Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

Latest

ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

Public TV
Last updated: June 27, 2022 5:04 pm
Public TV
Share
2 Min Read
eknath shinde rebel mlas
SHARE

ನವದೆಹಲಿ: ಬಂಡಾಯದ ಬಾವುಟ ಹಾರಿಸಿ ಮಹಾಮೈತ್ರಿ ಸರ್ಕಾರದ ನಿದ್ದೆ ಕೆಡಿಸಿರುವ ಅತೃಪ್ತ ಶಾಸಕರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಶಿವಸೇನೆ ಅನರ್ಹತೆ ಅಸ್ತ್ರ ಪ್ರಶ್ನಿಸಿ ಏಕನಾಥ ಶಿಂಧೆ ಬಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜುಲೈ 12 ಸಂಜೆ ಸಂಜೆ 5:30 ವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಡೆಪ್ಯುಟಿ ಸ್ಪೀಕರ್ ಗೆ ಸೂಚನೆ ನೀಡಿದೆ.

ಏಕನಾಥ ಶಿಂಧೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ದ್ವಿಸದಸ್ಯ ಪೀಠದಲ್ಲಿ ನಡೆಯಿತು. ಏಕನಾಥ್ ಶಿಂಧೆ ಪರ ವಾದ ಮಂಡಿಸಿದ ವಕೀಲ ಎನ್.ಕೆ ಕೌಲ್, ಸ್ಪೀಕರ್ ಮೇಲೆ ಅನುಮಾನವಿದ್ದಲ್ಲಿ ಸಂವಿಧಾನದ ಆರ್ಟಿಕಲ್ 179 ಅಡಿಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಬಹುದು. ಅವರನ್ನು ವಜಾಗೊಳಿಸಬಹುದು. ಅದರಂತೆ ಈಗಾಗಲೇ ಅವಿಶ್ವಾಸ ನಿರ್ಣಯ ಮಂಡಿಸಿದೆ. ಈ ನಿರ್ಣಯದ ನಡುವೆ ಡೆಪ್ಯುಟಿ ಸ್ಪೀಕರ್ ಅನರ್ಹತೆ ಅರ್ಜಿ ವಿಚಾರಣೆ ನಡೆಸಲು ಹೊರಟಿಸಿದ್ದಾರೆ‌. ಇದು ಕಾನೂನು ಬಾಹಿರ ಅಲ್ಲದೇ ಶಾಸಕರ ಒಪ್ಪಿಗೆ ಇಲ್ಲದೇ ಶಾಸಕಾಂಗ ಪಕ್ಷದ ನಾಯಕನ‌ ಅನುಮೋದನೆಯಾಗಿದೆ‌ ಇದು ಸರಿಯಲ್ಲ ಎಂದು ವಾದಿಸಿದ್ದರು. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಜೊತೆ ಮಹಾರಾಷ್ಟ್ರ ಸರ್ಕಾರಕ್ಕೆ ನಂಟು? – ಬಂಡಾಯಕ್ಕೆ ಇದೇ ಕಾರಣ

supreme court 12

ಇದಕ್ಕೆ ಪ್ರತಿವಾದ ಮಂಡಿಸಿ ಶಿವಸೇನೆ ಪಕ್ಷದ ವಕೀಲ ಅಭಿಷೇಕ್ ಮನುಸಿಂಘ್ವಿ, ಬಂಡಾಯ ಶಾಸಕರು ಅಧಿಕೃತವಲ್ಲದ ಇಮೇಲ್ ಮೂಲಕ ಡೆಪ್ಯುಟಿ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯದ ಪತ್ರವನ್ನು ಕಳುಹಿಸಿದ್ದಾರೆ. ಇದನ್ನು ಪರಿಗಣಿಸಲು ಸಾಧ್ಯವಿಲ್ಲ. ಈ ಪತ್ರಕ್ಕೂ ಮುನ್ನ ಡೆಪ್ಯುಟಿ ಸ್ಪೀಕರ್ ನೋಟಿಸ್ ಜಾರಿ ಮಾಡಿದ್ದಾರೆ. ಸ್ಪೀಕರ್ ಅನುಪಸ್ಥಿತಿಯಲ್ಲಿ ಡೆಪ್ಯುಟಿ ಸ್ಪೀಕರ್ ಅನರ್ಹತೆ ಅರ್ಜಿ ವಿಚಾರಣೆ ನಡೆಸಬಹುದು, ಇದಕ್ಕೆ ಪೂರಕವಾಗಿ ಹಲವು ಸುಪ್ರೀಂಕೋರ್ಟ್ ಆದೇಶಗಳಿವೆ ಎಂದು ಹೇಳಿದರು.

ಇನ್ನು ಈ ನಡುವೆ ವಾದ ಮಂಡಿಸಿದ ಡೆಪ್ಯುಟಿ ಸ್ಪೀಕರ್ ಪರ ವಕೀಲ ರಾಜೀವ್ ದವನ್, ವಿಶಾಲ್ ಆಚಾರ್ಯ ಹೆಸರಿನ ವಕೀಲರ ಮೂಲಕ ಅವಿಶ್ವಾಸ ನಿರ್ಣಯದ ಪತ್ರ ಇಮೇಲ್ ಮಾಡಲಾಗಿದೆ. ಇದು ಸರಿಯಾದ ಕ್ರಮವಲ್ಲ. ಶಾಸಕರು ಸೂಕ್ತ ಹಾಗೂ ಕಾನೂನು ಮಾರ್ಗದಲ್ಲಿ ಪತ್ರ ಕಳುಹಿಸದರೇ ಪರಿಗಣಿಸಬಹುದಿತ್ತು. ಶಾಸಕರ ಸಹಿಯೊಂದಿಗೆ ಅನಧಿಕೃತ ಮೂಲದಿಂದ ಪತ್ರ ಬಂದಿರುವ ಹಿನ್ನಲೆ ಅದನ್ನು ತಿರಸ್ಕರಿಸಲಾಗಿದೆ. ಇಂತಹ ಪತ್ರಗಳನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

maharashtra REBEL MLA Eknath Shinde 1

ವಾದ ಪ್ರತಿವಾದ ಆಲಿಸಿದ ಪೀಠ ಅವಿಶ್ವಾಸ ನಿರ್ಣಯ ಮಂಡಿಸಿರುವ ಹೊತ್ತಲ್ಲಿ ಅನರ್ಹತೆ ವಿಚಾರಣೆ ನಡೆಸಲು ಸಾಧ್ಯವಿದೆಯೇ ಎಂದು ಕೋರ್ಟ್ ಟೀಕಿಸಿತು‌. ಅಲ್ಲದೇ ಐದು ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡೆವಿಟ್ ಸಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರ ಮತ್ತು ಡೆಪ್ಯುಟಿ ಸ್ಪೀಕರ್ ಕಚೇರಿಗೆ ನೋಟಿಸ್ ಜಾರಿ ಮಾಡಿತು.

ಇದೇ ವೇಳೆ ಕೋರ್ಟ್ ಜುಲೈ 12 ವರೆಗೂ ಬಂಡಾಯ ಶಾಸಕರಿಗೆ ಉತ್ತರಿಸಲು ಅವಕಾಶ ನೀಡಬೇಕು. ಅಲ್ಲಿಯವರೆಗೂ ಅನರ್ಹತೆಗೆ ಸಂಬಂಧಿಸಿದ ಯಾವುದೇ ವಿಚಾರಣೆ ನಡೆಸಬಾರದು ಎಂದು ಮಧ್ಯಂತರ ಆದೇಶ ನೀಡಿತು. ಇದೇ ವೇಳೆ ಶಾಸಕರು ಮತ್ತು ಅವರ ಕುಟುಂಬಕ್ಕೆ ಭದ್ರತೆ ನೀಡುವುದು ರಾಜ್ಯ ಸರ್ಕಾರದ ಜವಬ್ದಾರಿ. ಈ ಹಿನ್ನಲೆ ಭದ್ರತೆ ನೀಡಬೇಕು ಎಂದು ಕೋರ್ಟ್ ಆದೇಶಿಸಿತು.

ಈ ನಡುವೆ ಜುಲೈ 11ಕ್ಕೆ ಮುಂದಿನ ವಿಚಾರಣೆ ನಡೆಯಲಿದ್ದೇವೆ ಎಂದು ಕೋರ್ಟ್ ಹೇಳಿದೆ. ಕೋರ್ಟ್ ಮಧ್ಯಂತರ ಆದೇಶದಿಂದ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು ತಾತ್ಕಾಲಿಕವಾಗಿ ಅನರ್ಹತೆ ಅಸ್ತ್ರದಿಂದ ಪಾರಾಗಿದ್ದಾರೆ. ಈ ಅವಧಿಯಲ್ಲಿ ಬಂಡಾಯ ಶಾಸಕರು ಹೊಸ ರಾಜಕೀಯ ಚದುರಂಗದಾಟ ಆಡುವ ಸಾಧ್ಯತೆಗಳಿದೆ.

Live Tv

TAGGED:Eknath Shindemaharashtrashiv senaSupreme Courtಏಕನಾಥ್ ಶಿಂಧೆಬಿಜೆಪಿಮಹಾರಾಷ್ಟ್ರಶಿವಸೇನೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

Iris Dena
Latest

ಶ್ರೀಲಂಕಾ ಬಳಿ ಮುಳುಗಿ ಸಂಕಷ್ಟದಲ್ಲಿದ್ದ ಇರಾನ್‌ ನೌಕೆಗೆ ಭಾರತದ ನೌಕಾಪಡೆ ಸಹಾಯ

Public TV
By Public TV
12 minutes ago
Siddaramaiah 5
Bengaluru City

ಇಂದು ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ – ನಿರೀಕ್ಷೆಗೆ ತಕ್ಕಂತೆ ಗುಡ್‌ನ್ಯೂಸ್ ಕೊಡ್ತಾರಾ ಸಿಎಂ?

Public TV
By Public TV
17 minutes ago
daily horoscope dina bhavishya
Astrology

ದಿನ ಭವಿಷ್ಯ 06-03-2026

Public TV
By Public TV
59 minutes ago
Axar Patel
Cricket

ಸಂಜು ಬ್ಯಾಟಿಂಗ್‌, ಬುಮ್ರಾ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ

Public TV
By Public TV
9 hours ago
West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
10 hours ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?