Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಿಹಾರದಲ್ಲಿ ಮಹಾರಾಷ್ಟ್ರ ಮಾದರಿ – ಮತ್ತೆ ಬಿಜೆಪಿ ಬೆಂಬಲಿಸ್ತಾರಾ ನಿತೀಶ್ ಕುಮಾರ್?

Public TV
Last updated: July 5, 2023 12:17 pm
Public TV
Share
3 Min Read
Nitish Kumar
SHARE

ನವದೆಹಲಿ: ಮಹಾರಾಷ್ಟ್ರದ (Maharashtra) ರಾಜಕೀಯ ಕ್ಷಿಪ್ರ ಬೆಳವಣಿಗೆಯಲ್ಲಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ ನೀಡಿ ಉಪ ಮುಖ್ಯಮಂತ್ರಿಯಾದ ಬಳಿಕ ದೇಶದಲ್ಲಿ ಹೊಸ ರಾಜಕೀಯ ಚರ್ಚೆ ಶುರುವಾಗಿದೆ. ಹಲವು ರಾಜ್ಯಗಳಲ್ಲಿ ಇದೇ ರೀತಿಯ ಬೆಳವಣಿಗೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಮಹಾರಾಷ್ಟ್ರದ ಬೆನ್ನಲ್ಲೇ ಬಿಹಾರದಲ್ಲೂ (Bihar) ಇದೇ ರೀತಿಯ ಬೆಳವಣಿಗೆಯಾಗಬಹುದು ಎನ್ನಲಾಗುತ್ತಿದೆ. ಬಿಜೆಪಿ (BJP) ಸಾಂಗತ್ಯ ಬಿಟ್ಟು ಆರ್‌ಜೆಡಿ  (RJD) ಜೊತೆಗೂಡಿ ಸರ್ಕಾರ ರಚಿಸಿರುವ ಜೆಡಿಯು (JDU)ಮುಖ್ಯಸ್ಥ, ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಮತ್ತೆ ಕಮಲದ ಕೈ ಹಿಡಿಯಬಹುದು ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಹಲವು ಬೆಳವಣಿಗೆ ನಡೆದಿವೆ.

Nitish Kumar

ಅಮಿತ್ ಶಾ ಮೃದು ಧೋರಣೆ:
ನಿತೀಶ್ ಕುಮಾರ್ ಬಿಜೆಪಿಯಿಂದ ದೂರವಾದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ 10 ತಿಂಗಳಲ್ಲಿ 5 ಬಾರಿ ಬಿಹಾರಕ್ಕೆ ಭೇಟಿ ನೀಡಿದ್ದಾರೆ. ಪ್ರತಿ ಸಂದರ್ಭದಲ್ಲೂ ಅವರು ನಿತೀಶ್ ಕುಮಾರ್ ಅವರನ್ನು ತಮ್ಮ ಭಾಷಣಗಳಲ್ಲಿ ಕಟುವಾಗಿ ಟೀಕಿಸಿದರು. ಅವರಿಗೆ ಬಿಜೆಪಿಯ ಬಾಗಿಲು ಶಾಶ್ವತವಾಗಿ ಮುಚ್ಚಲ್ಪಟ್ಟಿದೆ ಎಂದು ಘೋಷಿಸಿದರು.

ಆದರೆ, ಜೂನ್ 29 ರಂದು ಬಿಹಾರದ ಲಖಿಸರಾಯ್‌ಗೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ನಿತೀಶ್ ಕುಮಾರ್ ಅವರ ಬಗ್ಗೆ ಒಂದೇ ಒಂದು ಟೀಕೆ ಮಾಡಲಿಲ್ಲ ಅಥವಾ ಬಿಜೆಪಿಯ ಬಾಗಿಲು ಅವರಿಗೆ ಮುಚ್ಚಿದೆ ಎಂಬ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿಲಿಲ್ಲ. ಬದಲಿಗೆ ಭ್ರಷ್ಟಾಚಾರವನ್ನು ಎತ್ತಿ ತೋರಿಸುವುದರ ಮೂಲಕ ನಿತೀಶ್ ಕುಮಾರ್ ಅವರ ಆತ್ಮಸಾಕ್ಷಿಯನ್ನು ಪ್ರಚೋದಿಸಲು ಅಮಿತ್ ಶಾ ಪ್ರಯತ್ನಿಸಿದರು. 20 ಲಕ್ಷ ಕೋಟಿ ರೂ. ಹೆಚ್ಚು ಮೊತ್ತದ ಹಗರಣಗಳ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಗಳೊಂದಿಗೆ ನಿತೀಶ್ ಮೈತ್ರಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು.

Amit Shah 1 1

ಅಮಿತ್ ಶಾ ಅವರ ಮೃದು ಧೋರಣೆ ಮೂಲಕ ನಿತೀಶ್ ಕುಮಾರ್‌ಗೆ ಮತ್ತೊಮ್ಮೆ ಮಣೆ ಹಾಕಲು ಬಿಜೆಪಿ ಭ್ರಷ್ಟಾಚಾರವನ್ನು ಕೇಂದ್ರಬಿಂದುವಾಗಿ ಬಳಸಿಕೊಳ್ಳಬಹುದು ಎಂಬ ಊಹಾಪೋಹಗಳು ಬಿಹಾರದ ರಾಜಕೀಯ ವಲಯಗಳಲ್ಲಿ ಹೊರಹೊಮ್ಮಲು ಪ್ರಾರಂಭವಾಗಿದೆ.

ಏಕಾಏಕಿ ಶಾಸಕರ ಸಭೆ:
ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಪಕ್ಷದ ಶಾಸಕರ ಜೊತೆಗೆ ಏಕಾಏಕಿ ಸಭೆ ನಡೆಸಿದ್ದಾರೆ. ಅಮಿತ್ ಶಾ ಅವರು ಲಖಿಸರಾಯ್‌ಗೆ ಭೇಟಿ ನೀಡುವ 2 ದಿನಗಳ ಮೊದಲು ತಮ್ಮ ಎಲ್ಲಾ ಶಾಸಕರೊಂದಿಗೆ ಒಂದರ ಮೇಲೊಂದು ಸಭೆಗಳನ್ನು ನಡೆಸಲು ಪ್ರಾರಂಭಿಸಿದರು. ಈ ಸಭೆಗಳಲ್ಲಿ ನಿತೀಶ್ ಕುಮಾರ್ ಅವರು ತಮ್ಮ ಶಾಸಕರಿಂದ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಲಿಸಿದರು.

Nitish Kumar

ಮೂಲಗಳ ಪ್ರಕಾರ ನಿತೀಶ್ ಕುಮಾರ್ ಅವರು ತಮ್ಮ ಶಾಸಕರನ್ನು ಒಗ್ಗಟ್ಟಾಗಿಡುವುದು ಮತ್ತು ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಸಂದೇಶ ರವಾನಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಇಷ್ಟು ಮಾತ್ರವಲ್ಲದೇ ಪಕ್ಷದೊಳಗೆ ವಿಭಜನೆಯ ಭೀತಿ ನಿತೀಶ್ ಕುಮಾರ್ ಶಾಸಕರೊಂದಿಗಿನ ವೈಯಕ್ತಿಕ ಸಭೆಗಳನ್ನು ನಡೆಸಲು ಕಾರಣವಾಗಿದ್ದು, ಅವರು ಶಾಸಕರ ಮನಸ್ಥಿತಿ ಅರಿಯುವ ಪ್ರಯತ್ನವನ್ನೂ ಮಾಡುತ್ತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಹೊಲ ಉತ್ತಿ, ಬೀಜ ಬಿತ್ತಿ, ಬೆವರು ಹೊಳೆ ಹರಿಸಿ ಡಿಕೆಶಿ ಲೂಲೂ ಮಾಲ್ ಕಟ್ಟಿದ್ರಾ? – ಕಾಂಗ್ರೆಸ್‌ಗೆ ಜೆಡಿಎಸ್ ಕೌಂಟರ್

