ರೈತರಿಗೆ ಗುಡ್ ನ್ಯೂಸ್ ಕೊಟ್ಟ ಉದ್ಧವ್ ಠಾಕ್ರೆ- 2 ಲಕ್ಷ ರೂ.ವರೆಗಿನ ಕೃಷಿ ಸಾಲಮನ್ನಾ

Public TV
1 Min Read
farmer vb 24

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ಮೈತ್ರಿ ಸರ್ಕಾರವು ಆರಂಭದಲ್ಲೇ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಮಹಾರಾಷ್ಟ್ರದ ರೈತರು ಈ ವರ್ಷ ಸೆಪ್ಟೆಂಬರ್ 30ರೊಳಗೆ ತೆಗೆದುಕೊಂಡ 2 ಲಕ್ಷ ರೂಪಾಯಿವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಲಾಗುವುದು. ಸಾಲದ ಮೊತ್ತವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಉದ್ಧವ್ ಠಾಕ್ರೆ ಇಂದು ಘೋಷಣೆ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ನಡೆದ ಮೊದಲ ಅಧಿವೇಶದಲ್ಲಿ ಸಾಲಮನ್ನಾ ವಿಚಾರವಾಗಿ ವಿರೋಧ ಪಕ್ಷ ಬಿಜೆಪಿಯೊಂದಿಗಿನ ಸುದೀರ್ಘ ಚರ್ಚೆ ನಡೆಯಿತು. ಈ ಚರ್ಚೆಯ ಉದ್ಧವ್ ಠಾಕ್ರೆ ಅವರು, ‘ಮಹಾತ್ಮ ಜ್ಯೋತಿರಾವ್ ಫುಲೆ ಸಾಲಮನ್ನಾ ಯೋಜನೆ’ಯನ್ನು ಘೋಷಿಸಿದರು. ಈ ಮೂಲಕ ಮೊದಲ ಅಧಿವೇಶನದ ಕೊನೆಯ ದಿನದಂದು ಸಾಲಮನ್ನಾ ಯೋಜೆನೆ ಘೋಷಣೆಯಾಗಿದೆ.

ಸೆಪ್ಟೆಂಬರ್ 30, 2019 ರವರೆಗೆ ಬಾಕಿ ಇರುವ ಬೆಳೆ ಸಾಲವನ್ನು ತಮ್ಮ ಸರ್ಕಾರವು ಮನ್ನಾ ಮಾಡಲಿದೆ. ಸಾಲ ಮನ್ನಾ ಮೊತ್ತದ ಮಿತಿ ಗರಿಷ್ಠ 2 ಲಕ್ಷ ರೂ. ಆಗಿದೆ ಎಂದು ಠಾಕ್ರೆ ಹೇಳಿದ್ದಾರೆ. ಜನರಿಂದ ದೂರುಗಳನ್ನು ಪಡೆಯಲು ಮತ್ತು ಪ್ರತಿ ಸಣ್ಣ ಕೆಲಸಗಳಿಗಾಗಿ ಮುಂಬೈಗೆ ಜನರು ಬರುವುದನ್ನು ತಪ್ಪಿಸಲು ಪ್ರತಿ ಜಿಲ್ಲೆಯಲ್ಲೂ ಮುಖ್ಯಮಂತ್ರಿ ಕಚೇರಿಯ ಸಣ್ಣ ಘಟಕವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

ರೈತರು ಎಲ್ಲಿಯೂ ಹೋಗಬೇಕಾಗಿಲ್ಲ. ಅವರು ಸಾಲಿನಲ್ಲಿ ನಿಲ್ಲಬೇಕಾಗಿಲ್ಲ, ಅರ್ಜಿ ಸಲ್ಲಿಸಬೇಕಾಗಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಮಾಡಲಿದೆ ಎಂದು ಶಿವಸೇನೆ ಮುಖಂಡ ಸುನಿಲ್ ಪ್ರಭು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರ ಸರ್ಕಾರವು ರೈತರ ಎಲ್ಲಾ ಕೃಷಿ ಸಾಲವನ್ನು ಮನ್ನಾ ಮಾಡಿಲ್ಲ ಎಂದು ಟೀಕಿಸಿದ ಬಿಜೆಪಿ ನಾಯಕರು ಇಂದು ವಿಧಾನಸಭೆ ಕಲಾಪರಿಂದ ಹೊರನಡೆದರು. ಈ ಸರ್ಕಾರವು ಜನರ ಆದೇಶಕ್ಕೆ ದ್ರೋಹ ಬಗೆದಿದೆ. ಈಗ ಅವರು ರೈತರಿಗೆ ದ್ರೋಹ ಮಾಡಿದ್ದಾರೆ. ಇದು ಸಂಪೂರ್ಣ ಸಾಲ ಮನ್ನಾ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *