Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

Latest

ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

Public TV
Last updated: June 27, 2022 5:04 pm
Public TV
Share
2 Min Read
eknath shinde rebel mlas
SHARE

ನವದೆಹಲಿ: ಬಂಡಾಯದ ಬಾವುಟ ಹಾರಿಸಿ ಮಹಾಮೈತ್ರಿ ಸರ್ಕಾರದ ನಿದ್ದೆ ಕೆಡಿಸಿರುವ ಅತೃಪ್ತ ಶಾಸಕರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಶಿವಸೇನೆ ಅನರ್ಹತೆ ಅಸ್ತ್ರ ಪ್ರಶ್ನಿಸಿ ಏಕನಾಥ ಶಿಂಧೆ ಬಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜುಲೈ 12 ಸಂಜೆ ಸಂಜೆ 5:30 ವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಡೆಪ್ಯುಟಿ ಸ್ಪೀಕರ್ ಗೆ ಸೂಚನೆ ನೀಡಿದೆ.

ಏಕನಾಥ ಶಿಂಧೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ದ್ವಿಸದಸ್ಯ ಪೀಠದಲ್ಲಿ ನಡೆಯಿತು. ಏಕನಾಥ್ ಶಿಂಧೆ ಪರ ವಾದ ಮಂಡಿಸಿದ ವಕೀಲ ಎನ್.ಕೆ ಕೌಲ್, ಸ್ಪೀಕರ್ ಮೇಲೆ ಅನುಮಾನವಿದ್ದಲ್ಲಿ ಸಂವಿಧಾನದ ಆರ್ಟಿಕಲ್ 179 ಅಡಿಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಬಹುದು. ಅವರನ್ನು ವಜಾಗೊಳಿಸಬಹುದು. ಅದರಂತೆ ಈಗಾಗಲೇ ಅವಿಶ್ವಾಸ ನಿರ್ಣಯ ಮಂಡಿಸಿದೆ. ಈ ನಿರ್ಣಯದ ನಡುವೆ ಡೆಪ್ಯುಟಿ ಸ್ಪೀಕರ್ ಅನರ್ಹತೆ ಅರ್ಜಿ ವಿಚಾರಣೆ ನಡೆಸಲು ಹೊರಟಿಸಿದ್ದಾರೆ‌. ಇದು ಕಾನೂನು ಬಾಹಿರ ಅಲ್ಲದೇ ಶಾಸಕರ ಒಪ್ಪಿಗೆ ಇಲ್ಲದೇ ಶಾಸಕಾಂಗ ಪಕ್ಷದ ನಾಯಕನ‌ ಅನುಮೋದನೆಯಾಗಿದೆ‌ ಇದು ಸರಿಯಲ್ಲ ಎಂದು ವಾದಿಸಿದ್ದರು. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಜೊತೆ ಮಹಾರಾಷ್ಟ್ರ ಸರ್ಕಾರಕ್ಕೆ ನಂಟು? – ಬಂಡಾಯಕ್ಕೆ ಇದೇ ಕಾರಣ

supreme court 12

ಇದಕ್ಕೆ ಪ್ರತಿವಾದ ಮಂಡಿಸಿ ಶಿವಸೇನೆ ಪಕ್ಷದ ವಕೀಲ ಅಭಿಷೇಕ್ ಮನುಸಿಂಘ್ವಿ, ಬಂಡಾಯ ಶಾಸಕರು ಅಧಿಕೃತವಲ್ಲದ ಇಮೇಲ್ ಮೂಲಕ ಡೆಪ್ಯುಟಿ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯದ ಪತ್ರವನ್ನು ಕಳುಹಿಸಿದ್ದಾರೆ. ಇದನ್ನು ಪರಿಗಣಿಸಲು ಸಾಧ್ಯವಿಲ್ಲ. ಈ ಪತ್ರಕ್ಕೂ ಮುನ್ನ ಡೆಪ್ಯುಟಿ ಸ್ಪೀಕರ್ ನೋಟಿಸ್ ಜಾರಿ ಮಾಡಿದ್ದಾರೆ. ಸ್ಪೀಕರ್ ಅನುಪಸ್ಥಿತಿಯಲ್ಲಿ ಡೆಪ್ಯುಟಿ ಸ್ಪೀಕರ್ ಅನರ್ಹತೆ ಅರ್ಜಿ ವಿಚಾರಣೆ ನಡೆಸಬಹುದು, ಇದಕ್ಕೆ ಪೂರಕವಾಗಿ ಹಲವು ಸುಪ್ರೀಂಕೋರ್ಟ್ ಆದೇಶಗಳಿವೆ ಎಂದು ಹೇಳಿದರು.

ಇನ್ನು ಈ ನಡುವೆ ವಾದ ಮಂಡಿಸಿದ ಡೆಪ್ಯುಟಿ ಸ್ಪೀಕರ್ ಪರ ವಕೀಲ ರಾಜೀವ್ ದವನ್, ವಿಶಾಲ್ ಆಚಾರ್ಯ ಹೆಸರಿನ ವಕೀಲರ ಮೂಲಕ ಅವಿಶ್ವಾಸ ನಿರ್ಣಯದ ಪತ್ರ ಇಮೇಲ್ ಮಾಡಲಾಗಿದೆ. ಇದು ಸರಿಯಾದ ಕ್ರಮವಲ್ಲ. ಶಾಸಕರು ಸೂಕ್ತ ಹಾಗೂ ಕಾನೂನು ಮಾರ್ಗದಲ್ಲಿ ಪತ್ರ ಕಳುಹಿಸದರೇ ಪರಿಗಣಿಸಬಹುದಿತ್ತು. ಶಾಸಕರ ಸಹಿಯೊಂದಿಗೆ ಅನಧಿಕೃತ ಮೂಲದಿಂದ ಪತ್ರ ಬಂದಿರುವ ಹಿನ್ನಲೆ ಅದನ್ನು ತಿರಸ್ಕರಿಸಲಾಗಿದೆ. ಇಂತಹ ಪತ್ರಗಳನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