ಪಾಟ್ನಾ ಸಭೆಯ ನಂತರ ಆರ್‌ಜೆಡಿ ನಾಯಕರ ಅತೃಪ್ತಿ:
ಜೂನ್ 23 ರಂದು ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ನಡೆದ ಬಳಿಕ ಆರ್‌ಜೆಡಿಯಲ್ಲಿ ಬಂಡಾಯ ಶುರುವಾಗಿದೆ. ನಿತೀಶ್ ಕುಮಾರ್ ಪ್ರಧಾನಿ ಅಭ್ಯರ್ಥಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಡಿಸಿಎಂ ತೇಜಸ್ವಿಯಾದವ್‌ಗೆ ಅವಕಾಶ ನೀಡಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಈ ಸ್ಥಾನವನ್ನು ಬಿಟ್ಟು ಕೊಡಲು ನಿತೀಶ್ ಕುಮಾರ್ ಸಿದ್ಧವಿಲ್ಲ. ಈ ಹಿನ್ನೆಲೆ ಜೆಡಿಯು, ಆರ್‌ಜೆಡಿ ನಡುವೆ ಸಣ್ಣ ಮಟ್ಟದ ತಿಕ್ಕಾಟ ಶುರುವಾಗಿದೆ.

ಮಹಾರಾಷ್ಟ್ರದಲ್ಲಿ ನಡೆದ ಭಾರೀ ರಾಜಕೀಯ ನಾಟಕದ ಬಳಿಕ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಸುಶೀಲ್ ಮೋದಿ ಟ್ವೀಟ್‌ನಲ್ಲಿ ಇದೇ ರೀತಿಯ ಪರಿಸ್ಥಿತಿ ಬಿಹಾರದಲ್ಲೂ ಸಂಭವಿಸಬಹುದು ಎಂದು ಹೇಳಿದ್ದಾರೆ. ಶೀಘ್ರದಲ್ಲೇ ಜೆಡಿಯುನಲ್ಲಿಯೂ ಒಡಕು ಉಂಟಾಗಬಹುದು ಎಂದು ಸುಶೀಲ್ ಮೋದಿ ಹೇಳಿಕೊಂಡಿದ್ದು, ಇಂತಹ ವಿಭಜನೆಯ ಭೀತಿಯಿಂದ ನಿತೀಶ್ ಕುಮಾರ್ ತಮ್ಮ ಶಾಸಕರೊಂದಿಗೆ ಪ್ರತ್ಯೇಕ ಚರ್ಚೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದೆ. ಈ ನಡುವೆ ನಿತೀಶ್ ಕುಮಾರ್ ವಿಪಕ್ಷಗಳ ನೇತೃತ್ವ ವಹಿಸಿಕೊಂಡಿರುವ ಹಿನ್ನೆಲೆ ಅವರ ಮುಂದಿನ ನಡೆ ಏನಿರಬಹುದು ಎಂದು ತೀವ್ರ ಕುತೂಹಲದಿಂದ ಎದುರು ನೋಡಲಾಗುತ್ತಿದೆ. ಇದನ್ನೂ ಓದಿ: ವರ್ಗಾವಣೆ ಆರೋಪದ ಬೆನ್ನಲ್ಲೇ ಆಪ್ತರಿಗೆ ಸಿಎಂ ಸೂಚನೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

TAGGED:Biharbjpjdunitish kumarrjdಆರ್‍ಜೆಡಿಜೆಡಿಯುನಿತೀಶ್ ಕುಮಾರ್ಬಿಜೆಪಿಬಿಹಾರ
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
3 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
11 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
13 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
14 hours ago

You Might Also Like

k ashraf
Dakshina Kannada

ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

Public TV
By Public TV
5 minutes ago
Corona Virus
Belgaum

ಬೆಳಗಾವಿಯಲ್ಲಿ ಕೊರಾನಾಗೆ ಮೊದಲ ಬಲಿ

Public TV
By Public TV
13 minutes ago
Naveen Kumar
Crime

ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

Public TV
By Public TV
48 minutes ago
Omar Abdullah
Latest

ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

Public TV
By Public TV
55 minutes ago
virat kohli shreyas iyer 2
Cricket

ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

Public TV
By Public TV
1 hour ago
Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?