Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮಿತ್ ಶಾ Vs ಶರದ್ ಪವಾರ್ – ‘ಮಹಾ’ ಚಾಣಕ್ಯ ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮಿತ್ ಶಾ Vs ಶರದ್ ಪವಾರ್ – ‘ಮಹಾ’ ಚಾಣಕ್ಯ ಯಾರು?

Latest

ಅಮಿತ್ ಶಾ Vs ಶರದ್ ಪವಾರ್ – ‘ಮಹಾ’ ಚಾಣಕ್ಯ ಯಾರು?

Public TV
Last updated: November 27, 2019 3:35 pm
Public TV
Share
6 Min Read
amit shah sharad pawar chanakya
SHARE

– ಮೈತ್ರಿಯನ್ನು ಆರಂಭದಲ್ಲೇ ಒಡೆದಿದ್ದು ಅಮಿತ್ ಶಾ
– ಸಿದ್ಧಾಂತ ಬದಿಗೊತ್ತಿ ಮೈತ್ರಿಯಾಗಿದ್ದು ಚಾಣಕ್ಯ ನಡೆ

ಮುಂಬೈ: ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ಮಹಾ ಹೈಡ್ರಾಮಾ ಕೊನೆಗೂ ಮುಕ್ತಾಯಗೊಂಡಿದೆ. ಹೈಡ್ರಾಮಾ ಮುಕ್ತಾಯಗೊಂಡರೂ ಈಗ ಚಾಣಕ್ಯ ಯಾರು ಎನ್ನುವ ಪ್ರಶ್ನೆಯನ್ನು ಮುಂದಿಟ್ಟು ಜನ ಸಾಮಾಜಿಕ ಜಾಲತಾಣದಲ್ಲಿ ಅವರದ್ದೇ ಆದ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.

ಬಿಜೆಪಿ ಅಭಿಮಾನಿಗಳು ಅಮಿತ್ ಶಾ ಅವರೇ ಚಾಣಕ್ಯ. ಈಗ ಬಿಜೆಪಿ ಸರ್ಕಾರ ರಚಿಸುವಲ್ಲಿ ವಿಫಲರಾದರೂ ಮುಂದೆ ಸರ್ಕಾರ ಖಂಡಿತವಾಗಿಯೂ ರಚನೆ ಮಾಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರೆ ಈ ಬಾರಿ ಚಾಣಕ್ಯ ಪಟ್ಟ ಶರದ್ ಪವಾರ್ ಅವರಿಗೆ ಸಿಗಬೇಕು. ಬಹುಮತ ಇಲ್ಲದೇ ಇದ್ದರೂ ಶಿವಸೇನೆ ಜೊತೆ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರನ್ನು ಮನವೊಲಿಸಿ ಅಧಿಕಾರಕ್ಕೆ ಏರುತ್ತಿರುವುದೇ ದೊಡ್ಡ ಸಾಧನೆ ಎಂದು ಬಿಜೆಪಿ ವಿರೋಧಿಗಳು ತಿರುಗೇಟು ನೀಡುತ್ತಿದ್ದಾರೆ.

In Arthasastra, there are 4 Yukthis, Sam , Dhhan, bedh, Dhand. All politicians have to necessarily use. In first move, Amit Shah won. Second move @PawarSpeaks won. In third and final move @AmitShah will win👏

— S.Sundararajan (@s_sundararajan) November 26, 2019

ಅಮಿತ್ ಶಾ ಚಾಣಕ್ಯ ಯಾಕೆ?
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚುನಾವಣಾ ಚತುರ ಎಂದೇ ಹೆಸರು ಪಡೆದವರು. ಪಕ್ಷ ಸಂಘಟನೆ ವಿಚಾರದಲ್ಲಿ ಯಶಸ್ವಿಯಾಗಿ ಪಳಗಿರುವ ಅಮಿತ್ ಶಾ 2014ರ ಲೋಕಸಭಾ ಚುನಾವಣೆಗೂ ಮುನ್ನವೇ ಹೆಸರು ಪಡೆದಿದ್ದಾರೆ. 2014ರಲ್ಲಿ ಉತ್ತರ ಪ್ರದೇಶದಲ್ಲಿ ಒಟ್ಟು 80 ಕ್ಷೇತ್ರಗಳ ಪೈಕಿ ಸ್ಪರ್ಧೆ ಮಾಡಿದ್ದ 78 ರಲ್ಲಿ ಬಿಜೆಪಿ 71 ಸ್ಥಾನವನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟದಲ್ಲಿ ಮುನ್ನೆಲೆಗೆ ಬಂದ ಬಳಿಕ ಚುನಾವಣಾ ‘ಶಾ’ಣಕ್ಯ ಎಂದೇ ಹೆಸರುವಾಸಿಯಾಗಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಬಹುಮತ ಇಲ್ಲದೇ ಇದ್ದರೂ ಮಿತ್ರ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿ ಸರ್ಕಾರ ರಚಿಸಿದ ಖ್ಯಾತಿ ಇದ್ದ ಕಾರಣ ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ಲೇಷಣೆ ಚುನಾವಣಾ ಫಲಿತಾಂಶ ಬಂದ ಬಳಿಕ ಕೇಳಿ ಬಂದಿತ್ತು.

ಶಿವಸೇನೆಯ ಸಿಎಂ ಪಟ್ಟದ ಬೇಡಿಕೆಗೆ ಜಗ್ಗದ ಪರಿಣಾಮ ಬಿಜೆಪಿ ಹೇಗೆ ಅಧಿಕಾರಕ್ಕೆ ಏರುತ್ತದೆ ಎನ್ನುವ ಪ್ರಶ್ನೆ ಎದ್ದಿತ್ತು. ಈ ಮಧ್ಯೆ ರಾಷ್ಟ್ರಪತಿ ಆಡಳಿತವೂ ಜಾರಿ ಆಯ್ತು. ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ಮಾತುಕತೆ ಅಂತಿಮಗೊಂಡು ಶುಕ್ರವಾರ ಸಂಜೆ ಉದ್ಧವ್ ಠಾಕ್ರೆ ಸಿಎಂ ಎಂಬ ನಿರ್ಧಾರ ಪ್ರಕಟಗೊಂಡ ಬಳಿಕ ಎಲ್ಲವೂ ಮುಗಿಯಿತು ಎನ್ನುವಷ್ಟರಲ್ಲಿ ರಾತ್ರೋರಾತ್ರಿ ದಿಢೀರ್ ಬೆಳವಣಿಗೆ ನಡೆದು ರಾಷ್ಟ್ರಪತಿ ಆಡಳಿತ ರದ್ದಾಗಿ ದೇವೇಂದ್ರ ಫಡ್ನವೀಸ್ ಮುಖ್ಯಮತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರೆ ಎನ್‍ಸಿಪಿ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಗೃಹ ಮಂತ್ರಿ ಅಮಿತ್ ಷಾ ಅವರು ಅತ್ಯಂತ ಸೂಕ್ಷ್ಮ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಮಾಡುತ್ತಾರೆ.

ಈ ಕೆಳಗಿನ ಚಿತ್ರವನ್ನು ಗಮನಿಸಿದಾಗ ಅವರ ಚಾಣಾಕ್ಷತನ ಹಾಗೂ ಚತುರ ರಾಜನೀತಿಯ ನೈಜ ಚಿತ್ರಣ ಸ್ಪಷ್ಟವಾಗುತ್ತದೆ.

ಅವರ ಬೆನ್ನಿಗಿರುವ ರಾಜನೀತಿಯ ದೃಷ್ಟಾರರು
Pic 1: ಪೂಜ್ಯ ಚಾಣಕ್ಯ
Pic 2: ಸ್ವಾತಂತ್ರ್ಯವೀರ ವಿನಾಯಕ್ ದಾಮೋದರ ಸಾವರ್ಕರ್ pic.twitter.com/GLy5B9KC99

— Rahul Bekanalakar (@RahulMurgod) November 25, 2019

ಈ ಬೆಳವಣಿಗೆಯನ್ನು ನೋಡಿ ಬಿಜೆಪಿ ಅಭಿಮಾನಿಗಳು, ಮಹಾರಾಷ್ಟ್ರದಲ್ಲಿ ಅಮಿತ್ ಶಾರಿಂದ ರಾಜಕೀಯ ಸರ್ಜಿಕಲ್ ಸ್ಟ್ರೈಕ್ ನಡೆದಿದೆ. ಬಿಜೆಪಿ ಈಗ ಕಮಲ ಮಾತ್ರ ಅಲ್ಲ, ರಾತ್ರಿ ಅರಳುವ ಬ್ರಹ್ಮಕಮಲ. ಎಲ್ಲ ಘಟನೆಗಳನ್ನು ನೋಡಿಕೊಂಡು ಯಾರಿಗೂ ಯಾವುದೇ ಮಾಧ್ಯಮಕ್ಕೆ ಸುಳಿವು ನೀಡದೇ ಸರ್ಕಾರ ರಚಿಸುವುದು ಅಂದರೆ ಇದು ಎಂದು ಅಭಿಪ್ರಾಯ ವ್ಯಕ್ತಪಡಿಸಲು ಆರಂಭಿಸಿದರು. ಶೀವಸೇನೆ ಹೋದರೆ ಏನಂತೆ ಎನ್‍ಸಿಪಿ ನಾಯಕನನ್ನೇ ಡಿಸಿಎಂ ಮಾಡಿ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರಿಗೆ ಶಾಕ್ ನೀಡಿದ್ದು ಗ್ರೇಟ್ ಎಂದು ಬಣ್ಣಿಸಲು ಆರಂಭಿಸಿದರು.

Politics is the art of many Possibilities and this #chanakya@AmitShah knows how to play it well.

Time will tell you who lost this #MahaThriller game. #MahaTwist #BalaSahebThackeray #MaharashtraKaMahaDrama pic.twitter.com/nqZIVxD7rH

— Suraj Mishra (@SurajMishraWB) November 27, 2019

ಮಂಗಳವಾರದವರೆಗೆ ಬಹುಮತ ಇಲ್ಲದೇ ಇದ್ದರೂ ಬಿಜೆಪಿ ಸರ್ಕಾರ ಹೇಗೆ ಪರೀಕ್ಷೆಯಲ್ಲಿ ಪಾಸ್ ಆಗುತ್ತದೆ ಎನ್ನುವ ಕುತೂಹಲ ಎದ್ದಿತ್ತು. ಆದರೆ ಬೆಳಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಸಂಜೆ 5 ಗಂಟೆಯ ಒಳಗಡೆ ಬಹುಮತ ಸಾಬೀತು ಪಡಿಸಬೇಕೆಂಬ ಆದೇಶ ಪ್ರಕಟವಾಗಿ ಅಜಿತ್ ಪವಾರ್ ರಾಜೀನಾಮೆ ನೀಡಿ ಫಡ್ನವೀಸ್ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಗೊಂಡ ಬಳಿಕ ಬಿಜೆಪಿಯ ಅಧಿಕಾರದ ಕನಸು ಕನಸಾಗಿಯೇ ಉಳಿಯಿತು.

ವಿದ್ಯಮಾನಗಳು ನಡೆದರೂ ಶಾ ಅಭಿಮಾನಿಗಳು ಶಾಣಕ್ಯನನ್ನು ಬಿಟ್ಟುಕೊಡಲು ತಯಾರಿಲ್ಲ. ಈಗ ಅಧಿಕಾರಕ್ಕೆ ಏರದೇ ಇದ್ದರೂ ಕರ್ನಾಟಕದಲ್ಲಿ ಯಡಿಯೂರಪ್ಪ ಸಿಎಂ ಆದಂತೆ ಮುಂದೆ ಫಡ್ನವೀಸ್ ಮುಖ್ಯಮತ್ರಿ ಆಗುತ್ತಾರೆ. ಒಗ್ಗಟ್ಟಾಗಿದ್ದ ಪಕ್ಷವನ್ನು ಬ್ರೇಕ್ ಮಾಡುವುದೇ ಮೊದಲ ಕೆಲಸ. ಈ ಕೆಲಸ ಈಗಾಗಲೇ ಪೂರ್ಣಗೊಂಡಿದೆ. ಇನ್ನು ಶಿವಸೇನೆ ಶಾಸಕರನ್ನು ಮತ್ತು ಎನ್‍ಸಿಪಿ ಶಾಸಕರನ್ನು ಸೆಳೆದು ಪಕ್ಷೇತರರರನ್ನು ಸೆಳೆದರೆ ಕೆಲಸ ಪೂರ್ಣಗೊಳ್ಳುತ್ತದೆ. ಎನ್‍ಸಿಪಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಇಡಿ ರಾಷ್ಟ್ರಕ್ಕೆ ಗೊತ್ತಾಗಿದೆ. ಅಧಿಕಾರ ಮತ್ತು ನೆರವು ವಿಚಾರದಲ್ಲಿ ಬ್ಲಾಕ್‍ಮೇಲ್ ಮಾಡುವ ಪಕ್ಷಕ್ಕೆ ಯಾವತ್ತೂ ಬಗ್ಗಬಾರದು. ಅಂದು ಆಂಧ್ರಪ್ರದೇಶದಕ್ಕೆ ವಿಶೇಷ ಪ್ಯಾಕೇಜ್ ಪ್ರಕಟಿಸದ್ದಕ್ಕೆ ಎನ್‍ಡಿಎ ಒಕ್ಕೂಟವನ್ನು ಬಿಟ್ಟು ಚಂದ್ರಬಾಬು ನಾಯ್ಡು ತೆರಳಿದಾಗಲೂ ಬಿಜೆಪಿ ಬಗ್ಗಲಿಲ್ಲ. ನಂತರ ನಡೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ ಸೋತಿತ್ತು. ಆಗುವುದೆಲ್ಲ ಒಳ್ಳೆಯದು ಮುಂದೆ ಶಿವಸೇನೆಗೂ ಇದೇ ಗತಿ ಆಗಲಿದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ.

Before sleeping:
Uddhav to take oath as CM tomorrow morning.

After Waking Up:
देवेंद्र फडणवीस took oath as the CM of Mahashtra.

Mother of all twist. Anything can happen over a night!

Amit Shah is Chanakya #MaharastraPoliticalCrisis #Devendra4Maharashtra pic.twitter.com/xGHxtHN3HT

— Dhruvil Gajjar (@meggi_07) November 23, 2019

ಶರದ್ ಪವಾರ್ ಚಾಣಕ್ಯ ಯಾಕೆ?
ಬಹುಮತ ಇಲ್ಲದೇ ಇದ್ದ ರಾಜ್ಯಗಳಲ್ಲಿ ಅಮಿತ್ ಶಾ ತಂತ್ರಗಾರಿಕೆ ಉಪಯೋಗಿಸಿ ಬಿಜೆಪಿ ಸರ್ಕಾರ ಬರುವಂತೆ ನೋಡಿಕೊಳ್ಳುತ್ತಿದ್ದರು. ಆದರೆ ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಏರಲು ಬಿಡುವುದಿಲ್ಲ. ಮಹಾರಾಷ್ಟ್ರದಲ್ಲಿ ಅವರು ಏನು ಮ್ಯಾಜಿಕ್ ಮಾಡುತ್ತಾರೋ ನೋಡೇ ಬಿಡೋಣ ಎಂದು ಸವಾಲ್ ಹಾಕಿದ್ದರು. ಈ ಸವಾಲಿನಲ್ಲಿ ಈಗ ಶರದ್ ಪವಾರ್ ಗೆದ್ದಿದ್ದಾರೆ.

With the encouragement of Chanakya

Governors

First take oath to protect the Constitution

Then :

Arunachal
Uttarakhand
Goa
Karnataka

Now :

Maharashtra

Openly violate both the letter and spirit of the Constitution

— Kapil Sibal (@KapilSibal) November 27, 2019

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶಿವಸೇನೆ ಮೈತ್ರಿಕೂಟ ಯಶಸ್ವಿಯಾಗಿ ಒಟ್ಟು 48 ಸ್ಥಾನಗಳ ಪೈಕಿ 41(23+18) ಕ್ಷೇತ್ರಗಳನ್ನು ಗೆದ್ದಾಗ ವಿಧಾನಸಭಾ ಚುನಾವಣೆಯಲ್ಲಿ ಎನ್‍ಸಿಪಿ, ಕಾಂಗ್ರೆಸ್ಸಿಗೆ ಹೀನಾಯ ಸೋಲು ಎಂದು ಮೊದಲೇ ವಿಶ್ಲೇಷಿಸಲಾಗಿತ್ತು. ಆದರೆ ಚುನಾವಣೆಯಲ್ಲಿ ಪವಾರ್ ಏಕಾಂಗಿಯಾಗಿ ಪಕ್ಷವನ್ನು ಮುನ್ನಡೆಸಿ ಮಳೆ ಬಂದರೂ ಭಾಷಣ ಮಾಡಿ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಪರಿಣಾಮ ಎನ್‍ಸಿಪಿ 54 ಸ್ಥಾನವನ್ನು ಗೆದ್ದುಕೊಂಡಿತ್ತು. ಶಿವಸೇನೆ ಬಿಜೆಪಿ ಜೊತೆಗಿನ ಸಂಬಂಧ ಹಳಸಿದ ವಿಚಾರ ತಿಳಿಯುತ್ತಿದ್ದಂತೆ ಶರದ್ ಪವಾರ್ ಕಾಂಗ್ರೆಸ್ ಜೊತೆ ಸೇತುವೆಯಾಗಿ ನಿಂತು ಸರ್ಕಾರ ರಚಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು.

ಸಾಧಾರಣವಾಗಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದರೆ ಪಕ್ಷಗಳು ನಾಯಕರ ವಿರುದ್ಧ ಕ್ರಮಕೈಗೊಳ್ಳುತ್ತಾರೆ. ಆದರೆ ಶಿಷ್ಯ ಅಜಿತ್ ಪವಾರ್ ತನ್ನ ತನ್ನ ವಿರುದ್ಧವೇ ಬಂಡಾಯ ಎದ್ದು ಹೋದರೂ ಯಾವುದೇ ಶಿಸ್ತು ಕ್ರಮ ಕೈಗೊಳ್ಳದೇ ಭಾವನಾತ್ಮಕವಾಗಿ ಮರಳಿ ಪಕ್ಷಕ್ಕೆ ಬರುವಂತೆ ನೋಡಿಕೊಂಡರು. ಈ ಮೂಲಕ ಎಲ್ಲ ಶಾಸಕರನ್ನು ಹಿಡಿದಿಟ್ಟುಕೊಂಡು ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರ ಅಧಿಕಾರಕ್ಕೆ ಬರುವಂತೆ ನೋಡಿಕೊಂಡರು.

You can fool all the people some of the time and some of the people all the time, but you cannot fool all the people all the time ~ Abraham Lincoln

How apt!! #MaharashtraPolitics #BJP#BjpMuktBharat pic.twitter.com/0DzCwZjAm6

— Sahana A (@SahanaA09) November 27, 2019

ಲೋಕಸಭೆ ಚುನಾವಣೆಯ ನಂತರ 2017ರಲ್ಲಿ ಬಿಜೆಪಿ ದೇಶದ ಶೇ.71ರಷ್ಟು ಭಾಗಗಳಲ್ಲಿ ವಿಸ್ತರಿಸಿತ್ತು. ಆದರೆ ಈಗ ಶೇ.40 ರಷ್ಟು ಭಾಗದಲ್ಲಿ ಮಾತ್ರ ಇದೆ. ಮಿತ್ರರ ಮಧ್ಯೆ ಇರುವ ವಿರಸವನ್ನು ಲಾಭ ಮಾಡುವ ಮೂಲಕ ಶರದ್ ಪವಾರ್ ತಮ್ಮ ಚಾಣಕ್ಯ ಬುದ್ಧಿಯನ್ನು ಪ್ರದರ್ಶಿಸಿದ್ದಾರೆ ಎಂದು ಬಿಜೆಪಿ ವಿರೋಧಿ ಅಭಿಮಾನಿಗಳು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡುತ್ತಿರುವ ಬಿಜೆಪಿ ಅಭಿಮಾನಿಗಳು ಶಿವಸೇನೆಯ ಈಗ ಅಧಿಕಾರಕ್ಕೆ ಏರಿರಬಹುದು. ಆದರೆ ಮುಂದೆ ಖಂಡಿತ ಸರ್ವನಾಶವಾಗುತ್ತದೆ. ಲೋಕಸಭೆ ಚುನಾವಣೆಯಲ್ಲಿ 2014ರಲ್ಲಿ ಬಿಜೆಪಿ 282 ಸ್ಥಾನಗಳನ್ನು ಏಕಾಂಗಿಯಾಗಿ ಗೆದ್ದಿದ್ದರೆ 2019ರಲ್ಲಿ 303 ಸ್ಥಾನಗಳನ್ನು ಗೆದ್ದುಕೊಂಡಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೆ ಬಿಜೆಪಿಗೆ ಸ್ಪಷ್ಟವಾದ ಬಹುಮತ ಸಿಗುತಿತ್ತು. ಮೈತ್ರಿ ಧರ್ಮ ಪಾಲನೆ ಮಾಡಿದ ಶಿವಸೇನೆ ಈಗ ಕೈಕೊಟ್ಟಿದೆ ಎಂದು ತಿರುಗೇಟು ನೀಡುತ್ತಿದ್ದಾರೆ.

