಕುತೂಹಲವಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಬುಧವಾರ ಪ್ರಕಟವಾದ ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುವುದನ್ನು ಸೂಚಿಸಿದ್ದವು. ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಅಧಿಕಾರ ಹಿಡಿಯಲಿದೆ. ಒಟ್ಟು 288 ಕ್ಷೇತ್ರಗಳಲ್ಲಿ ಬಿಜೆಪಿ 109-124, ಶಿವಸೇನೆ 57-40, ಕಾಂಗ್ರೆಸ್ 32-40, ಎನ್ಸಿಪಿ 40-50, ವಿಬಿಎ 0-2 ಮತ್ತು ಇತರರು 22-32 ಕ್ಷೇತ್ರಗಳಲ್ಲಿ ಗೆಲುವನ್ನು ದಾಖಲಿಸಬಹುದು ಇಂಡಿಯಾ ಟುಡೇ ಸಮೀಕ್ಷೆ ಹೇಳಿತ್ತು. ಇಂಡಿಯಾ ಟುಡೇ ಪ್ರಕಾರ ಹರ್ಯಾಣದಲ್ಲಿ ಬಿಜೆಪಿ 77, ಕಾಂಗ್ರೆಸ್ 11 ಮತ್ತು ಇತರರು 1 ಕ್ಷೇತ್ರದಲ್ಲಿ ಗೆಲುವು ದಾಖಲಿಸುವ ಸಾಧ್ಯತೆಗಳಿವೆ ಎಂದು ಹೇಳಾಗಿದೆ.
Mumbai: BJP state office decorated ahead of counting of votes for #MaharashtraAssemblyPolls pic.twitter.com/WbVuWwy92j
— ANI (@ANI) October 24, 2019
2014ರಲ್ಲಿ ನಡೆದ ಚುನಾವಣೆ ವೇಳೆ ಬಿಜೆಪಿ ಮತ್ತು ಶಿವಸೇನೆ 185 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿ ಸರ್ಕಾರ ರಚನೆ ಮಾಡಿದ್ದವು. ಕಾಂಗ್ರೆಸ್ 83 ಮತ್ತು ಪಕ್ಷೇತರ ಅಭ್ಯರ್ಥಿಗಳು 20 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರು. ಹರ್ಯಾಣದಲ್ಲಿ ನಡೆದ 2014ರ ಚುನಾವಣೆಯಲ್ಲಿ ಬಿಜೆಪಿ 47, ಕಾಂಗ್ರೆಸ್ 15 ಮತ್ತು ಇತರರು 28 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು.
ಮಹಾರಾಷ್ಟ್ರದಲ್ಲಿ ಅಕ್ಟೋಬರ್ 21ರಂದು ಮತದಾನ ನಡೆದಿದ್ದು, ಶೇ.61.13ರಷ್ಟು ಮತದಾನವಾಗಿದೆ. ಫಲಿತಾಂಶದ ಹಿನ್ನೆಲೆ ಬುಧವಾರವೇ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಉತ್ತರಾಖಂಡ್ನ ಕೇದಾರನಾಥಕ್ಕೆ ಭೇಟಿ ನೀಡಿ ಶಿವನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು.