ಬೆಳಗಾವಿ: ಮಹಾರಾಷ್ಟ್ರದ ಗಡಿ ವಿವಾದ (Maharashtra Border Controversy) ಕ್ಯಾತೆ, ಪುಂಡಾಟಿಕೆ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ (Assembly) ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.
ಮಹಾರಾಷ್ಟ್ರದ (Maharashtra) ಕ್ಯಾತೆ, ಸಚಿವ ಸಂಸದನ ಪುಂಡಾಟದ ಹೇಳಿಕೆಯ ವಿರುದ್ಧ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತವಾಯ್ತು. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು. ಕರ್ನಾಟಕ ಜನರ ಆಶಯದಂತೆ ಒಂದಿಂಚು ನೆಲ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಕ್ಯಾತೆ, ಸಚಿವರು, ಸಂಸದನ ಹೇಳಿಕೆ ಖಂಡನೀಯ ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯ್ತು. ಇದನ್ನೂ ಓದಿ: ಮಗಳ ಹುಟ್ಟುಹಬ್ಬಕ್ಕೆ ಸುವರ್ಣಸೌಧ ಬಾಡಿಗೆ ಕೊಡಿ – ಸಭಾಪತಿ, ಡಿಸಿಗೆ ಪತ್ರ ಬರೆದ ತಂದೆ
ಇದೇ ವೇಳೆ ನಮ್ಮ ರಾಜ್ಯದ ಸಿಎಂ ಬಗ್ಗೆ ಮಾತನಾಡಿದ್ದ ಮಹಾರಾಷ್ಟ್ರದ ಸಚಿವರು ಹಾಗೂ ಸಂಸದ ಸಂಜಯ್ ರಾವತ್ ವಿರುದ್ಧ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು. ಮಾನ ಮರ್ಯಾದೆ ಇಲ್ಲ, ನಾವು ನಾಗರಿಕ ಭಾಷೆಯಲ್ಲೇ ಉತ್ತರ ಕೊಡಬೇಕು ಅಂತಾ ಆಕ್ರೋಶ ಹೊರ ಹಾಕಿದ್ರು. ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಂಜಯ್ ರಾವತ್ (Sanjay Raut) ಒಬ್ಬ ದೇಶದ್ರೋಹಿ, ಚೀನಾದ (China) ಏಜೆಂಟ್. ಹೀಗೆ ಮಾತನಾಡಿದ್ರೆ ಕಾನೂನು ಕ್ರಮ ಜರುಗಿಸುತ್ತೇವೆ. ಒಂದಿಂಚು ನೆಲ ಬಿಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದ ಗಡಿ ಕ್ಯಾತೆ ಖಂಡನೀಯ ಅಂತಾ ಗುಡುಗಿದ್ರು. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್
ಮಹಾರಾಷ್ಟ್ರ ವಿರುದ್ಧ ಖಂಡನಾ ನಿರ್ಣಯದ ಸಾರಾಂಶ:
ಕರ್ನಾಟಕದ (Karnataka) ನೆಲ, ಜಲದ ಹಿತ ಕಾಪಾಡಲು ಮತ್ತು ಕಾನೂನಿನ ಹೋರಾಟದ ಸಮರ್ಥನೆ ಮಾಡಲು, ಈ ಮೂಲಕ ರಾಜ್ಯ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಇತ್ತೀಚಿಗೆ ಈ ವಿಷಯದ ಬಗ್ಗೆ ಮಹಾರಾಷ್ಟ್ರದ ನಾಯಕರು ಕೊಡುತ್ತಿರುವ ಎಲ್ಲ ಹೇಳಿಕೆಗಳು ಅತ್ಯಂತ ಖಂಡನೀಯ. ಮಹಾರಾಷ್ಟ್ರದ ಸಚಿವರು ಕಾನೂನು ಸುವ್ಯವಸ್ಥೆ ಸೂಕ್ಮವಿದ್ದಂತಹ ಸಂದರ್ಭದಲ್ಲಿ ಕರ್ನಾಟಕಕ್ಕೆ ಆಗಮಿಸಿ ಪ್ರಚೋದಿಸಲು ಯತ್ನಿಸುವ ಕಾರ್ಯವೂ ಖಂಡನೀಯ. ಕೇಂದ್ರ ಗೃಹ ಸಚಿವರು, ಎರಡು ರಾಜ್ಯಗಳ ಮಧ್ಯೆ, ಶಾಂತಿ ಸುವ್ಯವಸ್ಥೆ ಮತ್ತು ಸೌಹಾರ್ದತೆ ಕಾಪಾಡಲು ನೀಡಿರುವ ಸೂಚನೆಯನ್ನು ಸಹ ಮಹಾರಾಷ್ಟ್ರ ಉಲ್ಲಂಘಿಸುತ್ತಿದೆ.
ಎರಡು ರಾಜ್ಯಗಳ ಸಂಬಂಧಕ್ಕೆ ಧಕ್ಕೆ ತರುವಂತಾಗಿದೆ. ಇದನ್ನು ನಿಯಂತ್ರಿಸಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸುತ್ತಾ, ಈ ವಿಷಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ರಾಜ್ಯ ಸರ್ಕಾರ ತರುತ್ತದೆ. ಕರ್ನಾಟಕ ನೆಲ, ಜಲ, ಭಾಷೆ ಹಾಗೂ ಕನ್ನಡಿಹರ ಹಿತಾಸಕ್ತಿಯ ವಿಷಯದಲ್ಲಿ, ಯಾವುದೇ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ವಿಷಯದಲ್ಲಿ ಕರ್ನಾಟಕದ ಜನರ ಮತ್ತು ಸದಸ್ಯರೆಲ್ಲರ ಭಾವನೆಯೂ ಒಂದೇ ಆಗಿದ್ದು, ಇದಕ್ಕೆ ಧಕ್ಕೆ ಆದಾಗ ಎಲ್ಲರೂ ಒಗ್ಗಟಿನಿಂದ ರಾಜ್ಯದ ಹಿತಾಸಕ್ತಿ ಹಾಗೂ ರಕ್ಷಣೆಗೆ ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಬದ್ಧರಿದ್ದೇವೆ.
ಮಹಾರಾಷ್ಟ್ರದ ಜನತೆಯೂ, ಅನಾವಶ್ಯಕವಾಗಿ ಸೃಷ್ಟಿಸಿರುವ ಗಡಿ ವಿವಾವದ ಖಂಡಿಸಿ ರಾಜ್ಯದ ಹಿತರಕ್ಷಣೆಗೆ ಕಟಿಬದ್ಧರಾಗಿರುವುದಾಗಿ ಈ ಸದನವೂ ಸರ್ವಾನುಮತದಿಂದ ನಿರ್ಣಯಿಸುತ್ತದೆ.