ಚಾಣಕ್ಯ ಷಾ…ನಾ ನಂಬಿ
ದೇವೇಂದ್ರ ಫಡ್ನವೀಸ್
ಹೊಗೆ ಹಾಕಿಸಿಕೊಂಡಾಯಿತು…

🤩🤩…ಇಷ್ಟೇ ಆಗಿದ್ದು… https://t.co/tgNelYJbut

— ಪ್ರಿಯದರ್ಶಿನಿಗೌಡ (@arpriyagowda) November 27, 2019

ಬಿಹಾರದಲ್ಲಿ ಮಹಾಘಟಬಂಧನ್ ಒಡೆದು ಜೆಡಿಯು ಜೊತೆ ಮೈತ್ರಿ, ಜಮ್ಮು ಕಾಶ್ಮೀರದಲ್ಲಿ ಪಿಡಿಪಿ ಜೊತೆ ಸರ್ಕಾರ, ಗೋವಾದಲ್ಲಿ ಬಹುಮತ ಇಲ್ಲದೇ ಇದ್ದರೂ ಸರ್ಕಾರ, ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಅಲೆ ಕೊನೆಗೆ ಕರ್ನಾಟಕದಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆ ನೀಡಿ ಸರ್ಕಾರ ರಚಿಸಿದ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ಈಗ ಅಧಿಕಾರ ಸಿಗದೇ ಇದ್ದರೂ ಮುಂದಿನ ವರ್ಷಗಳಲ್ಲಿ ಅಧಿಕಾರಕ್ಕೆ ಖಂಡಿತವಾಗಿಯೂ ಏರುತ್ತದೆ ಎಂದು ಬಿಜೆಪಿ ಅಭಿಮಾನಿಗಳು ಹೇಳುತ್ತಿದ್ದಾರೆ. ಬಿಜೆಪಿ ವಿರೋಧಿಗಳು ಕೆಲವೊಮ್ಮೆ ವೈರಿಗಳನ್ನು ಮಣಿಸಬೇಕಾದರೆ ಸಿದ್ಧಾಂತದಲ್ಲಿ ರಾಜಿಯಾಗಬೇಕು. ರಾಜಿಯಾದ ತಕ್ಷಣ ಸಿದ್ಧಾಂತವನ್ನು ಪೂರ್ಣವಾಗಿ ಮರೆಯುವುದಲ್ಲ. ಸಿಕ್ಕಿದ ಅಧಿಕಾರವನ್ನು ಬಳಸಿಕೊಂಡು ವೈರಿಯನ್ನು ಮಟ್ಟ ಹಾಕುವುದೇ ಚಾಣಕ್ಯ ನೀತಿ. ಈ ತಂತ್ರಗಾರಿಕೆಯನ್ನು ಶರದ್ ಪವಾರ್ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡು ಬಿಜೆಪಿಯ ದಕ್ಷಿಣ ಭಾರತದ ಓಟಕ್ಕೆ ಬ್ರೇಕ್ ಹಾಕಿದ್ದಾರೆ ಎಂದು ತಿರುಗೇಟು ನೀಡುತ್ತಿದ್ದಾರೆ.

ಒಟ್ಟಿನಲ್ಲಿ ಈಗ ಮಹಾರಾಷ್ಟ್ರ ಸರ್ಕಾರ ರಚನೆಯಾದ ಬಳಿಕ ನಿಜವಾದ ಚಾಣಕ್ಯ ಯಾರು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದ್ದು ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ಅಭಿಪ್ರಾಯ ತಿಳಿಸಿ.

He picked a kid from a street and made him Chandragupta, to fight the most powerful dynasty of his time

He put everything he had, on stake, to bring glory to his motherland

He gave everything he had, to nation but never asked anything in return

Truly, everyone isn't #Chanakya. https://t.co/S8J5YYsikP pic.twitter.com/X2FzIgJtQd

— Rahul Kaushik (@kaushkrahul) November 27, 2019

TAGGED:Amit ShahChanakyaelectionsmaharashtrasharad pawarಅಮಿತ್ ಶಾಎನ್‍ಸಿಪಿಕಾಂಗ್ರೆಸ್ಚಾಣಕ್ಯಬಿಜೆಪಿಮಹಾರಾಷ್ಟ್ರಶರದ್ ಪವಾರ್ಶಿವಸೇನೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Shivam Dube
Cricket

6 ಸಿಕ್ಸ್‌, 4 ಬೌಂಡರಿ, 2 ವಿಕೆಟ್‌ – ದುಬೆ ಸ್ಫೋಟಕ ಆಟ, ಭಾರತಕ್ಕೆ 17 ರನ್‌ಗಳ ಜಯ

Public TV
By Public TV
36 minutes ago
KSRTC
Bengaluru City

ಬೆಂಗಳೂರು ಚಲೋ ನಡೆಯುತ್ತೆ, ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿ: ಸಂಘಟನೆ ಮನವಿ

Public TV
By Public TV
1 hour ago
Nelamangala Crime
Bengaluru City

ಕತ್ತು ಹಿಸುಕಿ ವೃದ್ಧೆಯ ಹತ್ಯೆ – ಚಿನ್ನಾಭರಣ ದೋಚಿ ಆರೋಪಿಗಳು ಎಸ್ಕೇಪ್

Public TV
By Public TV
1 hour ago
Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
1 hour ago
devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
2 hours ago
Guru Raghavendra
Districts

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?