maharashtra REBEL MLA Eknath Shinde 1

ವಾದ ಪ್ರತಿವಾದ ಆಲಿಸಿದ ಪೀಠ ಅವಿಶ್ವಾಸ ನಿರ್ಣಯ ಮಂಡಿಸಿರುವ ಹೊತ್ತಲ್ಲಿ ಅನರ್ಹತೆ ವಿಚಾರಣೆ ನಡೆಸಲು ಸಾಧ್ಯವಿದೆಯೇ ಎಂದು ಕೋರ್ಟ್ ಟೀಕಿಸಿತು‌. ಅಲ್ಲದೇ ಐದು ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡೆವಿಟ್ ಸಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರ ಮತ್ತು ಡೆಪ್ಯುಟಿ ಸ್ಪೀಕರ್ ಕಚೇರಿಗೆ ನೋಟಿಸ್ ಜಾರಿ ಮಾಡಿತು.

ಇದೇ ವೇಳೆ ಕೋರ್ಟ್ ಜುಲೈ 12 ವರೆಗೂ ಬಂಡಾಯ ಶಾಸಕರಿಗೆ ಉತ್ತರಿಸಲು ಅವಕಾಶ ನೀಡಬೇಕು. ಅಲ್ಲಿಯವರೆಗೂ ಅನರ್ಹತೆಗೆ ಸಂಬಂಧಿಸಿದ ಯಾವುದೇ ವಿಚಾರಣೆ ನಡೆಸಬಾರದು ಎಂದು ಮಧ್ಯಂತರ ಆದೇಶ ನೀಡಿತು. ಇದೇ ವೇಳೆ ಶಾಸಕರು ಮತ್ತು ಅವರ ಕುಟುಂಬಕ್ಕೆ ಭದ್ರತೆ ನೀಡುವುದು ರಾಜ್ಯ ಸರ್ಕಾರದ ಜವಬ್ದಾರಿ. ಈ ಹಿನ್ನಲೆ ಭದ್ರತೆ ನೀಡಬೇಕು ಎಂದು ಕೋರ್ಟ್ ಆದೇಶಿಸಿತು.

ಈ ನಡುವೆ ಜುಲೈ 11ಕ್ಕೆ ಮುಂದಿನ ವಿಚಾರಣೆ ನಡೆಯಲಿದ್ದೇವೆ ಎಂದು ಕೋರ್ಟ್ ಹೇಳಿದೆ. ಕೋರ್ಟ್ ಮಧ್ಯಂತರ ಆದೇಶದಿಂದ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು ತಾತ್ಕಾಲಿಕವಾಗಿ ಅನರ್ಹತೆ ಅಸ್ತ್ರದಿಂದ ಪಾರಾಗಿದ್ದಾರೆ. ಈ ಅವಧಿಯಲ್ಲಿ ಬಂಡಾಯ ಶಾಸಕರು ಹೊಸ ರಾಜಕೀಯ ಚದುರಂಗದಾಟ ಆಡುವ ಸಾಧ್ಯತೆಗಳಿದೆ.

Live Tv

TAGGED:Eknath Shindemaharashtrashiv senaSupreme Courtಏಕನಾಥ್ ಶಿಂಧೆಬಿಜೆಪಿಮಹಾರಾಷ್ಟ್ರಶಿವಸೇನೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

sister and brother
Bengaluru City

ಪೋಷಕರು ಜೋರು ಮಾಡಿದ್ದಕ್ಕೆ ಸಿಟ್ಟಾಗಿ ಮನೆ ತೊರೆದ ಅಕ್ಕ-ತಮ್ಮ!

Public TV
By Public TV
11 minutes ago
Mother son attacked for uploading photo of saffron flag Gurmatkal Yadagiri
Latest

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ತಾಯಿ, ಮಗನ ಮೇಲೆ ಹಲ್ಲೆ

Public TV
By Public TV
50 minutes ago
R Ashoka 2
Bengaluru City

ಸಿಎಂ ಕುರ್ಚಿ ಉಳಿಯಬೇಕಿದೆ, ಅದಕ್ಕೆ AICC ಗೆ ಸಾವಿರ ಸಾವಿರ ಕೋಟಿ ಹೋಗ್ತಿದೆ; ಆರ್‌. ಅಶೋಕ್‌

Public TV
By Public TV
1 hour ago
Government Hospital 3
Bagalkot

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ – ರಾಜ್ಯದಲ್ಲಿ ಶುರುವಾಗುತ್ತಾ ಹೆಲ್ತ್ ಎಮೆರ್ಜೆನ್ಸಿ?

Public TV
By Public TV
1 hour ago
BJP JDS Protest
Bengaluru City

ಗೋವಿಂದ ಗೋವಿಂದ ಕೋಟಿ ಕೋಟಿ ಗೋವಿಂದ – ಸದನದಲ್ಲಿ ದೋಸ್ತಿ ನಾಯಕರಿಂದ ಅಹೋರಾತ್ರಿ ಪ್ರತಿಭಟನೆ

Public TV
By Public TV
2 hours ago
Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಸತತ 4ನೇ ಬಾರಿ ಡೆಲ್ಲಿ ಫೈನಲ್‌ಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?